ಆನೆ ಪಟಾಕಿ ಹಣ್ಣು ಸೇವಿಸಿದ್ದು ಆಕಸ್ಮಿಕ? ; ಕೇಂದ್ರ ಪರಿಸರ ಸಚಿವಾಲಯ ಅಭಿಪ್ರಾಯ
Team Udayavani, Jun 9, 2020, 6:30 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ : ಕೇರಳದ ಪಾಲಕ್ಕಾಡ್ನಲ್ಲಿ ಅಮಾನವೀಯವಾಗಿ ಹತ್ಯೆಗೀಡಾದ ಗರ್ಭಿಣಿ ಆನೆ ಆಕಸ್ಮಿಕವಾಗಿ ಪಟಾಕಿ ತುಂಬಿದ ಹಣ್ಣನ್ನು ಸೇವಿಸಿರಬಹುದು ಎಂದು ಕೇಂದ್ರ ಪರಿಸರ ಸಚಿವಾಲಯ ಅಭಿಪ್ರಾಯಪಟ್ಟಿದೆ.
‘ಆನೆಗೆ ಉದ್ದೇಶಪೂರ್ವಕವಾಗಿ ಪಟಾಕಿ ತುಂಬಿದ ಹಣ್ಣನ್ನು ನೀಡಲಾಗಿಲ್ಲ. ತೋಟಗಳಿಗೆ ಕಾಡುಹಂದಿಗಳು ಬರದಂತೆ ತಡೆಯಲು ರೈತರು ಅಕ್ರಮವಾಗಿ ಪಟಾಕಿ ತುಂಬಿದ ಹಣ್ಣನ್ನು ಜಮೀನಿನ ಅಂಚಿನಲ್ಲಿ ಇಡುತ್ತಾರೆ.
ಆನೆ ಇದನ್ನು ಆಕಸ್ಮಿಕವಾಗಿ ಸೇವಿಸಿರಬಹುದು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ’ ಎಂದು ಸಚಿವಾಲಯ ತಿಳಿಸಿದೆ. “ಕೇರಳ ಸರಕಾರದೊಂದಿಗೆ ನಾವು ನಿರಂತರ ಸಂಪರ್ಕದಲ್ಲಿದ್ದೇವೆ. ಪ್ರಕರಣ ಸಂಬಂಧ ಒಬ್ಬ ಆರೋಪಿಯನ್ನು ಬಂಧಿಸಲಾಗಿದ್ದು, ತನಿಖೆ ಇನ್ನೂ ನಡೆಯುತ್ತಿದೆ. ಆರೋಪಿಯನ್ನು ತಡವಾಗಿ ಬಂಧಿಸಿರುವುದಕ್ಕೆ ಕಾರಣವನ್ನೂ ತಿಳಿಯುತ್ತಿದ್ದೇವೆ’ ಎಂದು ಹೇಳಿದೆ.
ಎನ್ಜಿಟಿ ಸಮಿತಿ ರಚನೆ: ಗರ್ಭಿಣಿ ಆನೆ ಹತ್ಯೆಯ ಸಂಬಂಧ ರಾಷ್ಟ್ರೀಯ ಹಸಿರು ನ್ಯಾಯ ಮಂಡಳಿ (ಎನ್ಜಿಟಿ) ಸತ್ಯಾಸತ್ಯತೆ ಕಲೆಹಾಕಲು ಸ್ವಯಂ ಪ್ರೇರಿತವಾಗಿ ಸಮಿತಿಯನ್ನು ರಚಿಸಿದೆ. ಘಟನೆ ಕುರಿತು ಸಮಿತಿ ಶೀಘ್ರವೇ ವರದಿ ಸಲ್ಲಿಸಲಿದೆ.
‘ಮಾನವ ಮತ್ತು ವನ್ಯಜೀವಿ ಸಂಘರ್ಷ ಕಡಿಮೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ. ಪಾಲಕ್ಕಾಡ್ ಜಿಲ್ಲಾಧಿಕಾರಿ ಸೇರಿದಂತೆ, ಕೇರಳದ ವಿವಿಧ ವಿಭಾಗಗಳ ಅರಣ್ಯಾಧಿಕಾರಿಗಳು ಈ ಸಮಿತಿಯಲ್ಲಿರುತ್ತಾರೆ’ ಎಂದು ಎನ್ಜಿಟಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್ ನಲ್ಲಿ ಬಂಧನ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Lok Sabha Election; ಕೇಜ್ರಿವಾಲ್ ಸೆರೆ ಆಪ್ಗೆ ವರವೇ? ಶಾಪವೇ?
Patanjali; ತಪ್ಪು ಜಾಹೀರಾತಿನ ಗಾತ್ರದಲ್ಲೇ ಕ್ಷಮೆ ಕೇಳಿ: ರಾಮದೇವ್ ಗೆ ಸುಪ್ರೀಂ