100 ಜನರ ಪ್ರಾಣ ಉಳಿಸಿದ್ದ! ಆತ ಜೀವ ಉಳಿಸಿ ಎಂದು ಅಂಗಲಾಚಿ ಪ್ರಾಣಬಿಟ್ಟ


Team Udayavani, Oct 3, 2018, 3:18 PM IST

kerala.jpg

ತಿರುವನಂತಪುರಂ:ಮಹಾಮಳೆ, ಪ್ರವಾಹದಲ್ಲಿ ಕೇರಳ ತತ್ತರಿಸಿ ಹೋಗಿದ್ದ ಸಂದರ್ಭದಲ್ಲಿ ಕೊಳಚೆ ನೀರಿನ್ನೂ ಲೆಕ್ಕಿಸದೇ ತನ್ನ ಜೀವದ ಹಂಗು ತೊರೆದು ಜಿನೇಶ್ ನೂರಾರು ಜನರ ಪ್ರಾಣ ಉಳಿಸಿದ್ದ. ಈ ಯುವಕನ ಸಾಹಸದ ವಿಡಿಯೋ ತುಣುಕು, ಪತ್ರಿಕೆಯಲ್ಲಿನ ವರದಿಗಳ ಮೂಲಕ ಹೀರೋ ಆಗಿಬಿಟ್ಟಿದ್ದ. ಆದರೆ ವಿಪರ್ಯಾಸ ಏನೆಂದರೆ ನೂರಾರು ಮಂದಿ ಪ್ರಾಣ ಉಳಿಸಿದ್ದ ಜಿನೇಶ್ ಅಪಘಾತವಾಗಿ ಸಹಾಯಕ್ಕಾಗಿ ಅಂಗಲಾಚಿಯೇ ಪ್ರಾಣಬಿಟ್ಟಿರುವ ವಿಷಯ ಬಹಿರಂಗವಾಗಿದೆ.

ಭಾನುವಾರ ಜಿನೇಶ್ ಹೊರಹೋಗಿದ್ದ ವೇಳೆ ಮನೆಯಿಂದ ಸುಮಾರು 12 ಕಿಮೀ ದೂರದ ಹೆದ್ದಾರಿಯಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಆತನ ಸೊಂಟದ ಭಾಗದ ಮೇಲೆ ಲಾರಿ ಹತ್ತಿದ್ದರಿಂದ ಸಹಾಯಕ್ಕಾಗಿ ಅಂಗಲಾಚುತ್ತಿದ್ದ ಎಂದು ಜಿನೇಶ್ ಗೆಳೆಯ ಜಗನ್ ಟೈಮ್ಸ್ ಆಫ್ ಇಂಡಿಯಾ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.

ಜಿನೇಶ್ ಮತ್ತು ಜಗನ್ ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ಅಪಘಾತ ಸಂಭವಿಸಿದ್ದು, ಲಾರಿಗೆ ಆ ಕ್ಷಣಕ್ಕೆ ಬ್ರೇಕ್ ಹಾಕಲು ಸಾಧ್ಯವಾಗದೇ ರಸ್ತೆ ಮೇಲೆ ಬಿದ್ದಿದ್ದ ಜಿನೇಶ್ ಮೈಮೇಲೆ ಹರಿದು ಹೋಗಿತ್ತು ಎಂದು ವಿವರಿಸಿದ್ದಾರೆ.

24ರ ಹರೆಯದ ಜಿನೇಶ್ ರಕ್ಷಿಸಿ, ರಕ್ಷಿಸಿ ಎಂದು ಗೋಗರೆದಿದ್ದ. ಆದರೆ ಬೇರೆಯವರಿಗೆ ಸಹಾಯ ಮಾಡಬೇಕೆಂದು ಸದಾ ತುಡಿಯುತ್ತಿದ್ದ ಜಿನೇಶ್ ಗೆ ಇಂತಹ ಸ್ಥಿತಿ ಬರುತ್ತೆ ಎಂಬುದನ್ನು ನನ್ನಿಂದ ನಂಬಲು ಸಾಧ್ಯವಾಗುತ್ತಿಲ್ಲ. ಚೆಂಗನ್ನೂರ್ ನಲ್ಲಿಯೇ ಪ್ರವಾಹದಲ್ಲಿ ಸಿಲುಕಿದ್ದ ನೂರಕ್ಕೂ ಅಧಿಕ ಜನರನ್ನು ಜಿನೇಶ್ ಪ್ರಾಣದ ಹಂಗು ತೊರೆದು ರಕ್ಷಿಸಿದ್ದ. ಆತ ತನ್ನ ಜೀವ ಉಳಿಸಿ ಎಂದು ಬೇಡಿಕೊಂಡರೂ ಯಾರೊಬ್ಬರೂ ಸಹಾಯಕ್ಕೆ ಬಂದಿರಲಿಲ್ಲ ಎಂದು ಗೆಳೆಯ ಜಗನ್ ಮಾಹಿತಿ ನೀಡಿದ್ದಾರೆ.

ಸುಮಾರು 30 ನಿಮಿಷಗಳ ನಂತರ ಆ್ಯಂಬುಲೆನ್ಸ್ ಬಂದಿತ್ತು. ಕೂಡಲೇ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೂ ಚಿಕಿತ್ಸೆ ನೀಡಿದರೂ ಫಲಕಾರಿಯಾಗಿಲ್ಲವಾಗಿತ್ತು. ಕೊನೆಗೆ ಜಿನೇಶ್ ಸಾವನ್ನಪ್ಪಿರುವುದಾಗಿ ವೈದ್ಯರು ಘೋಷಿಸಿದ್ದರು ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.