ಜಾತಿ ಸಂತುಲನೆಗಾಗಿ ಕೋವಿಂದ್ ರಾಷ್ಟ್ರಪತಿಯಾದರು: ರಾಜಸ್ಥಾನ CM ಗೆಹಲೋಟ್ ವಿವಾದ
Team Udayavani, Apr 17, 2019, 5:39 PM IST
ಜೈಪುರ : 2017ರ ಗುಜರಾತ್ ವಿಧಾನಸಭಾ ಚುನಾವಣೆಗೆ ಮುನ್ನ ಜಾತಿ ಸಂತುಲನೆಗಾಗಿ ರಾಮನಾಥ್ ಕೋವಿಂದ್ ಅವರನ್ನು ಭಾರತದ ರಾಷ್ಟ್ರಪತಿಯನ್ನಾಗಿ ಮಾಡಲಾಯಿತು ಎಂದು ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋಟ್ ಇಂದು ಬುಧವಾರ ಹೇಳಿರುವುದು ವ್ಯಾಪಕ ವಿವಾದಕ್ಕೆ ಕಾರಣವಾಗಿದೆ.
“2017ರ ಗುಜರಾತ್ ವಿಧಾನಸಭಾ ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡು ರಾಮ ನಾಥ್ ಕೋವಿಂದ್ ಅವರನ್ನು ದೇಶದ ರಾಷ್ಟ್ರಪತಿನ್ನಾಗಿ ಮಾಡಲಾಯಿತು ಎಂದು ಜನರು ಕೂಡ ಹೇಳುತ್ತಾರೆ. ನಾನೊಂದು ಲೇಖನವನ್ನು ಓದುತ್ತಿದ್ದೆ. ಅದರಲ್ಲಿ ಗುಜರಾತ್ನಲ್ಲಿ ತನಗೆ ಸರಕಾರ ರಚಿಸಲಾಗದು ಎಂಬ ಬಗ್ಗೆ ಪ್ರಧಾನಿ ನರೇಂದ್ರ ಮೋದಿಗೆ ಭಯ ಇರುವಂತಿದೆ ಎಂದು ಹೇಳಲಾಗಿತ್ತು. ಆಗ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಕೊಟ್ಟ ಸಲಹೆಯನ್ನು ಅನುಸರಿಸಿ ರಾಮ ನಾಥ್ ಕೋವಿಂದ್ ಅವರನ್ನು ದೇಶದ ರಾಷ್ಟ್ರಪತಿಯನ್ನಾಗಿ ಮಾಡಲು ತೀರ್ಮಾನಿಸಲಾಯಿತು’ ಎಂದು ಗೆಹಲೋಟ್ ಅವರು ಸುದ್ದಿ ಗೋಷ್ಠಿಯಲ್ಲಿ ಪತ್ರಕರ್ತರಿಗೆ ಹೇಳಿದರು.
ಕೋವಿಂದ್ ಅವರನ್ನು 2017ರ ಜುಲೈಯಲ್ಲಿ ದೇಶದ ರಾಷ್ಟ್ರಪತಿಯನ್ನಾಗಿ ಚುನಾಯಿಸಲಾಯಿತು ಮತ್ತು ಆ ವರ್ಷ ಡಿಸೆಂಬರ್ ನಲ್ಲಿ ಗುಜರಾತ್ ವಿಧಾನಸಭಾ ಚುನಾವಣೆಗಳು ನಡೆದವು.
‘ದೇಶದ ಜನರು ಹಿರಿಯ ಬಿಜೆಪಿ ನಾಯಕ ಲಾಲಕೃಷ್ಣ ಆಡ್ವಾಣಿ ಅವರು ದೇಶದ ರಾಷ್ಟ್ರಪತಿಯಾಗುವರೆಂದು ಭಾವಿಸಿದ್ದರು. ಆದರೆ ಬಿಜೆಪಿ ಅವರ ಹೆಸರನ್ನು ಕೈಬಿಟ್ಟಿತು. ರಾಮ ನಾಥ್ ಕೋವಿಂದ್ ಅವರನ್ನು ಅವರ ಜಾತಿಗಾಗಿ ದೇಶದ ರಾಷ್ಟ್ರಪತಿನ್ನಾಗಿ ಮಾಡಿತು. ಇದು ಬಿಜೆಪಿಯ ಆಂತರಿಕ ವಿಷಯವೇ ಆದರೂ ಆ ಬಗ್ಗೆ ನಾನು ಲೇಖನ ಓದಿರುವುದರಿಂದ ಪ್ರತಿಕ್ರಿಯಿಸುತ್ತಿದ್ದೇನೆ’ ಎಂದು ಗೆಹಲೋಟ್ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು