![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
ಲಿಂಗಪರಿವರ್ತಿತರ ಮದುವೆ
Team Udayavani, Apr 19, 2018, 7:00 AM IST
![27.jpg](https://www.udayavani.com/wp-content/uploads/2018/04/19/27.jpg)
ತಿರುವನಂತಪುರಂ: ಒಂದು ಸಮಯದಲ್ಲಿ ಅವನು ಅವಳಾಗಿಯೂ, ಅವಳು ಅವನಾಗಿಯೂ ಇದ್ದರು. ಅವರಿಬ್ಬರನ್ನೂ ಅವರ ಕುಟುಂಬ ಮನೆಯಿಂದ ಹೊರಹಾಕಿದ್ದವು ಮತ್ತು ಸಮಾಜ ಇನ್ನಿಲ್ಲದಂತೆ ಶೋಷಿಸಿತ್ತು. ಇಂಥ ಶೋಷಣೆಗೆ ಒಳಗಾದವರು ಕೇರಳದ ಇಶಾನ್ ಮತ್ತು ಸೂರ್ಯ. ಇವರಿಬ್ಬರೂ ಲಿಂಗಪರಿವರ್ತನೆ ಮಾಡಿಕೊಂಡ ವ್ಯಕ್ತಿಗಳು. ಈಗ ಇವರಿಬ್ಬರೂ ಮದುವೆಯಾಗುವ ನಿರ್ಧಾರಕ್ಕೆ ಬಂದಿದ್ದಾರೆ. ಈ ಮೂಲಕ ಸಮಾಜದಲ್ಲಿ ಲಿಂಗ ಪರಿವರ್ತಿತರ ಬಗ್ಗೆ ಇರುವ ಪೂರ್ವಗ್ರಹಗಳನ್ನು ತೊಡೆದುಹಾಕಲು ಮುಂದಾಗಿದ್ದಾರೆ.
ಎಲ್ಲರಂತೆಯೇ ಇವರೂ ತಮ್ಮ ಮದುವೆ ಸಮಾರಂಭವನ್ನು ವಿಶೇಷವಾಗಿಸಲು ತಯಾರಿ ನಡೆಸಿದ್ದಾರೆ. ಮೇ. 10ರಂದು ಅವರಿಬ್ಬರೂ ಇಲ್ಲಿಯ ಸಭಾಂಗಣವೊಂದರಲ್ಲಿ ಮದುವೆಯಾಗಲಿದ್ದಾರೆ. ಟೀವಿ ನಟರಾಗಿ ಹೆಸರು ಮಾಡುತ್ತಿರುವ ಸೂರ್ಯ, ವಟ್ಟಿ ಯು ರ್ಕಾವುವಿನ ಮಧ್ಯಮ ವರ್ಗದ ಕುಟುಂ ಬಕ್ಕೆ ಸೇರಿರುವವರು. 2014ರಲ್ಲಿ ಲಿಂಗ ಪರಿವರ್ತನೆ ಶಸ್ತ್ರಚಿಕಿತ್ಸೆ ಮಾಡಿಸಿ ಕೊಂಡು ಮಹಿಳೆಯಾಗಿ ಬದಲಾಗಿದ್ದಾರೆ. ಮುಸ್ಲಿಂ ಕುಟುಂಬವೊಂದರಲ್ಲಿ ಹೆಣ್ಣಾಗಿ ಜನಿಸಿದ್ದ ಇಶಾನ್ರದ್ದು ಕೂಡ ಇದೇ ಕಥೆ. ಅವರು ಗಂಡಾಗಿ ಮಾರ್ಪಾಡಾದವರು. ತಮ್ಮಿಚ್ಛೆಯ ಲಿಂಗವನ್ನು ಆಯ್ಕೆ ಮಾಡಿಕೊಂಡ ಕಾರಣ ಇವರಿಬ್ಬರೂ ತಮ್ಮ ಕುಟುಂಬದಿಂದ ದೂರಾಗಿದ್ದರು. ಎನ್ಜಿಒ ಒಂದರಲ್ಲಿ ಭೇಟಿಯಾದ ಇವರು ಇದೀಗ ಮದುವೆ ಯಾಗಲು ನಿರ್ಧರಿಸಿದ್ದಾರೆ. ಲಿಂಗ ಪರಿವರ್ತಿ ತರನ್ನು ಸಮಾಜ ಒಪ್ಪಿಕೊಳ್ಳುವಂತೆ ಮಾಡ ಬೇಕು. ಅಂತರ್ಧರ್ಮೀಯ ವಿವಾಹಗಳನ್ನು ಸ್ವೀಕರಿಸಲು ಒಂದು ನಿದರ್ಶನವಾಗಬೇಕು ಎಂಬ ಆಶಯಗಳು ಇವರಿಬ್ಬರದು.
ಟಾಪ್ ನ್ಯೂಸ್
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![modi (4)](https://www.udayavani.com/wp-content/uploads/2024/07/modi-4-4-150x92.jpg)
NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!
![Exam](https://www.udayavani.com/wp-content/uploads/2024/07/Exam-8-150x84.jpg)
NEET ಟಾಪರ್ಗಳ ಸಂಖ್ಯೆ 67ರಿಂದ ಈಗ 17ಕ್ಕೆ ಇಳಿಕೆ!
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
MUST WATCH
ಹೊಸ ಸೇರ್ಪಡೆ
![Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/shi1-150x83.jpg)
Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.