ಮದ್ಯ ಪಡೆಯಲು ವಿಶೇಷ ಪಾಸ್ ವಿತರಿಸುವ ಆದೇಶ ಹೊರಡಿಸಿದ ಕೇರಳ; ವೈದ್ಯರ ಸಂಘದಿಂದ ಆಕ್ಷೇಪ
21 ದಿನಗಳ ಲಾಕ್ ಡೌನ್ ಘೋಷಿಸಿರುವ ಸಂದರ್ಭದಲ್ಲಿ ಮದ್ಯ ವ್ಯಸನಿಗಳಿಗೆ ಮದ್ಯ ಸರಬರಾಜು ಮಾಡುವುದು ಸರಿಯಲ್ಲ ಎಂದು ತಿಳಿಸಿದೆ.
Team Udayavani, Mar 31, 2020, 1:37 PM IST
ತಿರುವನಂತಪುರಂ:ಮದ್ಯ ವ್ಯಸನ ತೊರೆಯುವ ಮೊದಲಿನ ಖಿನ್ನತೆ (ವಿತ್ ಡ್ರಾವಲ್ ಸಿಂಪ್ಟಮ್ಸ್) ಕಾಣಿಸಿಕೊಂಡಿದ್ದು, ಈ ಬಗ್ಗೆ ವೈದ್ಯರ ಲಿಖಿತ ಚೀಟಿ ಇದ್ದರೆ ಅಬಕಾರಿ ಇಲಾಖೆಯಲ್ಲಿ ಮದ್ಯ ಖರೀದಿಸಬಹುದಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ.
ಸೋಮವಾರ ರಾತ್ರಿ ಈ ಬಗ್ಗೆ ಕೇರಳ ಸರ್ಕಾರ ಆದೇಶ ಹೊರಡಿಸಿದ್ದು, ವೈದ್ಯರ ಅಸೋಸಿಯೇಷನ್ ಇದಕ್ಕೆ ತೀವ್ರ ಆಕ್ಷೇಪವ್ಯಕ್ತಪಡಿಸಿದೆ. ಕೋವಿಡ್ 19 ತಡೆಗಟ್ಟುವ ನಿಟ್ಟಿನಲ್ಲಿ 21 ದಿನಗಳ ಲಾಕ್ ಡೌನ್ ಘೋಷಿಸಿರುವ ಸಂದರ್ಭದಲ್ಲಿ ಮದ್ಯ ವ್ಯಸನಿಗಳಿಗೆ ಮದ್ಯ ಸರಬರಾಜು ಮಾಡುವುದು ಸರಿಯಲ್ಲ ಎಂದು ತಿಳಿಸಿದೆ.
ಕೇರಳ ಸರ್ಕಾರ ಹೊರಡಿಸಿದ ಆದೇಶದಲ್ಲಿ, ಮದ್ಯ ತೊರೆಯುವ ಮೊದಲಿನ ಖಿನ್ನತೆಗೆ ಒಳಗಾಗಿರುವ ವ್ಯಕ್ತಿ ದೈಹಿಕ ಮತ್ತು ಮಾನಸಿಕ ಸಮಸ್ಯೆಯ ಲಕ್ಷಣ ಕಂಡುಬಂದಲ್ಲಿ ಅಂತಹ ವ್ಯಕ್ತಿಗೆ ಮದ್ಯ ನೀಡಲೇಬೇಕು ಎಂಬುದಾಗಿದ್ದರೆ. ಅಂತಹ ಖಿನ್ನತೆಯಿಂದ ಬಳಲುತ್ತಿದ್ದರೆ
ಅವರು ಸಾರ್ವಜನಿಕ ಆರೋಗ್ಯ ಕೇಂದ್ರಕ್ಕೆ, ಜಿಲ್ಲಾ ಆಸ್ಪತ್ರೆಗೆ, ತಾಲೂಕು ಆಸ್ಪತ್ರೆಗೆ ತೆರಳಿ ವೈದ್ಯರ ಬಳಿ ಪರೀಕ್ಷಿಸಿ ಲಿಖಿತವಾಗಿ ಮದ್ಯ ಸೇವನೆ ಅಗತ್ಯತೆ ಬಗ್ಗೆ ಬರೆದುಕೊಟ್ಟಿದ್ದರೆ ಮದ್ಯ ನೀಡಲಾಗುವುದು ಎಂದು ತಿಳಿಸಿದೆ.
ಮದ್ಯವ್ಯಸನದ ಖಿನ್ನತೆಯಿಂದ ಬಳಲುತ್ತಿರುವ ಬಗ್ಗೆ ವೈದ್ಯರು ಪ್ರಿಸ್ ಕ್ರಿಪ್ಶನ್ ಕೊಟ್ಟಲ್ಲಿ ಅಂತಹವರಿಗೆ ನಿಗದಿತ ಪ್ರಮಾಣದಲ್ಲಿ ಮದ್ಯನೀಡಲಾಗುವುದು ಎಂದು ಸರ್ಕಾರದ ಆದೇಶದಲ್ಲಿ ವಿವರಿಸಿದೆ. ಪ್ರಿಸ್ ಕ್ರಿಪ್ಶನ್ ಅನ್ನು ಸ್ಥಳೀಯ ಅಬಕಾರಿ ಕಚೇರಿಗೆ ನೀಡಬೇಕು, ಅದರ
ಜತೆಗೆ ಸರ್ಕಾರ ನೀಡಿರುವ ಗುರುತಿನ ಚೀಟಿ ತೆಗೆದುಕೊಂಡು ಹೋದಲ್ಲಿ ಮದ್ಯ ಪಡೆಯುವ ಪಾಸ್ ನೀಡುತ್ತಾರೆ. ನಂತರ ಆ ಪಾಸ್ ಅನ್ನು ಬೇವರೇಜಸ್ ಕಾರ್ಪೋರೇಶನ್ ಆಡಳಿತ ನಿರ್ದೇಶಕರಿಗೆ ನೀಡಬೇಕು. ಬಳಿಕ ಅವರು ಮದ್ಯ ಸರಬರಾಜು ಮಾಡುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುತ್ತಾರೆ ಎಂದು ಆದೇಶದಲ್ಲಿ ವಿವರಿಸಿದೆ. ಆದರೆ ಇದಕ್ಕಾಗಿ ಮದ್ಯದ ಅಂಗಡಿಗಳನ್ನು ತೆರೆಯುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ