ಮಳೆ, ಪ್ರವಾಹಕ್ಕೆ ಅಂಕಪಟ್ಟಿ ನಾಶ; ಮನನೊಂದ ವಿದ್ಯಾರ್ಥಿ ಆತ್ಮಹತ್ಯೆ
Team Udayavani, Aug 20, 2018, 2:03 PM IST
ತಿರುವನಂತಪುರಂ: ದೇವರನಾಡು ಕೇರಳದಲ್ಲಿ ವರುಣನ ಅಬ್ಬರಕ್ಕೆ ಸಾವಿರಾರು ಮಂದಿ ನಿರಾಶ್ರಿತರಾಗಿ, ನೂರಾರು ಜನರು ಪ್ರಾಣ ಕಳೆದುಕೊಂಡಿದ್ದರೆ, ಮತ್ತೊಂದೆಡೆ ದ್ವಿತೀಯ ಪಿಯುಸಿಯ ಸರ್ಟಿಫಿಕೇಟ್ ಮಳೆಗೆ ನಾಶವಾಗಿ ಹೋಗಿದ್ದರಿಂದ ಮನನೊಂದ 19 ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ.
ಮಳೆಯ ಅಬ್ಬರಕ್ಕೆ ಕೋಝಿಕೋಡ್ ಜಿಲ್ಲೆಯ ಕಾರ್ನಾತ್ತೂರ್ ನ ತಗ್ಗುಪ್ರದೇಶದಲ್ಲಿದ್ದ ಮನೆ ಸಂಪೂರ್ಣ ಜಲಾವೃತವಾಗಿತ್ತು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕೈಲಾಶ್ ಹಾಗೂ ತಂದೆ, ತಾಯಿ ನಿರಾಶ್ರಿತರ ಶಿಬಿರಕ್ಕೆ ತೆರಳಿದ್ದರು.
ಕೈಲಾಶ್ ಐಐಟಿ(ಇಂಡಸ್ಟ್ರೀಯಲ್ ಟ್ರೈನಿಂಗ್ ಇನ್ಸಿಟಿಟ್ಯೂಟ್)ಯಲ್ಲಿ ಪ್ರವೇಶ ಸಿಕ್ಕಿತ್ತು. ಹೊಸ ಬಟ್ಟೆಗಳನ್ನೂ ಖರೀದಿಸಿದ್ದ. ಆದರೆ ಮಳೆ ಆತನ ಕನಸನ್ನೆಲ್ಲಾ ನುಚ್ಚು ನೂರು ಮಾಡಿದೆ.
ಭಾನುವಾರ ಕೈಲಾಶ್ ಮನೆಗೆ ಆಗಮಿಸಿದ್ದ..ಜಲಾವೃತಗೊಂಡಿದ್ದರಿಂದ ಮನೆಯಲ್ಲಿದ್ದ ವಸ್ತುಗಳೆಲ್ಲಾ ನೀರಿಗೆ ಆಹುತಿಯಾಗಿದ್ದವು. ಅದರಲ್ಲಿ ಕೈಲಾಶ್ ನ ದ್ವಿತೀಯ ಪಿಯುಸಿ ಅಂಕಪಟ್ಟಿ ಕೂಡಾ ನಾಶವಾಗಿ ಹೋಗಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದ. ತದನಂತರ ಕೈಲಾಶ್ ನೇಣಿಗೆ ಶರಣಾಗಿದ್ದ.
ಪ್ರವಾಹದ ನೀರು ತಗ್ಗಿದ್ದರಿಂದ ಮನೆಯನ್ನು ಸ್ವಚ್ಚಗೊಳಿಸಲು ಕೈಲಾಶ್ ತಂದೆ, ತಾಯಿ ಬಮದಾಗ ಆತ ಆತ್ಮಹತ್ಯೆ ಮಾಡಿಕೊಂಡಿರುವುದು ಗಮನಕ್ಕೆ ಬಂದಿತ್ತು. ತಮ್ಮ ಮಗ ನೇತಾಡುತ್ತಿರುವುದನ್ನು ಕಂಡು ಪೋಷಕರು ಆಘಾತಕ್ಕೊಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅವರ ಬದುಕಿಗೆ ಆಧಾರವಾಗಿದ್ದ ಮಗನ ಸಾವು ಪೋಷಕರನ್ನು ಕಂಗೆಡಿಸಿತ್ತು. ಅವರ ಆಧಾರ್ ಕಾರ್ಡ್, ರೇಷನ್ ಹಾಗೂ ಎಲ್ಲಾ ದಾಖಲೆ ಪತ್ರಗಳು ನಾಶವಾಗಿ ಹೋಗಿದ್ದವು. ನಾವು ಮಾತ್ರ ಬದುಕಿಕೊಂಡಿದ್ದೇವೆ ಎಂದು ಕೈಲಾಶ್ ಪೋಷಕರು ಅಲವತ್ತುಕೊಂಡಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!