ಕೇರಳದ ಹಲವೆಡೆ ಭಾರೀ ಮಳೆ: ವ್ಯಕ್ತಿ ಸಾವು
ರಾಜಸ್ಥಾನ ಮಳೆ ಪ್ರಕೋಪ: 12 ಮಂದಿ ನೀರು ಪಾಲು
Team Udayavani, Aug 1, 2022, 12:20 AM IST
ತಿರುವನಂತಪುರ/ಕೊಲ್ಲಂ: ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ರವಿವಾರ ಉಂಟಾದ ಹಠಾತ್ ಪ್ರವಾಹದಲ್ಲಿ ಒಬ್ಬ ವ್ಯಕ್ತಿ ಅಸುನೀಗಿ, ಮತ್ತೊಬ್ಬನಿಗೆ ತೀವ್ರ ಗಾಯಗಳಾಗಿವೆ. ಇತರ ಮೂವರನ್ನು ಪಾರು ಮಾಡಲಾಗಿದೆ.
ಜಿಲ್ಲೆಯ ಕುಂಭವುರುತ್ತಿ ಜಲಪಾತದಲ್ಲಿ ಈ ಘಟನೆ ನಡೆದಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕೊಟ್ಟಾಯಂ ಜಿಲ್ಲೆಯಲ್ಲಿ ಕೂಡ ಪ್ರವಾಹದಿಂದ ಹಲವು ರೀತಿಯ ಹಾನಿಯಾಗಿದೆ.
ಈ ನಡುವೆ, ರಾಜ್ಯದಲ್ಲಿ ಆ. 4ರ ವರೆಗೆ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ರವಿವಾರ ಮುನ್ನೆಚ್ಚರಿಕೆ ಕೊಟ್ಟಿದೆ.
12 ಮಂದಿ ನೀರು ಪಾಲು: ರಾಜಸ್ಥಾನದ ಹಲವು ಜಿಲ್ಲೆಗಳಲ್ಲಿ ಮಳೆ ಪ್ರಕೋಪಕ್ಕೆ ನದಿಗಳು ಉಕ್ಕೇರಿ ಹರಿದಿವೆ. ಇದರಿಂದಾಗಿ ಒಟ್ಟು 12 ಮಂದಿ ನೀರು ಪಾಲಾಗಿದ್ದಾರೆ. ಈ ಪೈಕಿ ಶ್ರೀಗಂಗಾನಗರ ಜಿಲ್ಲೆಯೊಂದರಲ್ಲಿಯೇ ಐವರು ನೀರು ಪಾಲಾಗಿದ್ದಾರೆ.
ಹಲವೆಡೆ ಮಳೆ: ಪಂಜಾಬ್ ಮತ್ತು ಹರಿಯಾಣದ ವಿವಿಧ ಜಿಲ್ಲೆಗಳಲ್ಲಿ ರವಿವಾರ ಧಾರಾಕಾರ ಮಳೆಯಾಗಿದೆ. ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯಲ್ಲಿ ಮಳೆಯಾದ್ದರಿಂದ ಬಿಯಾಸ್ ನದಿಯಲ್ಲಿ ಪ್ರವಾಹ ಉಕ್ಕಿ ಹರಿದಿದೆ. ಉತ್ತರ ಪ್ರದೇಶದ ವಾರಾಣಸಿಯಲ್ಲಿ ಹೆಚ್ಚು ಮಳೆಯಾಗಿದ್ದರಿಂದ ಗಂಗಾ ನದಿ ಉಕ್ಕಿ ಹರಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ