Kerala; ವಿದ್ಯಾರ್ಥಿ ಸಾವು ಕೇಸ್: ಪಶುವೈದ್ಯಕೀಯ ವಿವಿ ವಿಸಿ ಅಮಾನತು ಮಾಡಿದ ಗವರ್ನರ್
ವಯನಾಡ್ ಘಟನೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು...
Team Udayavani, Mar 2, 2024, 4:56 PM IST
ವಯನಾಡ್ : ಕೇರಳದ ವಯನಾಡ್ನಲ್ಲಿರುವ ಪಶುವೈದ್ಯಕೀಯ ಮತ್ತು ಪ್ರಾಣಿ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿಯೊಬ್ಬನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ವಿಶ್ವವಿದ್ಯಾನಿಲಯಗಳ ಕುಲಪತಿಯಾಗಿರುವ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಶನಿವಾರ ಉಪಕುಲಪತಿಯನ್ನು ಅಮಾನತುಗೊಳಿಸಿದ್ದಾರೆ.
ಫೆಬ್ರವರಿ 18 ರಂದು ನಡೆದ 20 ವರ್ಷದ ಸಿದ್ಧಾರ್ಥನ್ ಜೆ.ಎಸ್.ಸಾವಿನ ಘಟನೆಯ ಕುರಿತು ವಿಸಿ ಪ್ರೊ.ಡಾ.ಎಂ ಆರ್ ಶಶೀಂದ್ರ ನಾಥ್ ಅವರು ನೀಡಿದ ವರದಿಯು “ಉಪ ಕುಲಪತಿಗಳ ಕಡೆಯಿಂದ ಕರ್ತವ್ಯ ಲೋಪಕ್ಕೆ ಸಾಕ್ಷಿಯಾಗಿದೆ” ಎಂದು ಅಮಾನತು ಆದೇಶದಲ್ಲಿ ಖಾನ್ ಹೇಳಿದ್ದಾರೆ.
“ವಿಸಿ ಅವರ ಕರ್ತವ್ಯ ಮತ್ತು ಜವಾಬ್ದಾರಿಗಳ ಬಗ್ಗೆ ಅಸಡ್ಡೆ, ನಿರ್ಲಕ್ಷ್ಯ ಮತ್ತು ನಿಷ್ಠುರ ವರ್ತನೆ, ವಿಶೇಷವಾಗಿ ಈ ಅಹಿತಕರ ಘಟನೆಯ ಹಿನ್ನೆಲೆಯಲ್ಲಿ ಫೆಬ್ರವರಿ 28 ರ ಅವರ ವರದಿಯಿಂದ ಬಹಿರಂಗವಾಗಿದೆ” ಎಂದು ರಾಜ್ಯಪಾಲರು ಹೇಳಿದ್ದು, ವಿದ್ಯಾರ್ಥಿಯ ಸಾವಿನ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ನ ಹಾಲಿ ಅಥವಾ ನಿವೃತ್ತ ನ್ಯಾಯಾಧೀಶರಿಂದ ತನಿಖೆಗೆ ಸೂಚಿಸಿದ್ದಾರೆ.
ಸಿದ್ಧಾರ್ಥನ್ ಫೆಬ್ರವರಿ 18 ರಂದು ಹಾಸ್ಟೆಲ್ನ ಸ್ನಾನಗೃಹದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದ. ಆತನನ್ನು ಕೆಲವು ಸ್ಥಳೀಯ ಎಸ್ಎಫ್ಐ ಮುಖಂಡರು ಮತ್ತು ಕಾರ್ಯಕರ್ತರು ಹೊಡೆದು ಹತ್ಯೆಗೈದಿದ್ದಾರೆ ಎಂದು ಕಾಲೇಜು ಸಹಪಾಠಿಗಳು ಹೇಳಿದ್ದರು ಎಂದು ಪೋಷಕರು ಹೇಳಿದ್ದರು. ಘಟನೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿತ್ತು.
ಆಡಳಿತಾರೂಢ ಸಿಪಿಐ(ಎಂ) ನ ವಿದ್ಯಾರ್ಥಿ ಘಟಕ ಎಸ್ಎಫ್ಐ ಮೇಲೆ ಮಾಡಿದ್ದ ಆರೋಪ ವಿಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಹೋರಾಟಕ್ಕಿಳಿಯಲು ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
MUST WATCH
ಹೊಸ ಸೇರ್ಪಡೆ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
Godrej: ಜನಪ್ರಿಯ ಗೋದ್ರೆಜ್ ಸಮೂಹ ಇಬ್ಭಾಗ: ಜಮ್ಶೆಡ್, ನಾದಿರ್ ನೂತನ ಮುಖ್ಯಸ್ಥರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ