ಕೇರಳದಲ್ಲಿ ನಿಲ್ಲದ ತಲ್ಲಣ


Team Udayavani, Aug 17, 2018, 6:50 AM IST

keralaa.jpg

ನವದೆಹಲಿ: ಕಳೆದೊಂದು ವಾರದಿಂದ ಕೇರಳವನ್ನು ಬಿಡದೇ ಆವರಿಸಿರುವ ಶತಮಾನದ ಮಹಾಮಳೆ ಕಳೆದ 48 ಗಂಟೆಗಳಲ್ಲಿ 60 ಜನರ ಬಲಿ ಪಡೆದಿದೆ. ತ್ರಿಶೂರ್‌, ಕಣ್ಣೂರ್‌,ಕಲ್ಲಿಕೋಟೆ, ಕೊಟ್ಟಾಯಂನ ಅಂಬಾಯತ್ತೋಡ್‌ನಲ್ಲಿ ಗುರುವಾರ ಭೂಕುಸಿತ ಉಂಟಾ ಗಿದ್ದು, ಪಾಲಕ್ಕಾಡ್‌ ಜಿಲ್ಲೆಯ ಉತ್ತರದಲ್ಲಿರುವ ನೆನ್ಮಾರದಲ್ಲಿ ಸಂಭವಿಸಿದ ಭೂಕುಸಿತದಿಂದಾಗಿ 8 ಮಂದಿ ಮೃತಪಟ್ಟಿದ್ದಾರೆ. ಇದ ರಿಂದಾಗಿ, ಆ.1ರಿಂದ ಈವರೆಗೆ ಮಳೆಗೆ ಬಲಿಯಾದವರ ಸಂಖ್ಯೆ 100ಕ್ಕೇರಿದೆ. ಏತನ್ಮಧ್ಯೆ, ಆಗಸ್ಟ್‌ 15ರಂದು ನಿಯಂತ್ರಣಕ್ಕೆ ಬರ ಲಿದೆ ಎಂದು ಹೇಳಲಾಗಿದ್ದ ಮಹಾಮಳೆ 18ರವರೆಗೂ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿರುವುದು ಕೇರಳದ ಜನತೆಯನ್ನು ಮತ್ತಷ್ಟು ಆತಂಕಕ್ಕೆ ದೂಡಿದೆ. 

14 ಜಿಲ್ಲೆಗಳಲ್ಲಿ ಪ್ರವಾಹ ಭೀತಿ
ಕೇರಳ ಇತಿಹಾಸದಲ್ಲೇ ಇದೇ ಮೊದಲ ಬಾರಿ, ಕೇರಳ ವಿದ್ಯುತ್‌ಶಕ್ತಿ ಮಂಡಳಿಗೆ ಸೇರಿದ 52 ಅಣೆಕಟ್ಟು ಹಾಗೂ ಕೇರಳ ಜಲ ಆಯೋಗಕ್ಕೆ ಸೇರಿದ 22 ಅಣೆಕಟ್ಟುಗಳಲ್ಲಿ ನೀರು ಗರಿಷ್ಠ ಮಿತಿಯನ್ನೂ ಮೀರಿ ತುಂಬುತ್ತಿವೆ. ಪೆರಿಯಾರ್‌ ನದಿ ನೀರು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, 14 ಜಿಲ್ಲೆಗಳಿಗೆ ಪ್ರವಾಹದ ಮುನ್ನೆಚ್ಚರಿಕೆ ಕೊಡಲಾಗಿದೆ. 

ನಾಗರಿಕರ ಮೊರೆ
ಸದ್ಯಕ್ಕೆ ಜಲಾವೃತಗೊಂಡಿರುವ ಪಟ್ಟಣಂತಿಟ್ಟ, ಎರ್ನಾಕುಳಂ, ಅಲಪ್ಪುಳ ಮುಂತಾದೆಡೆ ಜನರು ಅಪಾರ್ಟ್‌ ಮೆಂಟ್‌ಗಳು, ಎತ್ತರ ಮನೆಗಳ ಛಾವಣಿಗಳನ್ನು ಏರಿ ನಿಂತು ನೆರವಿಗಾಗಿ ಕೂಗುತ್ತಿದ್ದಾರೆ. ಇಂಥ ನಾಗರಿಕರು ತಮ್ಮಲ್ಲಿನ ಮೊಬೈಲ್‌ಗ‌ಳಿಂದಲೇ ಸಾಮಾ ಜಿಕ ಜಾಲ ತಾಣಗಳಲ್ಲಿ ನೆರವಿಗಾಗಿ ಮೊರೆಯಿಡುತ್ತಿದ್ದಾರೆ. ನಿರ್ಗತಿಕರಿಗೆ ಆಹಾರ ಪೊಟ್ಟಣ, ಕುಡಿಯುವ ನೀರಿನ ಬಾಟಲಿಗಳನ್ನು ಸರಬರಾಜು ಮಾಡಲಾಗುತ್ತಿದೆ. ಪಟ್ಟಣಂತಿಟ್ಟ ಜಿಲ್ಲೆಯ ರಣ್ಣಿ ಎಂಬ ಪ್ರಾಂತ್ಯದಲ್ಲಿನ ಥಿಯಾಲಜಿ ಸೆಮಿನರಿ  ಜಲಾವೃತವಾಗಿದ್ದ ರಿಂದಾಗಿ ಅದರೊಳಗೆ ಸಿಲುಕಿದ್ದ 20 ಮಂದಿಯನ್ನು ಏರ್‌ ಲಿಫ್ಟ್ ಮೂಲಕ ತಿರುವನಂತಪುರಂಗೆ ತರಲಾಗಿದೆ.

ಮತ್ತೂಂದು ತುಕಡಿ
ಈಗಾಗಲೇ ಕೇರಳದಲ್ಲಿ ಪರಿಹಾರ ಕಾರ್ಯ ನಡೆಸುತ್ತಿರುವ ಭೂ ಸೇನೆ, ನೌಕಾ ಪಡೆ, ವಾಯು ಪಡೆ, ಕರಾವಳಿ ಪಡೆ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆಗಳ (ಎನ್‌ಡಿಆರ್‌ಎಫ್) ತುಕಡಿಗಳಿಗೆ ಸಹಾಯಕವಾಗಿ 40 ಸೈನಿಕರುಳ್ಳ ಮತ್ತೂಂದು ಸೇನಾ ತುಕಡಿಯನ್ನು ರವಾನಿಸಲು ತೀರ್ಮಾನಿಸಿದೆ.

ಸಂಚಾರ ಅಸ್ತವ್ಯಸ್ತ
ಕೇರಳದ ಕೇಂದ್ರ ಭಾಗದಲ್ಲಿ ಎಡಬಿಡದೇ ಮಳೆ ಸುರಿದು ಎಲ್ಲೆಲ್ಲೂ ನೀರು ತುಂಬಿಕೊಂಡಿರುವುದರಿಂದ ಆ ಭಾಗದ ರೈಲು ಸಂಚಾ ರಕ್ಕೆ ತೀವ್ರ ಅಡಚಣೆಯಾಗಿದೆ. ಹಾಗಾಗಿ, ತಿರುವನಂತಪುರ ದಿಂದ ಇತರೆಡೆಗೆ ಸಾಗುವ ಎಲ್ಲಾ ರೈಲುಗಳನ್ನು ರದ್ದುಗೊಳಿಸಲಾ ಗಿದೆ. ಕೊಚ್ಚಿ ಮೆಟ್ರೋ ರೈಲು ಮಾರ್ಗವೂ ಸ್ಥಗಿತವಾಗಿದೆ. ರಸ್ತೆ ಮಾರ್ಗಗಳನ್ನೂ ಬಂದ್‌ ಮಾಡಲಾಗಿದೆ. 

ಸುಪ್ರೀಂ ಆತಂಕ 
ಕೇರಳದ ಪ್ರವಾಹ ಪರಿಸ್ಥಿತಿಯನ್ನು ವಿನಾಶಕಾರಿ ಎಂದು ಬಣ್ಣಿಸಿರುವ ಸುಪ್ರೀಂಕೋರ್ಟ್‌, ಮುಲ್ಲಪೆರಿಯಾರ್‌ ಅಣೆಕಟ್ಟಿನಲ್ಲಿರುವ ನೀರನ್ನು ಕಡಿಮೆ ಮಾಡುವ ಬಗ್ಗೆ ಕೇರಳ ಮತ್ತು ತಮಿಳುನಾಡು ನಡುವೆ ಎದ್ದಿರುವ ವಿವಾದದಲ್ಲಿ ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಲು ತಾನು ಅನುವು ಮಾಡಿಕೊಡುವುದಾಗಿ ಹೇಳಿದೆ. ಮುಲ್ಲಪೆರಿಯಾರ್‌ ಅಣೆಕಟ್ಟಿನ ಗರಿಷ್ಟ ಮಟ್ಟ 142 ಅಡಿ ಇದ್ದು, ಇದನ್ನು ಮೀರಿ ನೀರು ಸಂಗ್ರಹವಾಗಿರುವುದರಿಂದ ಅಣೆಕಟ್ಟಿನ ಕ್ರೆಸ್ಟ್‌ ಗೇಟ್‌ ತೆರೆಯಲು ಕೇರಳ ಕಾತುರಿಸುತ್ತಿದ್ದರೆ, ಕ್ರೆಸ್ಟ್‌ ಗೇಟ್‌ ತೆರೆಯುವುದರಿಂದ ಪ್ರವಾಹದ ಭೀತಿ ತಲೆದೋರಲಿದೆ ಎಂದು ಆಪಾದಿಸಿರುವ ತಮಿಳುನಾಡು ಗೇಟ್‌ ತೆರೆಯದಂತೆ ತಾಕೀತು ಮಾಡಿದೆ. ಹಾಗಾಗಿ, ಈ ವಿಚಾರ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ.

ಟಾಪ್ ನ್ಯೂಸ್

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’

New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್‌ ಗ್ಯಾಂಗ್‌’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

1-assam

UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್‌?

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!

Exam

NEET ಟಾಪರ್‌ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.