ಉತ್ತರಾಖಂಡ ಸಿಎಂ ಅಭ್ಯರ್ಥಿಯಾಗಿದ್ದ ಕೊಥಿಯಾಲ್ ಆಪ್ ಗೆ ಗುಡ್ ಬೈ
Team Udayavani, May 18, 2022, 8:03 PM IST
ಡೆಹ್ರಾಡೂನ್ : ಈ ವರ್ಷದ ಫೆಬ್ರವರಿಯಲ್ಲಿ ನಡೆದ ಉತ್ತರಾಖಂಡ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ನಿವೃತ್ತ ಕರ್ನಲ್ ಅಜಯ್ ಕೊಥಿಯಾಲ್ ಅವರು ಬುಧವಾರ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಮಾಜಿ ಸೇನಾಧಿಕಾರಿ ಟ್ವಿಟರ್ನಲ್ಲಿ ಪಕ್ಷವನ್ನು ತೊರೆಯುವ ನಿರ್ಧಾರವನ್ನು ಘೋಷಿಸಿ, ತಮ್ಮ ರಾಜೀನಾಮೆ ಪತ್ರದ ಸಾಫ್ಟ್ ಕಾಪಿಯನ್ನು ಪೋಸ್ಟ್ ಮಾಡಿದ್ದಾರೆ.
ಗಂಗೋತ್ರಿ ವಿಧಾನಸಭಾ ಕ್ಷೇತ್ರದಿಂದ ಕೊಥಿಯಾಲ್ ಠೇವಣಿ ಕಳೆದುಕೊಳ್ಳುವ ಮೂಲಕ ಎಎಪಿ ಮುಖಭಂಗ ಅನುಭವಿಸಿತ್ತು.
“ನಾನು ಏಪ್ರಿಲ್ 19, 2021 ರಿಂದ ಮೇ 18, 2022 ರವರೆಗೆ ಆಮ್ ಆದ್ಮಿ ಪಕ್ಷದ ಸದಸ್ಯನಾಗಿದ್ದೇನೆ. ಮಾಜಿ ಸೈನಿಕರು, ಮಾಜಿ ಅರೆ ಮಿಲಿಟರಿ ಸಿಬ್ಬಂದಿ, ಹಿರಿಯರು, ಮಹಿಳೆಯರು, ಯುವಕರು ಮತ್ತು ಬುದ್ಧಿಜೀವಿಗಳ ಭಾವನೆಗಳನ್ನು ಇಟ್ಟುಕೊಂಡು ನಾನು ನಿಮಗೆ ಮೇ 18 ರಂದು ನನ್ನ ರಾಜೀನಾಮೆ ಪಾತ್ರ ಕಳುಹಿಸುತ್ತಿದ್ದೇನೆ. ” ಎಂದು ಕರ್ನಲ್ ಕೊಥಿಯಾಲ್ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ಇದನ್ನೂ ಓದಿ : ಕುತುಬ್ ಮಿನಾರ್ ರಾಜ ವಿಕ್ರಮಾದಿತ್ಯ ನಿರ್ಮಿಸಿದ್ದು: ಧರಂ ವೀರ್ ಶರ್ಮಾ
ಚುನಾವಣಾ ಸೋಲಿನ ನಂತರ ಪಕ್ಷವು ತನ್ನನ್ನು ನಡೆಸಿಕೊಳ್ಳುತ್ತಿರುವ ರೀತಿಯಿಂದ ಕೊಥಿಯಾಲ್ ಅತೃಪ್ತರಾಗಿದ್ದರು ಎಂದು ಹೇಳಲಾಗುತ್ತಿದೆ. ಉತ್ತರಾಖಂಡದಲ್ಲಿ ಅದರ ಕಾರ್ಯಕ್ಷಮತೆಯನ್ನು ವಿಶ್ಲೇಷಿಸಲು ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಪಕ್ಷದ ಸಭೆಗೆ ಅವರನ್ನು ಆಹ್ವಾನಿಸಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್ ಭೇಟಿ; ಆಯೋಗಕ್ಕೆ “ಕೈ’ ದೂರು
Odisha: ಎನ್ಕೌಂಟರ್; ಇಬ್ಬರು ನಕ್ಸಲರ ಹತ್ಯೆ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ