Parliament ವಿಶೇಷ ಅಧಿವೇಶನಕ್ಕೂ ಮುನ್ನ ಖರ್ಗೆ ನೇತೃತ್ವದಲ್ಲಿ ಇಂಡಿಯಾ ಸಂಸದರ ಸಭೆ
ಸೆ.5 ರಂದು ವಿಪಕ್ಷಗಳು ಕಾರ್ಯತಂತ್ರವನ್ನು ನಿರ್ಧರಿಸಲಿವೆ...
Team Udayavani, Sep 3, 2023, 5:27 PM IST
ಹೊಸದಿಲ್ಲಿ: ಸಂಸತ್ತಿನ ವಿಶೇಷ ಅಧಿವೇಶನಕ್ಕೆ ಮುಂಚಿತವಾಗಿ, ಎಐಸಿಸಿ ಅಧ್ಯಕ್ಷ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೆಪ್ಟೆಂಬರ್ 5 ರಂದು ಇಂಡಿಯಾ ಮೈತ್ರಿಕೂಟದ ಪಾಲುದಾರರ ಸಂಸದರ ಸಭೆಯನ್ನು ಕರೆದಿದ್ದಾರೆ.
ಖರ್ಗೆ ರಾಜಾಜಿ ಮಾರ್ಗದ ನಿವಾಸದಲ್ಲಿ ಸಭೆಯನ್ನು ಕರೆದಿದ್ದು, ಸೆಪ್ಟೆಂಬರ್ 18 ರಿಂದ 22 ರವರೆಗೆ ನಡೆಯಲಿರುವ ವಿಶೇಷ ಅಧಿವೇಶನಕ್ಕೆ ವಿರೋಧ ಪಕ್ಷಗಳು ತಮ್ಮ ಕಾರ್ಯತಂತ್ರವನ್ನು ನಿರ್ಧರಿಸಲಿವೆ ಎಂದು ಮೂಲಗಳು ತಿಳಿಸಿವೆ. ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನದ ಅಜೆಂಡಾ ಇನ್ನೂ ಸ್ಪಷ್ಟವಾಗಿಲ್ಲ.
ವಿರೋಧ ಪಕ್ಷವಾದ INDIA ಮೈತ್ರಿಕೂಟವು ಪರಸ್ಪರ ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದೆ ಮತ್ತು 2024 ರ ಲೋಕಸಭೆ ಚುನಾವಣೆಯ ಜತೆಗೆ ಬಿಜೆಪಿಯನ್ನು ವಿವಿಧ ರಂಗಗಳಲ್ಲಿ ಒಗ್ಗಟ್ಟಿನಿಂದ ಎದುರಿಸಲು ಯೋಜಿಸುತ್ತಿದೆ. ಇತ್ತೀಚಿನ ಸಂಸತ್ತಿನ ಮುಂಗಾರು ಅಧಿವೇಶನದಲ್ಲೂ ಮೈತ್ರಿಕೂಟ ಒಟ್ಟಾಗಿ ಕಾರ್ಯನಿರ್ವಹಿಸಿದೆ.