“2024ರಲ್ಲಿ ಕೇರಳದಿಂದ ರಾಹುಲ್ ಗೆದ್ದರೆ ಮೋದಿಗೆ ಅವಕಾಶ ಕೊಟ್ಟಂತೆ’
Team Udayavani, Jan 18, 2020, 11:36 PM IST
ಕಲ್ಲಿಕೋಟೆ: ಕೇರಳದ ವಯನಾಡ್ನಿಂದ ಲೋಕಸಭೆ ಸದಸ್ಯರನ್ನಾಗಿ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಿ ಜನರು ಅತಿ ದೊಡ್ಡ ತಪ್ಪು ಮಾಡಿದ್ದಾರೆ ಎಂದು ಇತಿಹಾಸಕಾರ ರಾಮಚಂದ್ರ ಗುಹಾ ಹೇಳಿದ್ದಾರೆ.
ನಿರಂತರ ವಾಗಿ ದೇಶದ ರಾಜಕೀಯ ವ್ಯವಸ್ಥೆಯಲ್ಲಿ ದುಡಿಯುತ್ತಿರುವ ಮತ್ತು ಸ್ವಯಂ ವ್ಯಕ್ತಿತ್ವ ರೂಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಎದುರು ರಾಹುಲ್ಗೆ ಅವಕಾಶವೇ ಇಲ್ಲವೆಂದಿದ್ದಾರೆ.
ಕಲ್ಲಿಕೋಟೆ ಸಾಹಿತ್ಯ ಉತ್ಸವ ದಲ್ಲಿ ಶುಕ್ರವಾರ ಮಾತನಾಡಿದ ಅವರು, “ಐದನೇ ತಲೆಮಾರಿನ ರಾಹುಲ್ ಗಾಂಧಿಯವರಿಗೆ ನರೇಂದ್ರ ಮೋದಿಯವರ ಎದುರು ಅವಕಾಶವೇ ಇಲ್ಲ. ಸ್ವಾತಂತ್ರ್ಯ ಹೋರಾಟದ ವೇಳೆ ಕಾಂಗ್ರೆಸ್ ಅತ್ಯುತ್ತಮವಾಗಿತ್ತು. ಈಗ ಅದು ಕುಟುಂಬವೊಂದು ನಡೆಸುವ ಸಂಸ್ಥೆಯಾಗಿದೆ.
ರಾಹುಲ್ ವಿರುದ್ಧ ನನಗೆ ವೈಯಕ್ತಿಕ ದ್ವೇಷವೇನೂ ಇಲ್ಲ. ಅವರೊಬ್ಬ ಉತ್ತಮ ವ್ಯಕ್ತಿ. ದೇಶದ ಯುವ ಜನತೆ ಐದನೇ ತಲೆಮಾರಿನ ನಾಯಕನನ್ನು ಬಯ ಸುವುದಿಲ್ಲ. 2024ರ ಲೋಕಸಭೆ ಚುನಾವಣೆಯಲ್ಲಿ ಮಲಯಾಳಿ ಗರು ಮತ್ತೆ ಅವರನ್ನು ಆಯ್ಕೆ ಮಾಡಿದರೆ ನರೇಂದ್ರ ಮೋದಿಯ ವರಿಗೆ ಮತ್ತೆ ಅವಕಾಶ ನೀಡಿದಂತೆ ಆಗುತ್ತದೆ’ ಎಂದು ಹೇಳಿದ್ದಾರೆ.
ಮೋದಿಯವರಿಗೆ 15 ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಅನುಭವ ಇದೆ. ಅವರು ಐರೋಪ್ಯ ದೇಶಗಳಿಗೆ ಒಂದು ದಿನ ಕೂಡ ರಜೆಯಲ್ಲಿ ತೆರಳಿದ್ದೇ ಇಲ್ಲ. ಈ ಎಲ್ಲ ಅಂಶಗಳನ್ನು ಗಂಭೀರವಾಗಿಯೇ ಮಂಡಿಸುತ್ತಿರುವುದಾಗಿ ಗುಹಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ