ಕೇರಳ ಪ್ರವಾಹ; 20 ಸಾವಿರ ಕೋಟಿ ನಷ್ಟ, 27ಸಾವಿರ ಮನೆ, 134 ಸೇತುವೆ ನಾಶ


Team Udayavani, Aug 20, 2018, 5:19 PM IST

fllods.jpg

ತಿರುವನಂತಪುರಂ: ಶತಮಾನದ ಮಹಾಮಳೆಯಿಂದ ಸಂಭವಿಸಿದ ಪ್ರವಾಹದಿಂದ ದೇವರ ನಾಡು ಕೇರಳದಲ್ಲಿ ಬರೋಬ್ಬರಿ 15ರಿಂದ 20 ಸಾವಿರ ಕೋಟಿ ರೂಪಾಯಿಯಷ್ಟು ನಷ್ಟವಾಗಿದೆ ಎಂದು ವಾಣಿಜ್ಯೋದ್ಯಮಿಗಳ ಮಹಾಸಂಘ ಅಸೋಚಾಮ್ ತಿಳಿಸಿದೆ.

ಆಗಸ್ಟ್ 8ರಿಂದ 15ರವರೆಗೆ ಕೇರಳ ರಾಜ್ಯ ಧಾರಾಕಾರ ಮಳೆಗೆ ತತ್ತರಿಸಿ ಹೋಗಿತ್ತು. ರಾಜ್ಯದ ಸುಮಾರು 37 ಡ್ಯಾಂಗಳ ಗೇಟ್ ಗಳನ್ನು ತೆರೆಯಲಾಗಿತ್ತು. ಮಳೆ, ಪ್ರವಾಹದಿಂದ ಕೇರಳದಲ್ಲಿ 361 ಮಂದಿ ಸಾವನ್ನಪ್ಪಿದ್ದರು. ಸುಮಾರು 10 ಲಕ್ಷ ಮಂದಿ ನಿರಶ್ರಿತರ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ.

ಅಸೋಚಾಮ್ ವರದಿ ಪ್ರಕಾರ, ಶತಮಾನ ಕಂಡು ಕೇಳರಿಯದ ಪ್ರವಾಹಕ್ಕೆ ಕೇರಳ ಅಪಾರ ಪ್ರಮಾಣದ ಹಾನಿಗೊಳಗಾಗಿದೆ. ಇದನ್ನು ಸರಿಪಡಿಸಲು ಕೆಲವು ತಿಂಗಳುಗಳ ಅಗತ್ಯವಿದೆ. ಅದರಲ್ಲೂ ಪ್ರವಾಸೋದ್ಯಮ, ಬೆಳೆಗಳು, ಬಂದರು ಪ್ರದೇಶದ ವ್ಯಾಪಾ ವಹಿವಾಟು ಲಕ್ಷಾಂತರ ಜನರ ಬದುಕಿಗೆ ಕೊಳ್ಳಿ ಇಟ್ಟಿದೆ.

ಕೇರಳ ಪ್ರಮುಖವಾಗಿ ಪ್ರವಾಸೋದ್ಯಮ, ಭತ್ತ, ಕಾಳುಮೆಣಸು, ಏಲಕ್ಕಿ, ಟೀ, ಕಾಫಿ, ಕೊಬ್ಬರಿ ಸೇರಿದಂತೆ ಕೃಷಿಯಿಂದ 8 ಲಕ್ಷ ಕೋಟಿ ತಲಾ ಆದಾಯವನ್ನು(ಜಿಎಸ್ ಟಿ-ಗ್ರಾಸ್ ಡೊಮೆಸ್ಟಿಕ್ ಪ್ರಾಡಕ್ಟ್) ಹೊಂದಿದೆ. ಅಲ್ಲದೇ ವಾಣಿಜ್ಯ-ವಹಿವಾಟಿನ ಜೀವನಾಡಿಯಾದ ಕೊಚ್ಚಿ ಬಂದರು ಸೇರಿದಂತೆ ರಾಜ್ಯದ ಬಹುತೇಕ ಪ್ರದೇಶಗಳು ಮಳೆಯಿಂದ ಅಪಾರ ನಷ್ಟ ಅನುಭವಿಸಿದೆ ಎಂದು ಅಸೋಚಾಮ್ ಹೇಳಿದೆ.

27 ಸಾವಿರ ಮನೆ ನಾಶ;

ಮಳೆ ಮತ್ತು ಪ್ರವಾಹದಿಂದ ಕೇರಳದಲ್ಲಿ 27 ಸಾವಿರ ಮನೆಗಳು ನಾಶವಾಗಿದೆ. ಸುಮಾರು 45 ಸಾವಿರ ಎಕರೆಯಷ್ಟು ಕೃಷಿಭೂಮಿ ಜಲಾವೃತಗೊಂಡು ಹಾಳಾಗಿದೆ. 134 ಸೇತುವೆ ಹಾಗೂ ಪಿಡಬ್ಯುಡಿಯ 16 ಸಾವಿರ ಕಿಲೋ ಮೀಟರ್ ರಸ್ತೆ ಹಾಗೂ ಸ್ಥಳೀಯ 82 ಸಾವಿರ ಕಿಲೋ ಮೀಟರ್ ರಸ್ತೆ ಸಂಪೂರ್ಣವಾಗಿ ನಾಶವಾಗಿ ಹೋಗಿದೆ ಎಂದು ವಿವರಿಸಿದೆ.

ಮೂಲಭೂತ ಸೌಕರ್ಯಗಳಾದ ರಸ್ತೆ, ವಿದ್ಯುತ್ ಕಂಬ, ಬ್ರಾಡ್ ಬ್ಯಾಂಡ್ ಕೇಬಲ್, ಸೇತುವೆಗಲ ಮರು ನಿರ್ಮಾಣಕ್ಕೆ ತುಂಬಾ ಸಮಯವೇ ತೆಗೆದುಕೊಳ್ಳಲಿದೆ. ಮನೆಗಳ ಪುನರ್ ನಿರ್ಮಾಣಕ್ಕೆ ತಿಂಗಳುಗಟ್ಟಲೇ ಬೇಕಾಗಲಿದೆ ಎಂದು ವರದಿ ತಿಳಿಸಿದೆ.

ಪ್ರವಾಸೋದ್ಯಮ ಮತ್ತು ಕ್ಯಾಶ್ ಕ್ರಾಪ್ ಕೇರಳಿಗರ ಜೀವನಾಡಿ. ಇವೆರಡೂ ಸಂಪೂರ್ಣವಾಗಿ ನಾಶವಾಗಿ ಬಿಟ್ಟಿದೆ. ಇದು ದೀರ್ಘಕಾಲದ ನಷ್ಟವಾಗಿದ್ದು, ಲಕ್ಷಾಂತರ ಜನರ ಬದುಕಿಗೆ ಹೊಡೆತ ನೀಡಿದೆ ಎಂದು ವಿವರಿಸಿದೆ.

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

Singapore ಏರ್‌ ಲೈನ್ಸ್‌ ಪೈಲಟ್ ನಂತೆ ಪೋಸ್‌ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.