ಕೇರಳ ಮಹಾಮಳೆ, ಪ್ರವಾಹ ರುದ್ರನರ್ತನ; ಸಾವಿನ ಸಂಖ್ಯೆ 167ಕ್ಕೆ ಏರಿಕೆ
Team Udayavani, Aug 17, 2018, 1:54 PM IST
ತಿರುವನಂತಪುರಂ:ಶತಮಾನದ ಮಹಾಮಳೆಗೆ ದೇವರ ನಾಡು ಕೇರಳ ನಲುಗಿ ಹೋಗಿದ್ದು, ಸಾವಿನ ಸಂಖ್ಯೆ 167ಕ್ಕೆ ಏರಿದೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ಬೆಳಗ್ಗೆ ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ದೂರವಾಣಿ ಕರೆ ಮಾಡಿ ಸಂಜೆ ಮಳೆ ಮತ್ತು ಪ್ರವಾಹ ಪರಿಸ್ಥಿತಿ ವೀಕ್ಷಣೆಗಾಗಿ ರಾಜ್ಯಕ್ಕೆ ಆಗಮಿಸುವುದಾಗಿ ತಿಳಿಸಿದ್ದಾರೆ.
ರಾಜ್ಯದ ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿ ಅವರು ಪಿಣರಾಯಿ ಜೊತೆ ಚರ್ಚೆ ನಡೆಸಿದ್ದಾರೆ. ಅಲ್ಲದೇ ರಕ್ಷಣಾ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಕೂಡಾ ಮಾಹಿತಿ ಪಡೆದಿರುವುದಾಗಿ ವರದಿ ವಿವರಿಸಿದೆ. ಮಳೆಯ ಪ್ರಮಾಣ ಶುಕ್ರವಾರ ಸ್ವಲ್ಪ ಇಳಿಮುಖವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ನಿನ್ನೆ ಮುನ್ಸೂಚನೆ ನೀಡಿತ್ತು.
ತ್ರಿಶ್ಶೂರ್, ಅಲೂವಾ ಹಾಗೂ ಮೂವಾಟ್ಟುಫುಝಾದಲ್ಲಿ ಪ್ರವಾಹಕ್ಕೆ ಸಿಲುಕಿರುವ ಮನೆಯ ಮೇಲೆ ಜನರು ಕುಳಿತಿರುವ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ. ಭಾರತೀಯ ನೌಕಾದಳದ ಸಿಬ್ಬಂದಿಗಳು ಜನರ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದೆ. ಪರಿಸ್ಥಿತಿ ತುಂಬಾ ಹದಗೆಟ್ಟಿರುವುದರಿಂದ ಜನರ ರಕ್ಷಣೆಗೆ ಇನ್ನಷ್ಟು ನೆರವಿನ ಅಗತ್ಯವಿದೆ ಎಂದು ಸಿಎಂ ಪಿಣರಾಯಿ ವಿಜಯನ್ ಪ್ರಧಾನಿ ಮೋದಿ ಅವರಲ್ಲಿ ವಿನಂತಿಸಿಕೊಂಡಿದ್ದಾರೆ. ಇನ್ನಷ್ಟು ಹೆಚ್ಚಿನ ಹೆಲಿಕಾಪ್ಟರ್ ಹಾಗೂ ಹೆಚ್ಚುವರಿ ಯೋಧರ ಅಗತ್ಯವಿದೆ ಎಂದು ಪಿಣರಾಯಿ ಮನವಿ ಮಾಡಿಕೊಂಡಿದ್ದಾರೆ. ಕೇರಳದ ಇತಿಹಾಸದಲ್ಲಿಯೇ ಮೊದಲ ಬಾರಿಗೆ 39 ಡ್ಯಾಂಗಳ ಪೈಕಿ 35 ಡ್ಯಾಂಗಳ ಗೇಟ್ ಗಳನ್ನು ತೆರೆಯಲಾಗಿದೆ ಎಂದು ವರದಿ ತಿಳಿಸಿದೆ.
ಪ್ರವಾಹ ಪರಿಸ್ಥಿತಿ ಹಿನ್ನೆಲೆಯಲ್ಲಿ ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಸ್ಟ್ 26ರವರೆಗೆ ಬಂದ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Spirit of humanity seen at kerala during this rain. Long live humanity, long live india. pic.twitter.com/zpvVkjHn72
— Shreeraam (@PatrioticIndia3) August 15, 2018
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ