
5.20 ಕೋಟಿ ರೂ. ದಂಡ ಕಟ್ಟಿ: ಪಿಎಫ್ಐ ಗೆ ಕೇರಳ ಹೈಕೋರ್ಟ್ ಚಾಟಿ
Team Udayavani, Sep 29, 2022, 2:51 PM IST

ತಿರುವನಂತಪುರಂ : ಸೆಪ್ಟೆಂಬರ್ 23 ರಂದು ಕೇರಳದಾದ್ಯಂತ ಪಿಎಫ್ಐ ಕರೆ ನೀಡಿದ್ದ ಪ್ರತಿಭಟನೆ ವೇಳೆ ಸಂಭವಿಸಿದ ವ್ಯಾಪಕ ಹಿಂಸಾಚಾರ ನಂತರ ಸಾರ್ವಜನಿಕ ಆಸ್ತಿ ನಾಶಕ್ಕೆ ಸಂಬಂಧಿಸಿ 5.20 ಕೋಟಿ ರೂ. ಠೇವಣಿ ಮಾಡುವಂತೆ ಕೇರಳ ಹೈಕೋರ್ಟ್ ಗುರುವಾರ ಆದೇಶಿಸಿದೆ.
ಹಿಂಸಾಚಾರದ ವೇಳೆ ರಾಜ್ಯ ಸಾರಿಗೆ ಕೆಎಸ್ಆರ್ಟಿಸಿ ಬಸ್ ಗಳಿಗೆ ಮಾಡಿದ ವ್ಯಾಪಕ ಹಾನಿಗೆ 2 ವಾರಗಳಲ್ಲಿ 5.20 ಕೋಟಿ ರೂ. ಠೇವಣಿ ಮಾಡುವಂತೆ ನಿಷೇಧಿತ ಸಂಘಟನೆಗೆ ಹೈಕೋರ್ಟ್ ನಿರ್ದೇಶಿಸಿದೆ.
ಇದನ್ನೂ ಓದಿ: ”ಆಪರೇಷನ್ ಗರುಡ”; ಏನಿದು ಸಿಬಿಐನ ಉನ್ನತ ಮಟ್ಟದ ಹೊಸ ಕಾರ್ಯಾಚರಣೆ?
ರಾಜ್ಯ ಮತ್ತು ಕೆಎಸ್ಆರ್ಟಿಸಿಯಿಂದ ಅಂದಾಜಿಸಲಾದ ಹಾನಿಗಳಿಗೆ ಎರಡು ವಾರಗಳಲ್ಲಿ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ಮೊತ್ತವನ್ನು ಪಾವತಿಸಬೇಕು ಎಂದು ಕೋರ್ಟ್ ಹೇಳಿದೆ.
ಪ್ರತಿಭಟನೆ ವೇಳೆ ತನ್ನ ಬಸ್ಗಳಿಗೆ ಆಗಿರುವ ಹಾನಿಗಾಗಿ ಪಿಎಫ್ಐನಿಂದ ಪರಿಹಾರವನ್ನು ಕೋರಿ ಕೆಎಸ್ಆರ್ಟಿಸಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು.
ಹಿಂಸಾಚಾರ ನಂತರ 487 ಪ್ರಕರಣಗಳನ್ನು ದಾಖಲಿಸಲಾಗಿದ್ದು, 1,992 ಜನರನ್ನು ಬಂಧಿಸಲಾಗಿದೆ ಮತ್ತು 687 ಮಂದಿಯನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ ಎಂದು ಸರಕಾರವು ನ್ಯಾಯಾಲಯಕ್ಕೆ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಷ್ಟ್ರದ ಪ್ರಗತಿಗಾಗಿ ಜಾತಿ ಮತ್ತು ಪ್ರಾದೇಶಿಕ ತಾರತಮ್ಯವನ್ನು ತೊಡೆದುಹಾಕಿ: ಯೋಗಿ ಆದಿತ್ಯನಾಥ್

ಒಡಿಶಾ ಸಚಿವನ ಹತ್ಯೆ: ಸಿಬಿಐ ತನಿಖೆಗೆ ಆಗ್ರಹ

ಬಿಜೆಪಿ ಜೊತೆಗೆ ಮೈತ್ರಿಗಿಂತ ಸಾಯುವುದು ಲೇಸು: ನಿತೀಶ್ ಕುಮಾರ್

ಮೋದಿ ಸರ್ಕಾರದ ಡಿಡಿಎಲ್ಜೆಯಲ್ಲಿ ಸಚಿವ ಜೈಶಂಕರ್ ನಟನೆ: ಜೈರಾಮ್ ರಮೇಶ್

ಗೋರಖ್ನಾಥ್ ದೇಗುಲ ದಾಳಿ: ಆರೋಪಿ ಅಹ್ಮದ್ ಮುರ್ತಾಜಾಗೆ ಮರಣದಂಡನೆ ಶಿಕ್ಷೆ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
