ವರುಣನ ಆರ್ಭಟಕ್ಕೆ ತತ್ತರಿಸಿದ ಕೇರಳ, ಕಾಸರಗೋಡಿನಲ್ಲಿ ರೆಡ್ ಅಲರ್ಟ್
Team Udayavani, Jul 20, 2019, 12:42 PM IST
ತಿರುವನಂತಪುರಂ: ವರುಣನ ಆರ್ಭಟದಿಂದಾಗಿ ಬಿಹಾರ, ಅಸ್ಸಾಂ ತತ್ತರಿಸಿ ಹೋಗಿರುವ ಬೆನ್ನಲ್ಲೇ ಇದೀಗ ಕೇರಳದಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರ ಇಡುಕ್ಕಿಯ ಕಲ್ಲಾರುಕುಟ್ಟಿ ಡ್ಯಾಂನ ಒಂದು ಗೇಟನ್ನು ತೆರೆಯಲಾಗಿದ್ದು, ಇದರಿಂದಾಗಿ ಪ್ರವಾಹ ಭೀತಿ ಎದುರಾಗಿದೆ. ಕೇರಳದ ಮೂರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ವರದಿ ತಿಳಿಸಿದೆ.
ಎಎನ್ ಐ ವರದಿ ಪ್ರಕಾರ, ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಭಾರೀ ಮಳೆಯಾದ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳು ಜಲಾವೃತಗೊಂಡಿದೆ. ಪೆರಿಯಾರ್ ನದಿ ಕೂಡಾ ತುಂಬಿ ಹರಿಯುತ್ತಿದ್ದು, ಇಡುಕ್ಕಿ, ಎರ್ನಾಕುಲಂನಲ್ಲಿರುವ ಡ್ಯಾಂನ ಗೇಟ್ ನ್ನು ತೆರದು ನೀರು ಬಿಡಲಾಗಿದೆ ಎಂದು ವಿವರಿಸಿದೆ.
Kerala: One shutter of Kallarkutty Dam situated in Idukki district has been opened, following heavy rains in the catchment area. pic.twitter.com/vMVtMrmPmX
— ANI (@ANI) July 20, 2019
ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೇರಳದ ಕಾಸರಗೋಡು ಸೇರಿದಂತೆ ಮೂರು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಅಲ್ಲದೇ ಇಡುಕ್ಕಿ, ಕಣ್ಣೂರು, ಕೋಝಿಕೋಡ್, ಮಲಪ್ಪುರಂ ಮತ್ತು ವಯನಾಡ್ ಪ್ರದೇಶಗಳಲ್ಲಿ ಇರುವ ಜನರಿಗೆ ಸೂಕ್ತ ಸ್ಥಳಕ್ಕೆ ತೆರಳಲು ತಯಾರಾಗಿರುವಂತೆ ಸೂಚನೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!
ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್ ರೆಡ್ಡಿ ಲೆಕ್ಕಚಾರವೇನು!
Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್
EVM VVPAT case: ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ
Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ