Operation Blue Star ವರ್ಷಾಚರಣೆ: ಖಾಲಿಸ್ಥಾನ್ ಜಿಂದಾಬಾದ್ ಘೋಷಣೆ
Team Udayavani, Jun 6, 2017, 11:57 AM IST
ಅಮೃತಸರ : ಆಪರೇಶನ್ ಬ್ಲೂ ಸ್ಟಾರ್ ನ 33ನೇ ಸ್ಮರಣ ವರ್ಷಾಚರಣೆ ಪ್ರಯುಕ್ತ ಇಂದು ಮಂಗಳವಾರ ಇಲ್ಲಿನ ಸ್ವರ್ಣ ಮಂದಿರದಲ್ಲಿ ಜಮಾಯಿಸಿದ ಭಾರೀ ಸಂಖ್ಯೆಯ ಸಿಕ್ಖರು “ಖಾಲಿಸ್ಥಾನ್ ಜಿಂದಾಬಾದ್, ಖಾಲಿಸ್ಥಾನ್ ಜಿಂದಾಬಾದ್’ ಎಂಬ ಘೋಷಣೆಗಳನ್ನು ಕೂಗಿದರು.
ಸಿಕ್ಖ ಧರ್ಮದ ಐದು ಅತ್ಯಂತ ಪ್ರಮುಖ ಪವಿತ್ರ ತಾಣಗಳಲ್ಲಿ ಒಂದಾಗಿರುವ ಸ್ವರ್ಣ ಮಂದಿರದಲ್ಲಿಂದು ಸೇರಿದ ನೂರಾರು ಸಿಕ್ಖರು “ಖಾಲಿಸ್ಥಾನ್ ಜಿಂದಾಬಾದ್ ‘ ಎಂಬ ಘೋಷಣೆ ಕೂಗುವುದನ್ನು ಕಾಣಿಸುವ ವಿಡಿಯೋ ಚಿತ್ರಿಕೆಯನ್ನು ಎಎನ್ಐ ಸುದ್ದಿ ಸಂಸ್ಥೆ ಇಂಟರ್ನೆಟ್ನಲ್ಲಿ ಹಾಕಿದೆ.
“ಖಾಲಿಸ್ಥಾನ’ ಎಂಬ ಪ್ರತ್ಯೇಕ ಸಿಕ್ಖ ರಾಷ್ಟ ವನ್ನು ಸ್ಥಾಪಿಸುವ, ಸಿಕ್ಖ ಉಗ್ರ, ಪ್ರತ್ಯೇಕತಾವಾದಿ ನಾಯಕ, ಸಂತ ಜರ್ನೈಲ್ ಸಿಂಗ್ ಭಿಂದ್ರನ್ವಾಲೆ 33 ವರ್ಷಗಳ ಹಿಂದೆ “ಸ್ವರ್ಣ ಮಂದಿರ’ವನ್ನೇ ತನ್ನ ಕಾರಸ್ಥಾನವನ್ನಾಗಿ ಮಾಡಿಕೊಂಡು ಭಾರತ ಸರಕಾರದ ವಿರುದ್ಧ ನಡೆಸುತ್ತಿದ್ದ ಹಿಂಸಾತ್ಮಕ ಸಶಸ್ತ್ರ ಆಂದೋಲನ ಪರಾಕಾಷ್ಠೆಗೆ ಏರಿದ್ದ ಸಂದರ್ಭದಲ್ಲಿ ಅಂದಿನ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರು ಸ್ವರ್ಣ ಮಂದಿರಕ್ಕೆ ಸೈನಿಕರನ್ನು ನುಗ್ಗಿಸಿ ಸಿಕ್ಖ ಉಗ್ರರನ್ನು ಮುಗಿಸಿ ಬಿಡುವ “ಆಪರೇಶನ್ ಬ್ಲೂಸ್ಟಾರ್’ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ನಡೆಸಿದ್ದರು.
ಅಲ್ಲಿಯ ಬಳಿಕ ವರ್ಷಂಪ್ರತಿ ಈ ದಿನದಂದು ಸಿಕ್ಖರು “ಆಪರೇಶನ್ ಬ್ಲೂ ಸ್ಟಾರ್’ ಸ್ಮರಣ ವರ್ಷಾಚರಣೆಯನ್ನು ನಡೆಸಿಕೊಂಡು ಬಂದಿದ್ದಾರೆ.
#WATCH Amritsar: 'Khalistan Zindabad' slogans raised in Golden Temple on Operation Bluestar anniversary pic.twitter.com/dKnSgQQBbA
— ANI (@ANI_news) June 6, 2017
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
MUST WATCH
ಹೊಸ ಸೇರ್ಪಡೆ
Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’