ಭಾರತದಲ್ಲಿ ವ್ಯಾಸಂಗ ಮಾಡಿದ್ದ ತಾಲಿಬಾನ್ ವಕ್ತಾರ!
ಕುತೂಹಲದ ವಿಚಾರ ಪ್ರಕಟಿಸಿದ ಅಮೆರಿಕದ "ವಾಲ್ಸ್ಟ್ರೀಟ್ ಜರ್ನಲ್'
Team Udayavani, Nov 30, 2021, 9:55 AM IST
ನವದೆಹಲಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಅಲ್ಲಿನ ಹಣಕಾಸು ಇಲಾಖೆಯ ವಕ್ತಾರನಾಗಿ ನೇಮಕವಾಗಿರುವ ಅಹ್ಮದ್ ವಲಿ ಹಕ್ಮಲ್, ಕೆಲವು ವರ್ಷಗಳ ಹಿಂದೆ ಅಫ್ಘಾನಿಸ್ತಾನದ ವಿದ್ಯಾರ್ಥಿ ವೇತನದ ಸಹಾಯದೊಂದಿಗೆ ಭಾರತದಲ್ಲಿ ಪದವಿ ವ್ಯಾಸಂಗ ಮಾಡಿದ್ದ ಎಂಬ ಕುತೂಹಲದ ವಿಚಾರವೊಂದನ್ನು ಅಮೆರಿಕ “ವಾಲ್ಸ್ಟ್ರೀಟ್ ಜರ್ನಲ್’ ಪ್ರಕಟಿಸಿದೆ.
ವರ್ಷಗಳ ಹಿಂದೆ, ಈ ವ್ಯಕ್ತಿ ಕಂದಹಾರ್ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕನಾಗಿ ಸೇವೆ ಸಲ್ಲಿಸುತ್ತಿದ್ದ. ಈತ ಸೈದ್ಧಾಂತಿಕವಾಗಿ ತಾಲಿಬಾನ್ ಪರವಾಗಿದ್ದ. ಜೊತೆಗೆ, ಗೌಪ್ಯವಾಗಿ ತಾಲಿಬಾನ್ ಸಂಘಟನೆಯ ಸಕ್ರಿಯ ಸದಸ್ಯನೂ ಆಗಿದ್ದ. ಈತನನ್ನು ಅಫ್ಘಾನಿಸ್ತಾನ ಸರ್ಕಾರ ಉನ್ನತ ವ್ಯಾಸಂಗಕ್ಕಾಗಿ ಭಾರತಕ್ಕೆ ಕಳುಹಿಸಿತ್ತು.
ಇದನ್ನೂ ಓದಿ:ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ
ಉತ್ತರ ಪ್ರದೇಶದ ಅಲೀಗಡ ವಿಶ್ವವಿದ್ಯಾಲಯದಲ್ಲಿ ಈತ ಮಾನವ ಹಕ್ಕುಗಳ ವಿಷಯದಲ್ಲಿ ಪದವಿ ಪಡೆದಿದ್ದ ಎಂದು ಹೇಳಲಾಗಿದೆ. ಅಲ್ಲದೆ, ಅಫ್ಘಾನಿಸ್ತಾನಕ್ಕೆ ಹಿಂದಿರುಗಿದ ನಂತರ ಈತ ಶೆರಿಯಾ ಕಾನೂನು ಅಧ್ಯಯನ ಮಾಡಿ, ತಾನೂ ಉಗ್ರವಾದಿಯಾಗಲು ಹಂಬಲಿಸಿದ್ದ. ಅದಕ್ಕಾಗಿ ತಾಲಿಬಾನಿಗಳ ಒಪ್ಪಿಗೆಗೂ ಮನವಿ ಸಲ್ಲಿಸಿದ್ದ. ಆದರೆ, ಉಗ್ರರು ಈತನು ವಿಶ್ವವಿದ್ಯಾಲಯದಲ್ಲೇ ಇದ್ದುಕೊಂಡು ಅಫ್ಘನ್ ಜನರಲ್ಲಿ ಅರಿವು ಮೂಡಿಸುವ ಬಗ್ಗೆ ಸೂಚಿಸಿದ್ದರು ಎಂದು ವರದಿಯಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್ ಘೋಷಣೆ ಬರೆದ ವಿದ್ಯಾರ್ಥಿ ಪಾಸ್: ಪ್ರಾಧ್ಯಾಪಕ ಅಮಾನತು!
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
MUST WATCH
ಹೊಸ ಸೇರ್ಪಡೆ
“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
Desi Swara: ಮಸ್ಕತ್- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ