ಹದಿಯಾ ವಿವಾಹ ಕಾನೂನು ಬದ್ಧ: ಸುಪ್ರೀಂ ಕೋರ್ಟ್
Team Udayavani, Mar 9, 2018, 8:15 AM IST
ನವದೆಹಲಿ/ಕೊಚ್ಚಿ: ಕೇರಳದ ಮಹಿಳೆ ಹದಿಯಾರ ವಿವಾಹ ಕಾನೂನುಬದ್ಧವಾಗಿದ್ದು, ಅವರು ಪತಿಯ ಜತೆ ಜೀವಿಸಲು ಸ್ವತಂತ್ರರು ಎಂದು ಸುಪ್ರೀಂಕೋರ್ಟ್ ಹೇಳಿದೆ. ಜತೆಗೆ ಮುಸ್ಲಿಂ ಪತಿಯ ಜತೆಗೆ ಆದ ವಿವಾಹವನ್ನು ರದ್ದು ಮಾಡಿ ಕೇರಳ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಅನೂರ್ಜಿತಗೊಳಿಸಿದೆ. ಈ ಪ್ರಕರಣವು “ಲವ್ ಜಿಹಾದ್’ ಹೆಸರಿನಲ್ಲಿ ದೇಶಾದ್ಯಂತ ವಿವಾದ ಹಾಗೂ ಕುತೂಹಲಕ್ಕೆ ಕಾರಣವಾಗಿತ್ತು.
ಸುಪ್ರೀಂಕೋರ್ಟ್ ಮು.ನ್ಯಾ. ದೀಪಕ್ ಮಿಶ್ರಾ ನೇತೃತ್ವದ ಪೀಠ ಗುರುವಾರ ಈ ಕುರಿತು ತೀರ್ಪು ನೀಡಿದೆ. ಜತೆಗೆ, ಹದಿಯಾ ಪತಿ ಶಫೀನ್ ಜಹಾನ್ ವಿರುದ್ಧ ಎನ್ಐಎ ತನಿಖೆ ಮುಂದುವರಿಸಲು ಕೋರ್ಟ್ ಅನುಮತಿ ನೀಡಿದೆ. ಆದೇಶದ ಬಗ್ಗೆ ಕೊಚ್ಚಿಯಲ್ಲಿ ಪ್ರತಿಕ್ರಿಯೆ ನೀಡಿರುವ ಹದಿಯಾ ತಂದೆ ಕೆ.ಎಂ.ಅಶೋಕನ್, ತೀರ್ಪಿನ ಮರುಪರಿಶೀಲನೆಗೆ ಕೋರಿ ಮೇಲ್ಮನವಿ ಸಲ್ಲಿಸಲು ಯೋಚಿಸುತ್ತಿರುವುದಾಗಿ ಹೇಳಿದ್ದಾರೆ. ಶಫೀನ್ ಜಹಾನ್ ಜತೆ ಪುತ್ರಿಯ ವಿವಾಹ ಗುಂಪೊಂದರ ಕೃತ್ಯವಾಗಿದ್ದು, ಶಫೀನ್ ವಿರುದ್ಧ ಎನ್ಐಎ ತನಿಖೆ ಮುಂದುವರಿಸಲು ಹೇಳಿರುವುದು ಸಮಾಧಾನ ತಂದಿದೆ ಎಂದು ಪ್ರತಿಪಾದಿಸಿದ್ದಾರೆ.
ಕಳೆದ ಆಗಸ್ಟ್ನಲ್ಲಿ ಸುಪ್ರೀಂಕೋರ್ಟ್ ಈ ಬಗ್ಗೆ ತನಿಖೆಗೆ ಆದೇಶಿಸಿತ್ತು. ಕೇರಳದಲ್ಲಿ ಇತರ ಧರ್ಮೀಯರನ್ನು ಮತಾಂತರಗೊಳಿಸಿ ಮದುವೆಯಾಗುವ ಜಾಲ ಇದೆ ಎಂದು ಎನ್ಐಎ ಪ್ರತಿಪಾದಿಸಿತ್ತು. ಕಳೆದ ನ.27ರಂದು ಹದಿಯಾರನ್ನು ಸುಪ್ರೀಂಕೋರ್ಟ್ ಪೋಷಕರ ವಶದಿಂದ ಮುಕ್ತಗೊಳಿಸಿ, ವಿದ್ಯಾಭ್ಯಾಸ ಪೂರ್ಣಗೊಳಿಸುವಂತೆ ಸೂಚಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ