ಝೀಕಾ ಹಿಮ್ಮೆಟ್ಟಿಸಲು ಕೇಂದ್ರದ ವಿಶೇಷ ತಜ್ಞರ ತಂಡದೊಂದಿಗೆ ಕೇರಳ ಹೋರಾಟ..!


Team Udayavani, Jul 12, 2021, 8:20 PM IST

Kerala’s double whammy: Central team, state govt battle Zika outbreak amid rising Covid cases

ತಿರುವನಂತಪುರಂ : ಕೇರಳದಲ್ಲಿ ಕೋವಿಡ್ ಸೋಂಕಿನ ನಡುವ ಹೊಸದಾಗಿ ಆತಂಕ ಸೃಷ್ಟಿ ಮಾಡಿದ ಝೀಕಾ ವೈರ್ಸ್ ನ ಬಗ್ಗೆ ಪರಿಶೀಲಿಸಲು ಕೇಂದ್ರ ಸರ್ಕಾರದ ವಿಶೇಷ ತಂಡ ಕೇರಳಕ್ಕೆ ಆಗಮಿಸಿದೆ.

ಸದ್ಯ, ಕೇರಳದಲ್ಲಿ 18 ಸಕ್ರಿಯ ಝಿಕಾ ವೈರಸ್ ಪ್ರಕರಣಗಳು ಪತ್ತೆಯಾಗಿದ್ದು, ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯ ಸರ್ಕಾರದೊಂದಿಗೆ ಕೈ ಜೋಡಿಸಲು ಆರು ಸದಸ್ಯರ ಕೇಂದ್ರ ತಂಡವನ್ನು ಕೇರಳಕ್ಕೆ ಕಳುಹಿಸಲಾಗಿದೆ.

ತಿರುವನಂತಪುರಂ ಜಿಲ್ಲಾ ವೈದ್ಯಕೀಯ ಅಧಿಕಾರಿ (ಡಿಎಂಒ) ಡಾ. ಶಿನು ಕೆ.ಎಸ್. ಅವರನ್ನು ಒಳಗೊಂಡು ರಾಜ್ಯದ ಉನ್ನತ ಅಧಿಕಾರಿಗಳೊಂದಿಗೆ ಇಂದು ಆರಂಭಿಕ ಸಭೆಯನ್ನು ಕೇಂದ್ರ ತಂಡ ನಡೆಸಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ : ಝೀಕಾ ವೈರಸ್‌ ಬಗ್ಗೆ ಎಚ್ಚರವಹಿಸಿ : ಸಾರ್ವಜನಿಕರಲ್ಲಿ ಉಡುಪಿ ಜಿಲ್ಲಾಧಿಕಾರಿ ಮನವಿ

ಇನ್ನು, ಆರಂಭಿಕ ಪ್ರಕರಣಗಳು ವರದಿಯಾದ ತಿರುವನಂತಪುರಂನ ಖಾಸಗಿ ಆಸ್ಪತ್ರೆಯ ಸಮೀಪವಿರುವ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿ ಪರಿಶೀಲನೆ ನಡೆಸಿದ ತಂಡ, ಪ್ರದೇಶದಿಂದ ಸೊಳ್ಳೆ, ಲಾರ್ವಾಗಳನ್ನು ತಪಾಸಣೆಗಾಗಿ ಸಂಗ್ರಹಿಸಿದೆ ಎಂದು ತಿಳಿದು ಬಂದಿದೆ.

ರಾಷ್ಟ್ರೀಯ ಸುದ್ದಿ ಸಂಸ್ಥೆ ಇಂಡಿಯಾ ಟುಡೆಯೊಂದಿಗೆ ಮಾತನಾಡಿದ ಶಿನು, ಕೋವಿಡ್ ಸೋಂಕಿನ ನಡುವೆ ಝೀಕಾ ಎಂಬ ಹೊಸ ವೈರಸ್ ಕೇರಳಕ್ಕೆ ಆತಂಕವನ್ನು ಸೃಷ್ಟಿ ಮಾಡಿದೆ ಎಂದಿದ್ದಾರೆ.

ಝೀಕಾ ಕೇರಳಕ್ಕೆ ಹೊಸ ರೋಗ. ಅದನ್ನು ನಿರ್ವಹಿಸುವಲ್ಲಿ ನಮಗೆ ಅನುಭವವಿಲ್ಲ. ನಾವುಈಗಾಗಲೇ ಕೇಂದ್ರ ತಂಡದೊಂದಿಗೆ ಚರ್ಚೆ ನಡೆಸಿದ್ದೇವೆ. ಪ್ರತಿಯೊಂದು ಪ್ರಕರಣವನ್ನು ತಂಡದ ಸದಸ್ಯರಿಗೆ ವಿವರಿಸಲಾಗಿದೆ. ಸೈಟ್ ಮತ್ತು ಸ್ಥಳ, ಎಲ್ಲವನ್ನೂ ಪರಿಶೀಲಿಸಲಾಗಿದೆ ಎಂದಿದ್ದಾರೆ.

ಕೇರಳದಲ್ಲಿ ಕೇಂದ್ರ ತಂಡದ ಉಪಸ್ಥಿತಿ ಮತ್ತು ಸಲಹೆಗಳು ತುಂಬಾ ಮೌಲ್ಯಯುತವಾಗಿವೆ.ಝೀಕಾವನ್ನು ನಿಭಾಯಿಸುವ ಸೂತ್ರವನ್ನು ನಾವು ಇಂದು ಕಂಡುಕೊಂಡಿದ್ದೇವೆ. ಝೀಕಾ ವೈರಸ್ ವಿರುದ್ಧ ಹೋರಾಡಲು ಕೇರಳ ಕೇಂದ್ರ ತಂಡದೊಂದಿಗೆ ಕಾರ್ಯೋನ್ಮುಖವಾಗಿದೆ ಎಂದು ತಿಳಿಸಿದ್ದಾರೆ.

ಜನರಲ್ಲಿ ಜಾಗೃತಿ ಮೂಡಿಸುವ ಅಭಿಯಾನವನ್ನು ನಾವು ಪ್ರಾರಂಭಿಸಿದ್ದೇವೆ. ಜಿಲ್ಲಾಡಳಿತವೂ ಆದೇಶಗಳನ್ನು ಹೊರಡಿಸಿದೆ. ಕೇಂದ್ರ ತಂಡದ ತಜ್ಞರು ನಮಗೆ ಮಾರ್ಗದರ್ಶನ ನೀಡುತ್ತಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ : ಅಫ್ಘನ್ ಗೆ ಅಮೆರಿಕದ ಪ್ರಮುಖ ಕಮಾಂಡರ್‌ ವಿದಾಯ : ಅಧಿಕಾರ ಹಸ್ತಾಂತರಿಸಿದ ಜ.ಸ್ಕಾಟ್ ಮಿಲ್ಲರ್‌

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

ಕೈಗೆ ಪಿತ್ರೋಡಾರ್ಜಿತ ಸಂಕಟ! ಬಿಜೆಪಿಗೆ ಸಿಕ್ಕಿದ ಹೊಸ ಅಸ್ತ್ರ ; ಕಂಗೆಟ್ಟ ಕಾಂಗ್ರೆಸ್‌

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Madhya Pradesh Rally; ಕೈಯಿಂದ ಮೀಸಲಾತಿ ಕಸಿಯುವ ಯತ್ನ: ಪ್ರಧಾನಿ ಮೋದಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rajveer Diler: ಬಿಜೆಪಿ ಸಂಸದ ರಾಜವೀರ್ ದಿಲೇರ್ ಹೃದಯಾಘಾತದಿಂದ ನಿಧನ

Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್‌ವೀರ್ ದಿಲೇರ್ ನಿಧನ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.