ಕೋಲ್ಕತ : ಜೆಟ್ ಏರ್ ವೇಸ್ ವಿಮಾನ ಸ್ಫೋಟಿಸುವೆನೆಂದಾತ ವಶಕ್ಕೆ
Team Udayavani, Nov 26, 2018, 12:36 PM IST
ಕೋಲ್ಕತ : ಇಲ್ಲಿನ ನೇತಾಜಿ ಸುಭಾಷ್ ಚಂದ್ರ ಬೋಸ್ ವಿಮಾನ ನಿಲ್ದಾಣದಿಂದ ಮುಂಬಯಿಗೆ ಹಾರಲಿದ್ದ ಜೆಟ್ ಏರ್ ವೇಸ್ ವಿಮಾನವನ್ನು ಸ್ಫೋಟಿಸಿ ಎಲ್ಲ ಪ್ರಯಾಣಿಕರನ್ನು ಕೊಲ್ಲುವುದಾಗಿ ತನ್ನ ಮೊಬೈಲ್ ಫೋನಿನಲ್ಲಿ ಯಾರೊಂದಿಗೋ ಮಾತನಾಡುತ್ತಾ ಹೇಳುತ್ತಿದ್ದ ಜೆ ಪೊದ್ದಾರ್ ಎಂಬಾತನನ್ನು ಸಿಐಎಸ್ಎಫ್ ಸಿಬಂದಿಗಳು ವಶಕ್ಕೆ ತೆಗೆದುಕೊಂಡಿದ್ದಾರೆ.
ಜೆಟ್ ಏರ್ ವೇಸ್ ವಿಮಾನ ಹಾರಾಟ ಸಂಖ್ಯೆ 9ಡಬ್ಲ್ಯು0472 ಇಂದು ಬೆಳಗ್ಗೆ 8.15ರ ಹೊತ್ತಿಗೆ ಇಲ್ಲಿಂದ ಟೇಕಾಫ್ ಆಗುತ್ತಿದ್ದ ವೇಳೆ ಗುರುತು ಸಿಗದಂತೆ ಮುಖಕ್ಕೆ ಬಟ್ಟೆ ಸುತ್ತಿಕೊಂಡಿದ್ದ ಪೊದ್ದಾರ್ ಅದ್ಯಾರೊಂದಿಗೋ ತನ್ನ ಮೊಬೈಲ್ನಲ್ಲಿ ಮಾತನಾಡುತ್ತಾ ತಾನು ವಿಮಾನವನ್ನು ಸ್ಫೋಟಿಸುವುದಾಗಿಯೂ ಎಲ್ಲ ಪ್ರಯಾಣಿಕರನ್ನು ಕೊಂದು ಬಿಡುವುದಾಗಿಯೂ ಹೇಳುತ್ತಿದ್ದ ಮಾತುಗಳನ್ನು ಸಹ ಪ್ರಯಾಣಿಕರು ಕೇಳಿಸಿಕೊಂಡು ಒಡನೆಯೇ ವಿಮಾನದ ಸಿಬಂದಿಗಳಿಗೆ ತಿಳಿಸಿದರು. ಅವರು ಕೂಡಲೇ ಏರ್ ಟ್ರಾಫಿಕ್ ಕಂಟ್ರೋಲ್ ಅಧಿಕಾರಿಗಳಿಗೆ ವಿಷಯ ತಿಳಿಸಿದರು.
ಕೂಡಲೇ ವಿಮಾನ ಟೇಕಾಫ್ ಆಗುವುದನ್ನು ಕೈಬಿಟ್ಟು ಅದನ್ನು ಟ್ಯಾಕ್ಸಿ ಬೇ ಯಲ್ಲಿ ಪ್ರತ್ಯೇಕವಾಗಿ ನಿಲ್ಲಿಸುವಂತೆ ಸೂಚಿಸಲಾಯಿತು. ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಪ್ರಯಾಣಿಕರನ್ನು ವಿಮಾನದಿಂದ ಕೆಳಗಿಳಿಸಿ ತಪಾಸಣೆ ಕೈಗೊಳ್ಳಲಾಯಿತು.
ತಾಜಾ ವರದಿಗಳು ಬರುವ ತನಕವೂ ಶಂಕಿತ ವ್ಯಕ್ತಿ ಪೊದ್ದಾರ್ ನನ್ನು ಸಿಐಎಸ್ಎಫ್ ಸಿಬಂದಿಗಳು ತಮ್ಮ ವಶದಲ್ಲಿ ಇರಿಸಿಕೊಂಡಿರುವುದಾಗಿ ತಿಳಿದು ಬಂದಿದೆ. ಹೆಚ್ಚಿನ ಮಾಹಿತಿಗಳನ್ನು ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Agra: ಆಗ್ರಾದಲ್ಲಿ ತಲೆ ಎತ್ತಿದೆ ತಾಜ್ ಮಹಲ್ ಪ್ರತಿಸ್ಪರ್ಧಿ
Bihar: ಕಸ್ಟಡಿಯಲ್ಲಿದ್ದ ಅಪ್ರಾಪ್ತ ವಯಸ್ಕ ಪತ್ನಿ,ಪತಿ ಸಾವು; ಗ್ರಾಮಸ್ಥರಿಂದ ಠಾಣೆ ಧ್ವಂಸ
ಪತ್ನಿ ಹತ್ಯೆಗೈದು ಶವದೊಂದಿಗೆ ಸೆಲ್ಫಿ: ಸಂಬಂಧಿಕರಿಗೆ ಫೋಟೋ ಕಳುಹಿಸಿ ತಾನೂ ನೇಣಿಗೆ ಶರಣಾದ
Nuh; ಹೊತ್ತಿ ಉರಿದ ಮಥುರಾ ಭಕ್ತರಿದ್ದ ಬಸ್; ಎಂಟು ಮಂದಿ ಸಾವು
Nehru ಕಾಲದಲ್ಲಿ ಕಬಳಿಸಿದ್ದ ಹಳ್ಳಿಯಲ್ಲಿ ಚೀನ ಗ್ರಾಮ: ಸಚಿವ ಜೈಶಂಕರ್ ತಿರುಗೇಟು
MUST WATCH
ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ
ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು
ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ
ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್ಪಟೇಲ್ ಹೇಳಿಕೆ
ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ
ಹೊಸ ಸೇರ್ಪಡೆ
Hubli; ಅಂಜಲಿ ಅಂಬಿಗೇರ ಪ್ರಕರಣ ತನಿಖೆ ಸಿಐಡಿಗೆ ವಹಿಸಲಿ: ಸಂತೋಷ್ ಲಾಡ್
Smiling Buddha; ಬುದ್ಧ ನಕ್ಕ ಗಳಿಗೆಗೆ ಸ್ವರ್ಣ ಸಂಭ್ರಮ; ಮೊದಲ ಪರಮಾಣು ಪರೀಕ್ಷೆಗೆ 50 ವರ್ಷ
Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ
ಇನ್ಸ್ಪೆಕ್ಟರ್ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್ ಸೆರೆ
Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ