ಯುವಕನ ಜನನಾಂಗಕ್ಕೆ ಬೆಂಕಿಹಚ್ಚಿ ಕೊಂದರು…ಏನಿದು ಘಟನೆ? ಐವರ ಬಂಧನ
ಗಂಭೀರವಾಗಿ ಗಾಯಗೊಂಡ 30 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ
Team Udayavani, Dec 17, 2019, 12:30 PM IST
ತಿರುವನಂತಪುರಂ: ಏಳು ಮಂದಿಯ ಗುಂಪೊಂದು ಹರಿತವಾದ ಹಾಗೂ ಬಿಸಿ ಸಲಕರಣೆಯಿಂದ ವ್ಯಕ್ತಿಯೊಬ್ಬನ ಜನನಾಂಗವನ್ನೇ ಸುಟ್ಟು ಹಾಕಿದ್ದು, ಗಂಭೀರವಾಗಿ ಗಾಯಗೊಂಡ 30 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಕೇರಳದ ತಿರುವನಂತಪುರದಲ್ಲಿ ನಡೆದಿದೆ.
ಏನಿದು ಘಟನೆ:
30 ವರ್ಷದ ಯುವಕನೊಬ್ಬ ಮೊಬೈಲ್ ಹಾಗೂ ವಾಲ್ಲೆಟ್ ಕದ್ದ ಆರೋಪದ ಶಂಕೆಯ ಮೇಲೆ ಆತನನ್ನು ಹಿಡಿದು ಗುಂಪು ಚಿತ್ರಹಿಂಸೆ ನೀಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಗರದ ತಿರುವಾಲ್ಲಂ ಪ್ರದೇಶದ ನಿವಾಸಿಯಾದ ಯುವಕನನ್ನು ಏಳು ಜನರ ಗುಂಪು ಥಳಿಸಿದ ನಂತರ ಆತನ ಶಿಶ್ನಕ್ಕೆ ಬೆಂಕಿ ಹಚ್ಚಿರುವುದಾಗಿ ವರದಿ ವಿವರಿಸಿದೆ. ತಿರುವನಂತಪುರಂನ ಮುಖ್ಯ ಬಸ್ ನಿಲ್ದಾಣದಲ್ಲಿ ಆಟೋ ಚಾಲಕ ಮಲಗಿದ್ದ ವೇಳೆ ಮೊಬೈಲ್ ಕದ್ದಿರುವುದಾಗಿ ಆರೋಪಿಸಿ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ, ಚಿತ್ರಹಿಂಸೆ ನೀಡಿದ್ದು, ಗಂಭೀರ ಗಾಯದಿಂದ ಆತ ಸಾವನ್ನಪ್ಪಿದ್ದಾನೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಜನನಾಂಗ ಶೇ.40ರಷ್ಟು ಸುಟ್ಟು ಹೋದ ಪರಿಣಾಮ ಆತ ಸಾವನ್ನಪ್ಪಿರುವುದಾಗಿ ಎಎನ್ ಐ ವರದಿ ಮಾಡಿದೆ. ದಾರಿಯಲ್ಲಿ ಹೋಗುತ್ತಿದ್ದವರು ಈ ಘಟನೆ ವೀಡಿಯೋ ಮಾಡಿದ್ದು, ಏಳು ಮಂದಿಯಲ್ಲಿ ಐವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನಾಸೀರ್, ದಿನೇಶ್ ವರ್ಗೀಸ್, ಅರುಣ್, ಸಾಜನ್ ಹಾಗೂ ರಾಬಿನ್ ಸನ್ ಸೇರಿ ಐವರನ್ನು ಬಂಧಿಸಲಾಗಿದ್ದು, ವಿಚಾರಣೆ ನಡೆಸಲಾಗುತ್ತಿದೆ ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ