ನನ್ನ ಹತ್ಯೆಗೆ ಪ್ರಯತ್ನ ನಡೆದಿತ್ತು: ಕೇರಳ ರಾಜ್ಯಪಾಲ ಆರಿಫ್ ಖಾನ್ ಆಕ್ರೋಶ
ಕಮ್ಯುನಿಸ್ಟ್ ಸರಕಾರದ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ ರಾಜ್ಯಪಾಲರು
Team Udayavani, Sep 17, 2022, 4:16 PM IST
ಕೊಚ್ಚಿ : ”ಕಣ್ಣೂರಿನಲ್ಲಿ ನನ್ನ ಮೇಲೆ ದೈಹಿಕ ದಾಳಿ ಮಾಡಲು ಯತ್ನಿಸಲಾಗಿತ್ತು, ಅದು ಪಿತೂರಿ.ಭಾರತದ ಹೊರಗೆ ಹುಟ್ಟಿಕೊಂಡ ಕೆಲವು ಸಿದ್ಧಾಂತಗಳು ತಮ್ಮ ರಾಜಕೀಯ ಉದ್ದೇಶಗಳನ್ನು ಸಾಧಿಸಲು ಬಲವನ್ನು ಬಳಸಲಾಗುತ್ತಿದೆ” ಎಂದು ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಆಕ್ರೋಶ ಹೊರ ಹಾಕಿದ್ದಾರೆ.
”3 ವರ್ಷಗಳ ಹಿಂದೆ ಕಣ್ಣೂರಿನಲ್ಲಿ ನನ್ನ ಕೊಲೆ ಪ್ರಯತ್ನ ನಡೆದಿತ್ತು. ಪೊಲೀಸರು ಪ್ರಕರಣ ದಾಖಲಿಸದಂತೆ ತಡೆದಿದ್ದು ಯಾರು? ಗೃಹ ಇಲಾಖೆಯನ್ನು ಹಿಡಿದವರು ಯಾರು? ನೀವು ರಾಜ್ಯಪಾಲರ ಕಚೇರಿಯನ್ನು ಕೀಳಾಗಿ ಕಾಣಲು ಪ್ರಯತ್ನಿಸುತ್ತಿದ್ದೀರಿ. ನನ್ನ ಮೇಲೆ ಒತ್ತಡ ಹೇರಲು, ನನ್ನನ್ನು ಹೆದರಿಸಲು ಪ್ರಯತ್ನಿಸಲು ನೀವು ಎಲ್ಲಾ ತಂತ್ರಗಳನ್ನು ಪ್ರಯತ್ನಿಸಿದ್ದೀರಿ” ಎಂದು ಎಡ ಪಕ್ಷಗಳ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: ಇಂಜಿನಿಯರ್ ಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ: ಸಚಿವ ಸೋಮಶೇಖರ್ ತರಾಟೆ
”ವಿಶ್ವವಿದ್ಯಾನಿಲಯ ಕಾನೂನು ತಿದ್ದುಪಡಿ ಮಸೂದೆ” ಕುರಿತು ಮಾತನಾಡಿ, ”ಎಲ್ಲವನ್ನೂ ಅರ್ಹತೆಯ ಮೇಲೆ ಪರಿಗಣಿಸಲಾಗುವುದು. ಉಪಕುಲಪತಿಗಳನ್ನು ನಿರ್ವಹಿಸುವ ಅಧಿಕಾರವನ್ನು ಸರ್ಕಾರಕ್ಕೆ ನೀಡಲಾಗುವುದಿಲ್ಲ. ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ, ಇದು ಕಾರ್ಯನಿರ್ವಾಹಕ ಹಸ್ತಕ್ಷೇಪಕ್ಕೆ ಕಾರಣವಾಗುತ್ತದೆ” ಎಂದು ರಾಜ್ಯಪಾಲರು ಹೇಳಿದರು.
”ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಭರವಸೆ ನೀಡಿ ಸಿಎಂ ನನಗೆ ಪತ್ರ ಬರೆದಿದ್ದಾರೆ ಮತ್ತು ಈಗ ಅವರು ಉಪಕುಲಪತಿಯನ್ನು ನೇಮಿಸುವುದಾಗಿ ಪ್ರಸ್ತಾಪಿಸುತ್ತಿದ್ದಾರೆ. ಇದು ಶಿಕ್ಷಣ ಸಂಸ್ಥೆಗಳ ಸ್ವಾಯತ್ತತೆಯ ಅಧಃಪತನವನ್ನು ಅರ್ಥೈಸುತ್ತದೆ. ನಾನಿಲ್ಲಿ ಇರುವವರೆಗೂ ವಿಶ್ವವಿದ್ಯಾನಿಲಯಗಳ ಸ್ವಾಯತ್ತತೆಯ ಅಧಃಪತನಕ್ಕೆ ಅವಕಾಶ ನೀಡುವುದಿಲ್ಲ” ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Amit Shah: 2024ರ ಚುನಾವಣೆಯಲ್ಲಿ ಎನ್ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ