KPSC ಸದಸ್ಯತ್ವ: ಮೂವರ ಹೆಸರು ಶಿಫಾರಸು
Team Udayavani, Aug 19, 2023, 10:58 PM IST
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಸದಸ್ಯರ ಹುದ್ದೆಗಳಿಗೆ ಮೂವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಶಿಫಾರಸು ಮಾಡಿದ್ದಾರೆ. ಬೀದರ್ ಜಿಲ್ಲೆಯ ಬಸವರಾಜ್ ಮಲ್ಗೆ, ಬೆಂಗಳೂರಿನ ಡಾ| ಆರ್. ಕಾವಾಲಮ್ಮ ಹಾಗೂ ಕುವೆಂಪು ವಿಶ್ವವಿದ್ಯಾನಿಲಯದ ಕೈಗಾರಿಕಾ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ| ಎಚ್.ಎಸ್. ಭೋಜ್ಯನಾಯ್ಕ ಅವರ ಹೆಸರುಗಳನ್ನು ಶಿಫಾರಸು ಮಾಡಲಾಗಿದೆ.
ಮೂವರ ಹೆಸರು ಹಾಗೂ ವೈಯಕ್ತಿಕ ವಿವರಗಳನ್ನು ಒಳಗೊಂಡ ಮಾಹಿತಿಯನ್ನು ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ರವಾನಿಸಿದ್ದು, ರಾಜ್ಯಪಾಲರ ಆದೇಶಾನುಸಾರ ಕೆಪಿಎಸ್ಸಿ ಸದಸ್ಯರ ನೇಮಕ ಆಗಲಿದೆ. ಉನ್ನತ ಮಟ್ಟದ ಹಾಗೂ ಸೂಕ್ಷ್ಮ ಸಾಂವಿಧಾನಿಕ ಹುದ್ದೆಗಳಾಗಿರುವ ಕೆಪಿಎಸ್ಸಿ ಸದಸ್ಯರು, ಅಧ್ಯಕ್ಷರ ನೇಮಕಾತಿ ವೇಳೆ ಪಾರದರ್ಶಕತೆ ಕಾಯ್ದುಕೊಳ್ಳಬೇಕೆಂದು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸ್ಪಷ್ಟ ನಿರ್ದೇಶನ ನೀಡಿತ್ತು.