ದೇವಸ್ಥಾನದಲ್ಲಿ ಯಾಂತ್ರಿಕ ಆನೆಯಿಂದ ಪೂಜೆ; ಕೇರಳದ ತ್ರಿಶೂರ್ ನಲ್ಲಿ ಹೊಸ ನಡೆ
Team Udayavani, Feb 27, 2023, 9:36 AM IST
ತ್ರಿಶೂರ್: ದೇವಸ್ಥಾನಗಳಲ್ಲಿ ಆನೆಗಳನ್ನು ಸಾಕುವುದು ಸಾಮಾನ್ಯ. ಪೂಜಾ ಕಾರ್ಯದಲ್ಲಿ ಆನೆಗಳನ್ನು ಬಳಕೆ ಮಾಡುತ್ತಾರೆ. ಆದರೆ ಇದೇ ಮೊದಲ ಬಾರಿಗೆ, ಕೇರಳದ ತ್ರಿಶೂರ್ ಜಿಲ್ಲೆಯ ಇರಿಂಜದಪ್ಪಿಲ್ಲಿ ಶ್ರೀ ಕೃಷ್ಣ ದೇವಾಲಯದಲ್ಲಿ ಆಚರಣೆಗಳನ್ನು ನಿರ್ವಹಿಸಲು ಯಾಂತ್ರಿಕ ಆನೆಯನ್ನು ಬಳಸಲಾಗಿದೆ.
ನಟಿ ಪಾರ್ವತಿ ತಿರುವೋತ್ತು ಅವರ ಬೆಂಬಲದೊಂದಿಗೆ ಪೇಟಾ ಇಂಡಿಯಾ ಸಂಸ್ಥೆಯು ಈ ಕೃತಕ ಆನೆಯನ್ನು ದೇವಸ್ಥಾನಕ್ಕೆ ಉಡುಗೊರೆಯಾಗಿ ನೀಡಿದೆ.
ಇರಿಂಜದಪಿಲ್ಲಿ ರಾಮನ್ ಎಂಬ ಹೆಸರಿನ ಯಾಂತ್ರಿಕ ಆನೆಯು 10 ಮತ್ತು ಒಂದೂವರೆ ಅಡಿ ಎತ್ತರ ಮತ್ತು 800 ಕೆಜಿ ತೂಕವಿದೆ. ಆನೆಯ ತಲೆ, ಕಣ್ಣು, ಬಾಯಿ, ಕಿವಿ ಮತ್ತು ಬಾಲ ಎಲ್ಲವೂ ವಿದ್ಯುತ್ ಮೂಲಕ ಕೆಲಸ ಮಾಡುತ್ತವೆ.
ಇದನ್ನೂ ಓದಿ:ಇನ್ನೂ ಗುಣಮುಖವಾಗದ ಜಸ್ಪ್ರೀತ್ ಬುಮ್ರಾ..; ಐಪಿಎಲ್ ನಿಂದಲೂ ಔಟ್!
ಆನೆಗಳನ್ನು ಅಥವಾ ಇತರ ಯಾವುದೇ ಪ್ರಾಣಿಗಳನ್ನು ಆಚರಣೆಗಳು, ಉತ್ಸವಗಳು ಅಥವಾ ಯಾವುದೇ ಉದ್ದೇಶಕ್ಕಾಗಿ ಎಂದಿಗೂ ಇರಿಸಬೇಡಿ ಅಥವಾ ಬಾಡಿಗೆಗೆ ತೆಗೆದುಕೊಳ್ಳಬೇಡಿ ಎಂದು ದೇವಸ್ಥಾನವು ಕರೆ ನೀಡಿದ್ದನ್ನು ಅನುಸರಿಸಿ, ಪೇಟಾ ಸಂಸ್ಥೆಯು ರೋಬೋಟಿಕ್ ಆನೆಯನ್ನು ನೀಡಿದೆ.
ಭಾನುವಾರ, ಇರಿಂಜದಪ್ಪಿಲ್ಲಿ ರಾಮನ್ ಅವರ ‘ನಡಾಯಿರುತಲ್’ (ದೇವರಿಗೆ ಆನೆಗಳನ್ನು ಅರ್ಪಿಸುವ ಸಮಾರಂಭ) ನಡೆಸಲಾಯಿತು. ಪೇಟಾ ಸಂಸ್ಥೆಯು ಆನೆಗಳನ್ನು ಬಳಸುವ ಎಲ್ಲಾ ಸ್ಥಳಗಳು ಮತ್ತು ಕಾರ್ಯಕ್ರಮಗಳನ್ನು ನೈಜ ಆನೆಗಳ ಬದಲಿಗೆ ಯಾಂತ್ರಿಕ ಆನೆಗಳನ್ನು ಬಳಸಲು ಕೋರಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!