ಕೇರಳ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ತಾಲಿಬಾನ್ ಮಾದರಿ: ಏನಿದು ವಿವಾದ?
Team Udayavani, Jul 8, 2022, 6:34 PM IST
ತ್ರಿಶೂರ್: ಕೇರಳದಲ್ಲಿ ಇಸ್ಲಾಮಿಕ್ ಸಂಘಟನೆಯೊಂದು ಇಲ್ಲಿನ ವೈದ್ಯಕೀಯ ವಿದ್ಯಾರ್ಥಿಗಳಿಗೆ ಲಿಂಗ ರಾಜಕೀಯದ ಕುರಿತು ತರಗತಿಗಳನ್ನು ನಡೆಸುತ್ತಿದ್ದು, ಪುರುಷ ಮತ್ತು ವಿದ್ಯಾರ್ಥಿನಿಯರನ್ನು ಪ್ರತ್ಯೇಕವಾಗಿ ಕುಳಿತುಕೊಳ್ಳುವಂತೆ ಮಾಡಿ, ಪರದೆಯಿಂದ ವಿಭಜಿಸಲಾಗಿದ್ದು, ವಿವಾದ ಭುಗಿಲೆದ್ದಿದೆ.
ಕೇರಳ ಶಾಸ್ತ್ರ ಸಾಹಿತ್ಯ ಪರಿಷತ್ತು, ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ (ಎಸ್ಎಫ್ಐ), ಆಡಳಿತಾರೂಢ ಸಿಪಿಐ(ಎಂ)ನ ವಿದ್ಯಾರ್ಥಿಗಳ ವಿಭಾಗ ಮತ್ತು ಇತರರು ಈ ರೀತಿಯ ತರಗತಿಗಳನ್ನು ತೀವ್ರವಾಗಿ ಟೀಕಿಸಿದ್ದಾರೆ.
ಇಸ್ಲಾಮಿಕ್ ದೃಷ್ಟಿಕೋನದಿಂದ ಅರ್ಥಮಾಡಿಕೊಳ್ಳುವುದು ಎಂಬ ವಿಷಯದ ಕುರಿತು ಇಸ್ಲಾಮಿಸ್ಟ್ ಗುಂಪು – ಮುಜಾಹಿದ್ ವಿಸ್ಡಮ್ ಇಸ್ಲಾಮಿಕ್ ಆರ್ಗನೈಸೇಶನ್ ತರಗತಿಗಳನ್ನು ನಡೆಸಿದೆ. ತರಗತಿ ನಡೆಸಿದ ಗ್ರೂಪ್ನ ಪದಾಧಿಕಾರಿಯೊಬ್ಬರು ಅದರ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ಇದು ಬೆಳಕಿಗೆ ಬಂದಿದೆ. ಎರಡು ಲಿಂಗಗಳನ್ನು ಪ್ರತ್ಯೇಕಿಸಲು ಅವರು ಬಯಸಿದಂತೆ ಪರದೆಯನ್ನು ಹಾಕಬಹುದು ಎಂಬ ಅಭಿಪ್ರಾಯವನ್ನು ಹೊಂದಿರುವ ಗುಂಪು ತರಗತಿಗಳ ವೆಚ್ಚವನ್ನು ಭರಿಸುತ್ತಿದೆ ಎಂದು ಪದಾಧಿಕಾರಿಗಳು ಹೇಳಿದ್ದಾರೆ.
ಖಾಸಗಿ ಜಾಗದಲ್ಲಿ ತರಗತಿಗಳು ನಡೆಯುತ್ತಿವೆ ಎಂದು ಸಮರ್ಥಿಸಿಕೊಳ್ಳಲಾಗಿದ್ದು, ಉನ್ನತ ಶಿಕ್ಷಣ ಪಡೆದ ವಿದ್ಯಾರ್ಥಿಗಳು ತರಗತಿಗಳಲ್ಲಿ ಪಾಲ್ಗೊಳ್ಳುತ್ತಿರುವುದು ಕಳವಳಕಾರಿ ಸಂಗತಿ ಎಂದು ಎಸ್ಎಫ್ಐ ರಾಜ್ಯಾಧ್ಯಕ್ಷೆ ಅನುಶ್ರೀ ಪಿಟಿಐಗೆ ಹೇಳಿಕೆ ನೀಡಿದ್ದಾರೆ. “ಉನ್ನತ ಶೈಕ್ಷಣಿಕ ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಇಂತಹ ಅಭಿಯಾನಗಳ ಭಾಗವಾಗುತ್ತಿರುವುದು ಕಳವಳಕಾರಿ ವಿಷಯವಾಗಿದೆ. ಎಸ್ಎಫ್ಐ ಇದನ್ನು ದೊಡ್ಡ ಸವಾಲಾಗಿ ಪರಿಗಣಿಸುತ್ತದೆ ಎಂದು ಅನುಶ್ರೀ ಹೇಳಿದ್ದಾರೆ.
ಕೇರಳ ಶಾಸ್ತ್ರ ಸಾಹಿತ್ಯ ಪರಿಷತ್ತು, ರಾಜ್ಯದಲ್ಲಿ ಪ್ರಗತಿಪರ ಜನ ವಿಜ್ಞಾನ ಚಳವಳಿ, ತರಗತಿಗಳನ್ನು ಖಂಡಿಸಿದ್ದು, ಪರದೆ ಏಕೆ ಎಂದು ಯಾರೂ ಪ್ರಶ್ನಿಸಲಿಲ್ಲ ಎಂದು ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Jammu and Kashmir: ಉಗ್ರರ ಗುಂಡಿನ ದಾಳಿಗೆ ಬಲಿಯಾದ ವಲಸೆ ಕಾರ್ಮಿಕ
Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ
Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್- ಬಿಜೆಪಿ ನೇರ ಹಣಾಹಣಿ
Vijayapura; ವಿಕಸಿತ ಭಾರತದಲ್ಲಾಗಿರುವ ಅಭಿವೃದ್ಧಿ ಏನು: ಕೆಪಿಸಿಸಿ ವಕ್ತಾರ ಗಣಿಹಾರ ಪ್ರಶ್ನೆ
Pavagada: ಬೈಕ್ ಗೆ ಕಾಡು ಹಂದಿ ಡಿಕ್ಕಿಯಾಗಿ ಸವಾರ ಸಾವು
Koppala; ಬಿಜೆಪಿಯಲ್ಲಿ ಸೌಜನ್ಯತೆ ಇಲ್ಲವೆನಿಸಿ ಕಾಂಗ್ರೆಸ್ ಸೇರಿದೆ: ಸಂಗಣ್ಣ ಕರಡಿ
T20 World Cup; ರೋಹಿತ್, ವಿರಾಟ್ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?