ಕೇರಳದ ವೈದ್ಯೆ ಹತ್ಯೆ ಖಂಡಿಸಿ ಪ್ರತಿಭಟನೆ: ತುರ್ತು ಸಭೆ
Team Udayavani, May 12, 2023, 8:10 AM IST
ತಿರುವನಂತಪುರ: ಕೇರಳದಲ್ಲಿ ವೈದ್ಯೆ ಹತ್ಯೆಯನ್ನು ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗಳು ತೀವ್ರಗೊಂಡಿರುವ ಬೆನ್ನಲ್ಲೇ ವೈದ್ಯರು ಹಾಗೂ ಆರೋಗ್ಯ ಕಾರ್ಯಕರ್ತರ ರಕ್ಷಣೆಗೆ ಕೈಗೊಳ್ಳ ಬೇಕಾದ ಕ್ರಮಗಳ ಕುರಿತು ರಾಜ್ಯ ಸರಕಾರ ಗುರುವಾರ ತುರ್ತು ಸಭೆ ನಡೆಸಿದೆ.
ವಂದನಾ ದಾಸ್ ಹತ್ಯೆ ಖಂಡಿಸಿ ಪ್ರತಿಭಟನೆ ನಡೆಸಿರುವ ಹಿನ್ನೆಲೆ ಕಳೆದ 24 ಗಂಟೆಯಿಂದ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಅಡೆತಡೆ ಉಂಟಾಗಿತ್ತು. ಅಲ್ಲದೇ ಆರೋಗ್ಯ ಕಾರ್ಯಕರ್ತರ ರಕ್ಷಣೆಗಾಗಿ ಹೊಸ ಕಾನೂನು ರೂಪಿಸು ವಂತೆ ಕೂಗು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಎಂ ಪಿಣರಾಯಿ ವಿಜಯನ್ ಕಚೇರಿಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಹಾಗೂ ಆರೋಗ್ಯ ಕಾರ್ಯದರ್ಶಿ ವಿ.ಪಿ. ಜಾಯ್ ಹಾಗೂ ಕಾನೂನು ಮತ್ತು ವೈದ್ಯಕೀಯ ಶಿಕ್ಷಣ ಕಾರ್ಯದರ್ಶಿಗಳ ಸಮ್ಮುಖದಲ್ಲಿ ಸಭೆ ನಡೆಸಲಾಗಿದೆ. ನೂತನ ಕಾನೂನು ರಚನೆ ಕುರಿತು ಚರ್ಚಿಸಲಾಗಿದೆ ಎಂದು ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ