ಶಬರಿಮಲೆ ಧ್ವಜಸ್ತಂಭಕ್ಕೆ ರಾಸಾಯನಿಕ ಸುರಿದು ಹಾನಿ, ಮೂವರು ವಶಕ್ಕೆ


Team Udayavani, Jun 26, 2017, 10:44 AM IST

sabarimala.jpg

ಶಬರಿಮಲೆ, ಜೂ. 25: ಲಕ್ಷಾಂತರ ಭಕ್ತರ ಶ್ರದ್ಧಾ ಕೇಂದ್ರ ವಾಗಿರುವ ಶಬರಿಮಲೆ ಅಯ್ಯಪ್ಪ ಕ್ಷೇತ್ರದ ಧ್ವಜಸ್ತಂಭಕ್ಕೆ ರವಿವಾರ ಹಾಡಹಗಲೇ ದುಷ್ಕರ್ಮಿಗಳು ಹಾನಿಯುಂಟು ಮಾಡಿರುವುದು ಆಘಾತದ ಅಲೆಯೆಬ್ಬಿಸಿದೆ. ಚಿನ್ನ ಹೊದಿಸಿದ ಧ್ವಜಸ್ತಂಭದ ಬುಡಕ್ಕೆ (ಪಂಚವರ್ಗತ್ತರ) ರಾಸಾಯನಿಕ ದ್ರಾವಣವನ್ನು ಸುರಿಯಲಾಗಿದ್ದು, ಇದರ ಪರಿಣಾಮವಾಗಿ ಬುಡದಲ್ಲಿರುವ ಚಿನ್ನದ ಹೊದಿಕೆ ಸುಟ್ಟು ಕಪ್ಪುಬಣ್ಣಕ್ಕೆ ತಿರುಗಿದೆ.

ಕೆಲವು ಮಂದಿ ಧ್ವಜಸ್ತಂಭದ ಬುಡಕ್ಕೆ ಬಾಟಲಿಯಿಂದ ಏನನ್ನೋ ಸುರಿಯುತ್ತಿರುವ ದೃಶ್ಯ ಶ್ರೀ ಕ್ಷೇತ್ರ ದಲ್ಲಿ ಅಳವಡಿಸಿರುವ ಸಿಸಿಟಿವಿಯಲ್ಲಿ ದಾಖಲಾಗಿದೆ. ಇದರ ಆಧಾರದಲ್ಲಿ 5 ಮಂದಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ. 

ಬೆಳಗ್ಗೆ ಪ್ರತಿಷ್ಠೆ: ಕ್ಷೇತ್ರದ ಧ್ವಜಸ್ತಂಭವನ್ನು ಇತ್ತೀಚೆಗಷ್ಟೇ ಬದಲಾಯಿಸಲಾಗಿತ್ತು. ರವಿ ವಾರ ಬೆಳಗ್ಗೆ ಮುಖ್ಯ ಅರ್ಚಕ ಕಂಡರಾರು ರಾಜೀವರಾರು ಧ್ವಜಸ್ತಂಭದ ಪ್ರತಿಷ್ಠಾ  ವಿಧಿಯನ್ನು ನೆರವೇರಿಸಿದ್ದರು. ಮಧ್ಯಾಹ್ನದ ಬಳಿಕ ಧ್ವಜಸ್ತಂಭದ ಬುಡ ಸುಟ್ಟಿರುವುದು ಕಂಡು ಬಂದಿದೆ. ಪೂರ್ವಾಹ್ನ 11.50ಕ್ಕೆ ಪ್ರತಿಷ್ಠೆ ವಿಧಿವಿಧಾನಗಳು ಮುಗಿದು ಅನಂತರ ಮಧ್ಯಾಹ್ನದ ಪೂಜೆ ನೆರವೇರಿಸಲಾಗಿತ್ತು. 1.50ಕ್ಕೆ ಅರ್ಚಕರು, ಪೊಲೀಸರು ಮತ್ತು ದೇವಸ್ವಂ ಸಿಬಂದಿ ಹೋದ ಬಳಿಕ ದುಷ್ಕರ್ಮಿಗಳು ಧ್ವಜ ಸ್ತಂಭದ ಬುಡಕ್ಕೆ ರಾಸಾಯನಿಕ ದ್ರಾವಣ ಸುರಿದಿದ್ದು, ಇದು ಪಾದರಸ ವಾಗಿರಬಹುದೆಂದು ಶಂಕಿಸಲಾಗಿದೆ. ಹೆಚ್ಚಿನ ಪರೀಕ್ಷೆಗಾಗಿ ಅದರ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಶನಿವಾರವಷ್ಟೇ ಧ್ವಜಸ್ತಂಭಕ್ಕೆ ಚಿನ್ನ ಹೊದಿಸುವ ಕೆಲಸವನ್ನು ಪೂರ್ತಿ ಗೊಳಿಸಲಾಗಿತ್ತು. 9.16 ಕೆ.ಜಿ. ಚಿನ್ನ, 300 ಕೆ.ಜಿ. ತಾಮ್ರ ಮತ್ತು 17 ಕೆ.ಜಿ. ಬೆಳ್ಳಿಯನ್ನು ಬಳಸಿ ಹೊದಿಕೆ ತಯಾರಿಸಲಾಗಿದೆ.

ಕೆಎಸ್‌ಆರ್‌ಟಿಸಿ ಸಿಬಂದಿ ನೀಡಿದ ಸುಳಿವು: ಪಂಪೆಯ ಕೆಎಸ್‌ಆರ್‌ಟಿಸಿ ಡಿಪೋದಲ್ಲಿ ಐದು ಮಂದಿ ಸಂಶಯಾಸ್ಪದವಾಗಿ ಓಡಾಡುತ್ತಿರುವುದನ್ನು ನೋಡಿ ಸಿಬಂದಿ ತತ್‌ಕ್ಷಣ ಪಂಪಾ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದರು. ಪೊಲೀಸರು ಬಂದು ಅವರನ್ನು ವಶಕ್ಕೆ ತೆಗೆದುಕೊಂಡು ಪ್ರಶ್ನಿಸಿದಾಗ ಧ್ವಜಸ್ತಂಭಕ್ಕೆ ರಾಸಾಯನಿಕ ದ್ರಾವಣ ಸುರಿದಿರುವ ವಿಷಯ ತಿಳಿದು ಬಂದಿದೆ. 

ಸೆರೆಯಾಗಿರುವವರ ಚಹರೆ ಸಿಸಿಟಿವಿಯಲ್ಲಿ  ದಾಖಲಾದವರ ಚಹರೆಗೆ ಹೋಲಿಕೆಯಾಗುತ್ತಿತ್ತು. ಐವರು ಧ್ವಜಸ್ತಂಭಕ್ಕೆ ಬಾಟಲಿಯಿಂದ ಏನೋ ದ್ರಾವಣ ಸುರಿಯುತ್ತಿರುವ ದೃಶ್ಯ ಸಿಸಿಟಿವಿ ಕೆಮರಾದಲ್ಲಿದೆ. ಇವರೆಲ್ಲ ಆಂಧ್ರ ಪ್ರದೇಶದ ವಿಜಯವಾಡ ಜಿಲ್ಲೆಯವರು ಎಂದು ಪೊಲೀಸರು ತಿಳಿಸಿದ್ದಾರೆ. ಆದರೆ ಯಾವ ಉದ್ದೇಶಕ್ಕಾಗಿ ದ್ರಾವಣ ಸುರಿದಿದ್ದಾರೆ ಎಂದು ಇನ್ನೂ ತಿಳಿದು ಬಂದಿಲ್ಲ. ಧ್ವಜಸ್ತಂಭ ಸ್ಥಾಪನೆ ವಿಚಾರವಾಗಿ ಕೂಡ ಕೆಲವೊಂದು ಭಿನ್ನಾಭಿಪ್ರಾಯಗಳಿದ್ದವು. ಈ ಹಿನ್ನೆಲೆಯಲ್ಲೂ ಪ್ರಕರಣವನ್ನು ಪರಿಶೀಲಿಸಲಾಗು ತ್ತಿದೆ. ಹೆಚ್ಚಿನ ಪರೀಕ್ಷೆಗಾಗಿ ವಿಧಿವಿಜ್ಞಾನ ತಜ್ಞರನ್ನು ಸನ್ನಿಧಾನಕ್ಕೆ ಕರೆಸಲಾಗಿದೆ.

ಉದ್ದೇಶಪೂರ್ವಕ ಕೃತ್ಯ: ಧ್ವಜಸ್ತಂಭದ ಬುಡಕ್ಕೆ ರಾಸಾಯನಿಕ ದ್ರಾವಣ ಸುರಿದಿರುವುದು ಉದ್ದೇಶಪೂರ್ವಕ ಕೃತ್ಯ ಎಂದು ಸ್ಥಳಕ್ಕೆ ಭೇಟಿ ನೀಡಿರುವ ದೇವಸ್ವಂ (ಮುಜರಾಯಿ) ಸಚಿವ ಕಡಕಂಪಳ್ಳಿ ಸುರೇಂದ್ರನ್‌ ಹೇಳಿದ್ದಾರೆ. ಕೃತ್ಯದ ಹಿಂದಿನ ಷಡ್ಯಂತ್ರವನ್ನು ಬಯಲಿಗೆಳೆದು ತಪ್ಪಿತಸ್ಥರಿಗೆ ಕಠಿನ ಶಿಕ್ಷೆ ವಿಧಿಸಲು ಬದ್ಧರಾಗಿದ್ದೇವೆ. ಧ್ವಜಸ್ತಂಭದ ಬಳಿ ಸಿಕ್ಕಿರುವ ಬಾಟಲಿಯಲ್ಲಿರುವ ದ್ರಾವಣವನ್ನು ಹೆಚ್ಚಿನ ಪರೀಕ್ಷೆಗೊಳಪಡಿಸಲು ಸೂಚಿಸಿದ್ದೇನೆ.ಕ್ಷೇತ್ರದ ಕಾವಲನ್ನು ಇನ್ನಷ್ಟು ಬಿಗುಪಡಿಸಲು ಸೂಚಿಸಿದ್ದೇನೆ ಎಂದಿದ್ದಾರೆ. ಪಾದರಸದಲ್ಲಿ ಅದ್ದಿದ ಬಟ್ಟೆಯನ್ನು ಧ್ವಜಸ್ತಂಭದ ಬುಡಕ್ಕೆ ಎಸೆದಿರುವ ಸಾಧ್ಯತೆಯೂ ಇದೆ. ಯಾವುದೋ ಪ್ರತೀಕಾರ ಭಾವನೆಯಿಂದ ಈ ಕೃತ್ಯ ಎಸಗಿರುವಂತೆ ಕಂಡು
ಬರುತ್ತಿದೆ ಎಂದು ತಿಳಿಸಿದ್ದಾರೆ.

ದೇವಸ್ವಂ ಮಂಡಳಿ ಅಧ್ಯಕ್ಷ ಪ್ರಯರ್‌ ಗೋಪಾಲ ಕೃಷ್ಣನ್‌ ರಾಜ್ಯ ಪೊಲೀಸ್‌ ವರಿಷ್ಠಾಧಿಕಾರಿಯನ್ನು ಭೇಟಿಯಾಗಿ ಪ್ರಕರಣದ ಸಮಗ್ರ ತನಿಖೆ ತನಿಖೆ ನಡೆಸಲು ಒತ್ತಾಯಿಸಿದ್ದಾರೆ. ಇದೇ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅವರು ಸಮಗ್ರ ತನಿಖೆ ನಡೆಸಲು ಪೊಲೀಸರಿಗೆ ಸೂಚಿಸಿದ್ದಾರೆ. 

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.