ಗೋ ಭಕ್ತಿ ಹೆಸರಲ್ಲಿ ಜನರ ಹತ್ಯೆ ಸಲ್ಲದು: ಮೋದಿ


Team Udayavani, Jun 30, 2017, 3:00 AM IST

Go-Rakshan-29-6.jpg

ಅಹಮದಾಬಾದ್‌: ದೇಶದ ವಿವಿಧೆಡೆ ಗೋರಕ್ಷಣೆ ಹೆಸರಿನಲ್ಲಿ ದಾಳಿಗಳು ನಡೆಯುತ್ತಿರುವಂತೆಯೇ, ಗೋ ಭಕ್ತಿ ಹೆಸರಲ್ಲಿ ಜನರ ಹತ್ಯೆಯನ್ನು ಒಪ್ಪಲಾಗದು ಎಂದು ಪ್ರಧಾನಿ ನರೇಂದ್ರ ಮೋದಿ ಎಚ್ಚರಿಸಿದ್ದಾರೆ. ಗುರುವಾರ ಗುಜರಾತಿನ ಸಾಬರ್‌ಮತಿ ಆಶ್ರಮದಲ್ಲಿ ಮಹಾತ್ಮಾ ಗಾಂಧೀಜಿಯವರ ಗುರು ರಾಜ್‌ ಚಂದ್ರ್ಜೀ ಅವರ 150ನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಮಾತನಾಡಿದರು. ‘ಇಂದು ನಾನು ಬೇಸರ ಮತ್ತು ನೋವನ್ನು ಹಂಚಿಕೊಳ್ಳುತ್ತಿದ್ದೇನೆ. ಇರುವೆ, ಬೀದಿನಾಯಿ, ಮೀನುಗಳಿಗೆ ಆಹಾರವನ್ನು ನೀಡುವ ಸಂಸ್ಕೃತಿ ಹೊಂದಿದ, ಮಹಾತ್ಮಾ ಅವರ ಅಹಿಂಸಾವಾದದ ಪಾಠ ಕಲಿತ ನಮ್ಮ ದೇಶಕ್ಕೆ ಈಗ ಏನಾಗಿದೆ ?’ ಎಂದು ಪ್ರಶ್ನಿಸಿದರು.

‘ಹಿಂಸಾಚಾರ, ರಾಷ್ಟ್ರಪಿತ ಗಾಂಧಿಯವರ ಆದರ್ಶಗಳಿಗೆ ವಿರುದ್ಧವಾದದ್ದು. ಗೋ ಭಕ್ತಿ ಹೆಸರಲ್ಲಿ ಜನರನ್ನು ಹತ್ಯೆಗೈಯುವುದನ್ನು ಒಪ್ಪಲಾಗದು. ಇದನ್ನು ಮಹಾತ್ಮಾ ಅವರೂ ಒಪ್ಪಲು ಸಾಧ್ಯವಿಲ್ಲ’ ಎಂದರು. ‘ಮಹಾತ್ಮಾ ಗಾಂಧೀಜಿಯವರ ಕನಸಿನ ಭಾರತವನ್ನು ಕಟ್ಟಲು ಎಲ್ಲರೂ ಒಂದಾಗಿ ಕೆಲಸ ಮಾಡಬೇಕಿದೆ. ನಮ್ಮ ಸ್ವಾತಂತ್ರ್ಯ ಹೋರಾಟಗಾರರು ಹೆಮ್ಮೆಪಡುವಂತೆ ಮಾಡಬೇಕಿದೆ’ ಎಂದರು.

‘ಈ ದೇಶದಲ್ಲಿ ಯಾರೊಬ್ಬರಿಗೂ ಕಾನೂನು ಕೈಗೆತ್ತಿಕೊಳ್ಳಲು ಅವಕಾಶವಿಲ್ಲ. ಹಿಂಸಾಚಾರದಿಂದ ಯಾವ ಸಮಸ್ಯೆಯೂ ಬಗೆಹರಿಯುವುದಿಲ್ಲ. ಒಂದು ಸಮಾಜದಲ್ಲಿ ಹಿಂಸಾಚಾರಕ್ಕೆ ಅವಕಾಶವೇ ಇಲ್ಲ’ ಎಂದೂ ಒತ್ತಿ ಹೇಳಿದರು. ರೋಗಿ ಮೃತಪಟ್ಟರೆ ವೈದ್ಯರ ಮೇಲೆ ಹಿಂಸೆ, ಅಪಘಾತವಾದರೆ ವಾಹನಗಳನ್ನು ಪುಡಿ ಮಾಡುವ, ಬೆಂಕಿ ಹಚ್ಚುವ ಪ್ರಕರಣಗಳು ವರದಿಯಾಗುತ್ತಿರುವುದನ್ನೂ ಅವರು ಪ್ರಸ್ತಾವಿಸಿದರು. ಇತ್ತೀಚೆಗೆ ಗೋರಕ್ಷಣೆ ಹೆಸರಲ್ಲಿ ಹೆಚ್ಚುತ್ತಿರುವ ಹಿಂಸಾಚಾರ, ಉದ್ರಿಕ್ತ ಗುಂಪುಗಳಿಂದ ಹತ್ಯೆ ಇತ್ಯಾದಿಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮೋದಿ ಮಾತುಗಳು ಗಮನಾರ್ಹವಾಗಿವೆ.

ವಿಪಕ್ಷಗಳಿಂದ ಟೀಕೆ: ಇದೇ ವೇಳೆ, ಕಾಂಗ್ರೆಸ್‌ನ ರೇಣುಕಾ ಚೌಧರಿ ಪ್ರತಿಕ್ರಿಯಿಸಿದ್ದು, ಪ್ರಧಾನಿ ಕೊನೆಗೂ ಬಾಯಿ ತೆರೆದಿದ್ದಾರೆ. ಅವರ ಹೇಳಿಕೆಗೆ ಸ್ವಾಗತ ಎಂದಿದ್ದಾರೆ.

ಅಲ್ಪ ಸಂಖ್ಯಾಕರಲ್ಲಿ ಭಯ, ಅಭದ್ರತೆ ವಾತಾವರಣವಿಲ್ಲ
ಮುಸ್ಲಿಮರನ್ನು ಗುರಿಯಾಗಿಸಿ ಹಲ್ಲೆ, ಹಿಂಸಾಚಾರ ನಡೆಸಲಾಗುತ್ತಿದೆ ಎನ್ನುವ ವರದಿಗಳ ಮಧ್ಯೆಯೇ ‘ಮುಸ್ಲಿಮರಿಗೆ ಸಮಾಜದಲ್ಲಿ ಭಯ ಅಥವಾ ಅಭದ್ರತೆಯ ವಾತಾವರಣವಿಲ್ಲ’ ಎಂದು ಕೇಂದ್ರ ಸಚಿವ ಮುಖ್ತಾರ್‌ ಅಬ್ಟಾಸ್‌ ನಖ್ವೀ ಹೇಳಿದ್ದಾರೆ. ಕೆಲವು ಕಾಣದ ಕೈಗಳು ಇಂಥ ಘಟನೆಯ ಹಿಂದಿದ್ದು, ಅವುಗಳ ಯತ್ನವನ್ನು ಸಫ‌ಲಗೊಳಿಸಲು ಬಿಡಬಾರದು ಎಂದು ಅವರು ಹೇಳಿದ್ದಾರೆ.

ಮೋದಿ ಹೇಳಿಕೆಗೆ ಸ್ವಾಗತ
ಗೋರಕ್ಷಣೆ ಹೆಸರಲ್ಲಿ ಹಿಂಸಾಚಾರ ಮಾಡುವವರ ವಿರುದ್ಧದ ಪ್ರಧಾನಿ ಮೋದಿ ಅವರ ಹೇಳಿಕೆಯನ್ನು ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಉಮರ್‌ ಅಬ್ದುಲ್ಲಾ  ಸ್ವಾಗತಿಸಿದ್ದಾರೆ. ‘ಇಂತಹ ಕೃತ್ಯಗಳನ್ನು ಎಸಗುವವರು ನಿಮ್ಮ ಮಾತುಗಳನ್ನು ಕೇಳಿಸಿಕೊಂಡು ಅದರಂತೆ ನಡೆದುಕೊಳ್ಳುತ್ತಾರೆ ಎಂದುಕೊಂಡಿದ್ದೇನೆ’ ಎಂದು ಟ್ವೀಟ್‌ ಮಾಡಿದ್ದಾರೆ.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Scrutiny of complaint against Modi: Election Commission

Loksabha Election; ಮೋದಿ ವಿರುದ್ಧದ ದೂರು ಪರಿಶೀಲನೆ: ಚುನಾವಣ ಆಯೋಗ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

Election: ಕೇರಳದಲ್ಲಿ “ರಾಹುಲ್‌ ಗಾಂಧಿ ಡಿಎನ್‌ಎ ಪರೀಕ್ಷೆ’ ವಿವಾದ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

ಕರ್ನಾಟಕದಲ್ಲಿ ಹಿಂದುಳಿದ ವರ್ಗಕ್ಕೆ ಮುಸ್ಲಿಮರು: ಆಯೋಗ ಆಕ್ಷೇಪ

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.