ಐಎಂ ಸ್ಫೋಟಕ ಉಗ್ರನ ಬಂಧನ
Team Udayavani, Feb 15, 2018, 6:30 AM IST
ನವದೆಹಲಿ: ಕರ್ನಾಟಕದ ಉಡುಪಿಯಿಂದ 2008ರ ಸೆಪ್ಟೆಂಬರ್ನಲ್ಲಿ ನವದೆಹಲಿಗೆ ಸ್ಫೋಟಕಗಳನ್ನು ತೆಗೆದುಕೊಂಡು ಹೋಗಿದ್ದ ಇಂಡಿಯನ್ ಮುಜಾಹಿದೀನ್ ಉಗ್ರ ಆರಿಜ್ ಖಾನ್ ಅಲಿಯಾಸ್ ಜುನೈದ್ (32)ನನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಭಾರತ ಮತ್ತು ನೇಪಾಳ ಗಡಿ ಪ್ರದೇಶದಲ್ಲಿ ನಡೆಸಲಾಗಿರುವ ಕಾರ್ಯಾಚರಣೆಯಲ್ಲಿ ಆತನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ವಿಶೇಷ ತಂಡದ ಡಿ.ಸಿ.ಪಿ.ಪ್ರದೀಪ್ ಸಿಂಗ್ ಖುಶ್ವಾಹ ಹೇಳಿದ್ದಾರೆ. 2008ರಲ್ಲಿ ನವದೆಹಲಿಯ ಬಾತ್ಲಾ ಎನ್ಕೌಂಟರ್ ವೇಳೆ ಇದ್ದ ನಾಲ್ವರು ಉಗ್ರರಲ್ಲಿ ಈತನೂ ಒಬ್ಬ ಎಂಬ ಮಾಹಿತಿ ಲಭ್ಯವಾಗಿದೆ ಎಂದಿದ್ದಾರೆ. ಈತ ಉತ್ತರ ಪ್ರದೇಶ, ಗುಜರಾತ್ನ ಅಹಮದಾಬಾದ್, ರಾಜಸ್ಥಾನದ ಜೈಪುರ ಸೇರಿದಂತೆ ದೇಶದ ಹಲವೆಡೆ ನಡೆದ ಬಾಂಬ್ ಸ್ಫೋಟಗಳಲ್ಲಿ ಈತ ಭಾಗಿಯಾಗಿದ್ದಾನೆ ಎಂದು ಅವರು ಹೇಳಿದ್ದಾರೆ. ಈತನ ಬಗ್ಗೆ ಮಾಹಿತಿ ನೀಡಿದವರಿಗೆ 15 ಲಕ್ಷ ರೂ. ಬಹುಮಾನ ಕೂಡ ಘೋಷಿಸಲಾಗಿತ್ತು. ಈತ ಬಾಂಬ್ ಇರಿಸುವುದರಲ್ಲಿ ಸಿದ್ಧಹಸ್ತನಿದ್ದು ಈತನಿಂದಾಗಿ 165 ಮಂದಿ ಸಾವಿಗೀಡಾಗಿ, 535 ಮಂದಿ ಗಾಯಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ