ಉಪವಾಸ ಮಾಡಿದ ಕೇರಳದ ರಾಜ್ಯಪಾಲ!
Team Udayavani, Jul 15, 2021, 7:44 AM IST
ತಿರುವನಂತಪುರ: ವರದಕ್ಷಿಣೆ ಪಿಡುಗು ಮತ್ತು ಮಹಿಳೆಯರ ಮೇಲಿನ ದೌರ್ಜನ್ಯದ ವಿರುದ್ಧ ಸಾರ್ವಜನಿಕರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಕೇರಳದ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಬುಧವಾರ ತಿರುವನಂತಪುರದಲ್ಲಿ ಒಂದು ದಿನದ ಉಪವಾಸ ನಡೆಸಿದರು.
ಸಾಮಾಜಿಕ ಕಳಕಳಿ ಹೊಂದಿ, ಅದಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ದಕ್ಷಿಣ ಭಾರತದ ರಾಜ್ಯವೊಂದರ ರಾಜ್ಯಪಾಲರೊಬ್ಬರು ಇದೇ ಮೊದಲ ಬಾರಿಗೆ ಉಪವಾಸ ನಡೆಸಿದ್ದಾರೆ. ಬೆಳಗ್ಗೆ 8 ಗಂಟೆಯಿಂದ ಸಂಜೆ 6ರವರೆಗೆ ರಾಜ್ಯಪಾಲರು ಉಪವಾಸ ನಡೆಸಿದ್ದಾರೆ. ಬಳಿಕ ತಿರುವನಂತಪುರದ ಗಾಂಧಿ ಭವನದಲ್ಲಿ ಪ್ರಾರ್ಥನಾ ಸಭೆಯಲ್ಲೂ ಭಾಗವಹಿಸಿದರು.
ರಾಜ್ಯಪಾಲರ ಕ್ರಮಕ್ಕೆ ಬಿಜೆಪಿ ಮುಖಂಡ, ವಿದೇಶಾಂಗ ಖಾತೆ ಸಹಾಯಕ ಸಚಿವ ವಿ.ಮುರಳೀಧರನ್ ಬೆಂಬಲ ವ್ಯಕ್ತಪಡಿಸಿದ್ದಾರೆ. “ಕೇರಳದ ಬಾಲಕಿಯರು, ಮಹಿಳೆಯರ ಸುರಕ್ಷತೆಗೋಸ್ಕರ ರಾಜ್ಯಪಾಲರು ನಡೆಸುತ್ತಿರುವ ಉಪವಾಸಕ್ಕೆ ಬೆಂಬಲವಿದೆ’ ಎಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಕೆ.ಸುಧಾಕರನ್ ಪ್ರತಿಕ್ರಿಯೆ ನೀಡಿ, ರಾಜ್ಯ ಸರಕಾರ ಮಹಿಳೆಯರನ್ನು ರಕ್ಷಿಸಲು ವಿಫಲವಾದ್ದರಿಂದಲೇ ರಾಜ್ಯಪಾಲರು ಉಪವಾಸ ನಡೆಸಬೇಕಾಯಿತು ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ