ಶಬರಿಮಲೆ ಭಕ್ತರ ನಿಯಂತ್ರಣಕ್ಕೆ ಕೇರಳ ಹೈಕೋರ್ಟ್ ಸಲಹೆ
Team Udayavani, Dec 12, 2022, 6:45 AM IST
ಕೊಚ್ಚಿ: ಶಬರಿಮಲೆಯಲ್ಲಿ ಸ್ವಾಮಿ ಅಯ್ಯಪ್ಪನ ದರ್ಶನಕ್ಕೆ ದಿನೇ ದಿನೆ ಭಕ್ತರ ಸಂಖ್ಯೆ ಏರಿಕೆಯಾಗುತ್ತಲೇ ಇದೆ. ಯಾತ್ರಾರ್ಥಿಗಳಿಗೆ ಸುಗುಮ ದರ್ಶನಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಜನಸಂದಣಿ ನಿಯಂತ್ರಣಕ್ಕೆ ಹಾಗೂ ವಾಹನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಕೇರಳ ಹೈಕೋರ್ಟ್ ರವಿವಾರ ದೇಗುಲದ ಆಡಳಿತಕ್ಕೆ ಹಲವು ನಿರ್ದೇಶನಗಳನ್ನು ನೀಡಿದೆ.
ನ. 17ರಿಂದ ಆರಂಭವಾದ ಮಂಡಲ ಮಕರವಿಳಕ್ಕು ಯಾತ್ರೆಗೆ ಭಕ್ತರು ಸಾವಿರಾರು ಸಂಖ್ಯೆಯಲ್ಲಿ ಆಗಮಿಸು ತ್ತಿದ್ದಾರೆ. ಶನಿವಾರ ಒಂದೇ ದಿನ ಬರೋಬ್ಬರಿ 90,000ಕ್ಕೂ ಹೆಚ್ಚು ಭಕ್ತರು ದೇವರ ದರ್ಶನ ಪಡೆದರು. ಜನಸಂದಣಿ ನಿಯಂತ್ರಣ ಸಮಯದಲ್ಲಿ ಕೆಲವು ಪೊಲೀಸರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದವು.
ವಿಚಾರಣೆ ವೇಳೆ ಈ ಮಾಹಿತಿ ಪಡೆದ ಕೇರಳ ಹೈಕೋರ್ಟ್, ಜನಸಂದಣಿ ನಿರ್ವಹಣೆ ಯೋಜನೆ ರೂಪಿಸುವಂತೆ ಜಿಲ್ಲಾ ಆಡಳಿತಕ್ಕೆ ಸೂಚಿಸಿದೆ. ಅಲ್ಲದೇ ಈಗ ದಿನಕ್ಕೆ 18 ಗಂಟೆ ದೇವರ ದರ್ಶನಕ್ಕೆ ಅವಕಾಶವಿದೆ. ಹೆಚ್ಚುವರಿಯಾಗಿ 30 ನಿಮಿಷ ಅಥವಾ 1 ಗಂಟೆ ದರ್ಶನಕ್ಕೆ ಅವಕಾಶ ಮಾಡಿಕೊಡಲು ಸಾಧ್ಯವಿದೆಯೇ ಎಂಬುದರ ಬಗ್ಗೆ ಪರಿಶೀಲಿಸುವಂತೆ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ