ಪುರಿ ಜಗನ್ನಾಥ ದೇವಾಲಯದ ಪ್ರಾಚೀನ ರತ್ನ ಭಂಡಾರದ ಬೀಗದ ಕೈ ನಾಪತ್ತೆ


Team Udayavani, Jun 4, 2018, 3:42 PM IST

puri-jagannath-temple-700.jpg

ಭುವನೇಶ್ವರ/ಪುರಿ : ಹನ್ನೆರಡನೇ ಶತಮಾನದ ಇತಿಹಾಸ ಪ್ರಸಿದ್ಧ ಪುರಿ ಜಗನ್ನಾಥ ದೇವಾಲಯದ ರತ್ನ ಭಂಡಾರದ ಬೀಗದ ಕೈ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. 

ಪುರಿಯ ಶ್ರೀ ಶಂಕರಾಚಾರ್ಯ, ಸ್ವಾಮಿ ನಿಶ್ಚಲಾನಂದ ಸರಸ್ವತಿ ಮತ್ತು ಭಾರತೀಯ ಜನತಾ ಪಕ್ಷದ ಪ್ರಬಲ ಪ್ರತಿಭಟನೆಯನ್ನು ಲೆಕ್ಕಿಸಿ ಒಡಿಶಾ ಮುಖ್ಯಮಂತ್ರಿ ನವೀನ್‌ ಪಟ್ಟನಾಯಕ್‌ ಅವರು ಇಂದು ಸೋಮವಾರ ಈ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ. 

ಕಳೆದ ಎಪ್ರಿಲ್‌ 4ರಂದು ಶ್ರೀ ಜಗನ್ನಾಥ ದೇವಾಲಯದ ಆಡಳಿತ ಮಂಡಳಿಯ ಸಭೆ ನಡೆದಿದ್ದಾಗಲೇ ರತ್ನ ಭಂಡಾರದ ಬೀಗದ ಕೈ ನಾಪತ್ತೆಯಾಗಿರುವ ವಿಷಯ ಬೆಳಕಿಗೆ ಬಂದಿತ್ತು. 

ಸುಮಾರು 34 ವರ್ಷಗಳ ಬಳಿಕ ಕಳೆದ ಎಪ್ರಿಲ್‌ 4ರಂದು ಒಡಿಶಾ ಹೈಕೋರ್ಟ್‌ ಆದೇಶದ ಪ್ರಕಾರ ದೇವಾಲಯದ ರತ್ನ ಭಂಡಾರದ ಸ್ಥಿತಿಗತಿಯನ್ನು ಪರಿಶೀಲಿಸಲು 16 ಸದಸ್ಯರ ತಂಡವು ಬಿಗಿ ಭದ್ರತೆಯೊಂದಿಗೆ ಭಂಡಾರವನ್ನು ಪ್ರವೇಶಿಸುವುದಿತ್ತು. 2016ರಲ್ಲಿ  ಭಾರತದ ಪ್ರಾಕ್ತನ ಸರ್ವೇಕ್ಷಣ ಇಲಾಖೆ ಕೈಗೊಂಡಿದ್ದ ದುರಸ್ತಿ ಕಾರ್ಯದ ಉಸ್ತುವಾರಿ ನಡೆಸಿದ್ದ  ಕೋರ್ಟ್‌, ರತ್ನ ಭಂಡಾರ ಕಟ್ಟಡದ ಭದ್ರತೆ ಮತ್ತು ಸುರಕ್ಷೆಯನ್ನು ಪರಿಶೀಲಿಸುವಂತೆ ಎಎಸ್‌ಐಗೆ ಆದೇಶಿಸಿತ್ತು. 

ಎ.4ರಂದು ರತ್ನ ಭಂಡಾರ ಪ್ರವೇಶಿಸಲಿದ್ದ ತಂಡಕ್ಕೆ ಭಂಡಾರದ ಬೀಗದ ಕೈ ಸಿಗದೇ ಇದ್ದ ಕಾರಣ ಅದಕ್ಕೆ ಒಳಪ್ರವೇಶ ಸಾಧ್ಯವಾಗಿರಲಿಲ್ಲ. ಆಗ ಅದು ಶೋಧಕ ದೀಪಗಳ ನೆರವಿನಲ್ಲಿ ಹೊರಗಿನಿಂದಲೇ ಕಬ್ಬಿಣದ ಸರಳುಗಳ ಮೂಲಕ ಒಳಗಿನ ಭಾಗವನ್ನು ವೀಕ್ಷಿಸಿತ್ತು. 

12ನೇ ಶತಮಾನದ ಈ ಪ್ರಾಚೀನ ದೇವಾಲಯದ ರತ್ನ ಭಂಡಾರ ಒಟ್ಟು 7 ಕೋಣೆಗಳನ್ನು ಹೊಂದಿದೆ. ಮೊದಲ ಎರಡು ಕೋಣೆಗಳನ್ನು ಕಾಲಕಾಲಕ್ಕೆ ಉಪಯೋಗಿಸಲಾಗಿದೆ. ಉಳಿದ ಕೋಣೆಗಳು ಒಳಗಿನ ಸಾಲಿನಲ್ಲಿ ಇರುವವುಗಳಾಗಿವೆ. 

ಜಗನ್ನಾಥ ದೇವಾಲಯದ ಆಡಳಿತ ಸಮಿತಿಯ ಬಳಿಯಾಗಲೀ ಪುರಿ ಜಿಲ್ಲಾ ಭಂಡಾರದಲ್ಲಾಗಲೀ ರತ್ನ ಭಂಡಾರದ ಬೀಗದ ಕೈಗಳು ಇಲ್ಲ ಎಂದು ರಾಮಚಂದ್ರ ದಾಸ ಮಹಾಪಾತ್ರ ತಿಳಿಸಿದ್ದಾರೆ. 

ಈ ಬಗ್ಗೆ ಪುರಿಯ ಶ್ರೀ ಶಂಕರಾಚಾರ್ಯರು ಮತ್ತು ಬಿಜೆಪಿ ಪತ್ರಮುಖೇನ ಒಡಿಶಾ ಮುಖ್ಯಮಂತ್ರಿಯಿಂದ ಸ್ಪಷ್ಟನೆ ಕೇಳಿದ್ದಾರೆ.

ಬೀಗದ ಕೈಗಳು ಎಲ್ಲಿ, ಹೇಗೆ, ಯಾವಾಗ ನಾಪತ್ತೆಯಾದವು ಎಂಬ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟನೆ ಕೊಡಲೇಬೇಕು ಎಂದು ರಾಜ್ಯ ಬಿಜೆಪಿ ವಕ್ತಾರ ಪೀತಾಂಬರ ಆಚಾರ್ಯ ಸುದ್ದಿಗಾರರಿಗೆ ಹೇಳಿದರು. 

ಟಾಪ್ ನ್ಯೂಸ್

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Vijayapura; Complaint to Election Commission against Yatnal: Shivananda Patil

Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ

3-Jio

Reliance Jio Profit; ರಿಲಯನ್ಸ್‌ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.