ಶಬರಿಮಲೆ: ಸಾಮಗ್ರಿ ಸಾಗಣೆಗೆ ಸಮಯ ನಿಗದಿ
Team Udayavani, Dec 17, 2021, 7:20 AM IST
ಕಾಸರಗೋಡು: ಶಬರಿ ಮಲೆ ಅಯ್ಯಪ್ಪ ದೇಗುಲಕ್ಕೆ ಪ್ರಸಾದ ಮತ್ತು ಅನ್ನದಾನಕ್ಕೆ ಬೇಕಾಗುವ ಸಾಮಗ್ರಿಗಳನ್ನು ತೆಗೆದುಕೊಂಡು ಹೋಗುವ ಟ್ರ್ಯಾಕ್ಟರ್ಗಳ ಸಂಚಾರಕ್ಕೆ ಸಮಯ ಮಿತಿ ನಿಗದಿ ಮಾಡಿ ಕೇರಳ ಹೈಕೋರ್ಟ್ ಗುರುವಾರ ಆದೇಶ ಹೊರಡಿಸಿದೆ.
ಆದರೆ ಅವು ಭಕ್ತರು ನಡೆದುಕೊಂಡು ಹೋಗುವ ದಾರಿಯಲ್ಲಿ ನಿಧಾನವಾಗಿ ಸಂಚರಿಸುವಂತೆ ಮಾಡಬೇಕು. ಈ ಬಗ್ಗೆ ಪೊಲೀಸರು ಮುತುವರ್ಜಿ ವಹಿಸ ಬೇಕು ಎಂದು ಸೂಚಿಸಿದೆ. ಸೋಮ ವಾರ ದಿಂದ ಗುರುವಾರದ ವರೆಗೆ ಬೆಳಗ್ಗೆ 10.30ರಿಂದ ಸಂಜೆ 4ರ ವರೆಗೆ, ರಾತ್ರಿ 10ರಿಂದ ಬೆಳಗ್ಗೆ 3ರ ವರೆಗೆ ಈ ಟ್ರ್ಯಾಕ್ಟರ್ಗಳ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಜತೆಗೆ ದೈನಿಕ ಪೂಜಾವಿಧಿಗಳಿಗಾಗಿ ಪೂಜಾ ಸಾಮಗ್ರಿಗಳನ್ನು ಪ್ರತೀ ದಿನ ಬೆಳಗ್ಗೆ 5ರಿಂದ 7ರ ವರೆಗೆ ಒಯ್ಯಲು ಹೈಕೋರ್ಟ್ ಅನುಮತಿ ಕೊಟ್ಟಿದೆ.
ಈ ಹಿಂದೆ ಡಿ. 10ರಂದು ಆದೇಶ ನೀಡಿದ್ದ ಹೈಕೋರ್ಟ್, ತಿರುವಾಂಕೂರು ದೇವಸ್ವಂ ಮಂಡಳಿಯದ್ದಲ್ಲದ ಸರಕು ಸಾಗಣೆ ಟ್ರ್ಯಾಕ್ಟರ್ಗಳು ಪಂಬಾದಿಂದ ಸನ್ನಿಧಾನಕ್ಕೆ ಮಧ್ಯರಾತ್ರಿ 12ರಿಂದ ರಾತ್ರಿ 3ರ ವರೆಗೆ ಮಾತ್ರ ಸಂಚರಿಸಬೇಕು ಎಂಬ ತನ್ನ 2017 ನವೆಂಬರ್ನ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಸೂಚಿಸಿತ್ತು. ಇದನ್ನು ಸಡಿಲಿಸಬೇಕು ಎಂದು ದೇವಸ್ವಂ ಮಂಡಳಿ ಮತ್ತು ಜಾಗೃತ ಅಧಿಕಾರಿ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…
Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
MUST WATCH
ಹೊಸ ಸೇರ್ಪಡೆ
Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ
Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ
BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ