Thrissur: ತಡವಾಗಿ ಎಬ್ಬಿಸಿದ ಕಾರಣಕ್ಕೆ ತಂದೆಯನ್ನೇ ಹಲ್ಲೆಗೈದು ಹತ್ಯೆ ಮಾಡಿದ ಮಗ
Team Udayavani, Apr 8, 2023, 1:02 PM IST
ತ್ರಿಶೂರ್: ಕುಡಿದ ಮತ್ತಿನಲ್ಲಿದ್ದ ಮಗನೊಬ್ಬ ತನ್ನ ತಂದೆಯನ್ನೇ ಹಲ್ಲೆಗೈದು ಹತ್ಯೆ ಮಾಡಿದ ಘಟನೆ ಕೇರಳದ ಚೆರ್ಪುವಿನ ಕೊಡನ್ನೂರುನಲ್ಲಿ ಶುಕ್ರವಾರ (ಏ. 7ರಂದು) ನಡೆದಿದೆ.
ಜಾಯ್ (60) ಮೃತ ತಂದೆ. ರಿಜೋ(25) ಕೃತ್ಯವೆಸಗಿದ ಮಗ.
ವೇಲ್ಡಿಂಗ್ ಕೆಲಸ ಮಾಡಿಕೊಂಡು ಜೀವನವನ್ನು ನಿಭಾಯಿಸಯತ್ತಿದ್ದ ರಿಜೋ ಶುಕ್ರವಾರ ಸಂಜೆಯೇ ಕುಡಿದು ಮನೆಗೆ ಬಂದಿದ್ದಾನೆ. 5 ಗಂಟೆ ಸುಮಾರಿಗೆ ಮನೆಗೆ ಬಂದಾತ, ತಂದೆ – ತಾಯಿಯ ಬಳಿ ತನ್ನನ್ನು 8:15 ಕ್ಕೆ ಎಬ್ಬಿಸಿ ಎಂದು ಹೇಳಿ ಮಲಗಿದ್ದ. ತಂದೆ – ತಾಯಿ ಮಗನನ್ನು ರಾತ್ರಿ 8:30 ಕ್ಕೆ ಎಬ್ಬಿಸಿದ್ದಾರೆ. ಈ ವೇಳೆ ಗಂಟೆ 8:30 ಆದದ್ದು ರಿಜೋನಿಗೆ ತಿಳಿದಿದೆ. ಈ ಕಾರಣಕ್ಕಾಗಿ ಯಾಕೆ ತಡವಾಗಿ ಎಚ್ಚರಿಸಿದ್ದೆಂದು ಜೋರು ಮಾಡಿದ್ದಾನೆ. ಮಗನ ಜೋರು ಧ್ವನಿಗೆ ತಂದೆ ಸುಮ್ಮನಿರು ಎಂದು ಹೇಳಿ ಸಮಾಧಾನ ಮಾಡಲು ಹೋಗಿದ್ದಾರೆ.
ಆದರೆ ಅಪ್ಪನ ಮಾತಿಗೆ ಸಿಟ್ಟಾದ ಮಗ ರಿಜೋ ತಂದೆಯ ಮೇಲೆ ಹಲ್ಲೆಗೈದಿದ್ದಾರೆ. ಈ ವೇಳೆ ವೃದ್ಧ ತಂದೆ ನೆಲಕ್ಕೆ ಬಿದ್ದಿದ್ದಾರೆ. ಈ ವೇಳೆ ಮತ್ತೆ ಹಲ್ಲೆ ಮಾಡಿದ್ದಾರೆ. ಗಂಭೀರ ಗಾಯಗೊಂಡ ಜಾಯ್ ಅವರನ್ನು ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ.
ಘಟನೆ ಬಳಿಕ ಪೊಲೀಸರು ರಿಜೋನನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್
LS Polls: ಮಹಿಳಾ ಮೀಸಲಾತಿ ಕೊಟ್ಟಿದ್ದು ಮೋದಿ, ಕಾಂಗ್ರೆಸ್ನಿಂದ ಸುಳ್ಳಿನ ರಾಜಕಾರಣ: BYR
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ