ಪಂಜಾಬ್ ಪೊಲೀಸರಿಂದ ಖಲಿಸ್ತಾನಿ ನಾಯಕ ಅಮೃತಪಾಲ್ ಸಿಂಗ್ ಬಂಧನ
Team Udayavani, Mar 18, 2023, 5:35 PM IST
ಚಂಡೀಗಢ: ಖಲಿಸ್ತಾನಿ ನಾಯಕ ಮತ್ತು ವಾರಿಸ್ ಪಂಜಾಬ್ ಡಿ ಮುಖ್ಯಸ್ಥ ಅಮೃತಪಾಲ್ ಸಿಂಗ್ ಅವರನ್ನು ಶನಿವಾರ ಜಲಂಧರ್ ನ ನಕೋದರ್ ಬಳಿ ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.
ಪ್ರತ್ಯೇಕತಾವಾದಿ ನಾಯಕನ ವಿರುದ್ಧ ಪಂಜಾಬ್ ಪೊಲೀಸರು ಶನಿವಾರ ಕ್ರಮ ಕೈಗೊಂಡ ಬಳಿಕ ಈ ಬೆಳವಣಿಗೆ ನಡೆದಿದೆ. ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಗೃಹ ಸಚಿವಾಲಯವು ಪಂಜಾಬ್ ಸರ್ಕಾರದೊಂದಿಗೆ ನಿರಂತರ ಸಂಪರ್ಕದಲ್ಲಿದೆ ಎಂದು ವರದಿ ಹೇಳಿದೆ.
ಆತನ ಆರು ಮಂದಿ ಸಹಾಯಕರನ್ನು ಈ ಹಿಂದೆ ಜಲಂಧರ್ ನಲ್ಲಿ ಬಂಧಿಸಲಾಗಿತ್ತು. ಅವರನ್ನು ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.
ಇದನ್ನೂ ಓದಿ:ಪುಲ್ವಾಮಾದಲ್ಲಿ ಬಸ್ ಅವಘಡ; ನಾಲ್ವರು ಮೃತ್ಯು, 28 ಮಂದಿ ಆಸ್ಪತ್ರೆಗೆ ದಾಖಲು
ಪಂಜಾಬ್ ಪೊಲೀಸರು ಶಾಕೋಟ್ ಬಳಿ ಅಮೃತಪಾಲ್ ಸಿಂಗ್ ಅವರಿದ್ದ ಸ್ಥಳವನ್ನು ಪತ್ತೆ ಹಚ್ಚಿ ನಂತರ ಬಂಧಿಸಲು ಮುಂದಾಗಿದ್ದಾರೆ. ಅವರನ್ನು ಬಂಧಿಸುವ ಪ್ರಯತ್ನದಲ್ಲಿ 50 ಕ್ಕೂ ಹೆಚ್ಚು ಪೊಲೀಸ್ ವಾಹನಗಳು ಖಲಿಸ್ತಾನಿ ನಾಯಕ ಮತ್ತು ಅವರ ಸಹಾಯಕರನ್ನು ಹಿಂಬಾಲಿಸಿದವು. ಪಂಜಾಬ್ ನ ಹಲವಾರು ಜಿಲ್ಲೆಗಳಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ನಿರ್ಬಂಧಿಸಲಾಗಿದೆ.
ಕಳೆದ ತಿಂಗಳು ಅಮೃತಪಾಲ್ ಸಿಂಗ್ ಮತ್ತು ಅವರ ಬೆಂಬಲಿಗರು ಪೊಲೀಸ್ ಬ್ಯಾರಿಕೇಡ್ ಗಳನ್ನು ಭೇದಿಸಿ ಅಜ್ನಾಲಾ ಪೊಲೀಸ್ ಠಾಣೆಗೆ ಶಸ್ತ್ರಾಸ್ತ್ರಗಳನ್ನು ಝಳಪಿಸಿದ್ದರು. ಗಲಭೆಯಲ್ಲಿ ಬಂಧಿಸಲಾಗಿದ್ದ ಅವರ ಸಹಾಯಕರಲ್ಲಿ ಒಬ್ಬನನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಬೆಂಬಲಿಗರು ಪೊಲೀಸ್ ಸಿಬ್ಬಂದಿಯೊಂದಿಗೆ ಘರ್ಷಣೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ
ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ
ತಂಗಿ ಮದುವೆಗೆ ಟಿವಿ ಗಿಫ್ಟ್ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
MUST WATCH
ಹೊಸ ಸೇರ್ಪಡೆ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು
Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ
ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ