5,912 ಕೋಟಿ ರೂ. ಮೇಕೆದಾಟು ಯೋಜನೆಗೆ ಶೀಘ್ರ ಅನುಮತಿ: ಕೇಂದ್ರಕ್ಕೆ ಎಚ್ಡಿಕೆ ಮನವಿ
Team Udayavani, Jun 15, 2019, 4:39 PM IST
ಹೊಸದಿಲ್ಲಿ : ಕರ್ನಾಟಕ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಶನಿವಾರ ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಇಲ್ಲಿ ಭೇಟಿಯಾಗಿ 5,912 ಕೋಟಿ ರೂ.ಗಳ ಪ್ರಸ್ತಾವಿತ ಕಾವೇರಿ ನದಿಯ ಮೇಕೆದಾಟು ಜಲಾಶಯ ಯೋಜನೆಗೆ ಬೇಗನೆ ಒಪ್ಪಿಗೆ ನೀಡಬೇಕೆಂದು ಕೋರಿದರು.
ಮಹದಾಯಿ ಮತ್ತು ಕೃಷ್ಣ ನದೀ ನೀರನ್ನು ಹಂಚಿಕೊಳ್ಳುವ ವಿಷಯದಲ್ಲಿ ಎರಡೂ ನ್ಯಾಯ ಮಂಡಳಿಗಳು ನೀಡಿರುವ ಆದೇಶದ ಬಗ್ಗೆ ಕೇಂದ್ರ ಸರಕಾರ ಅಧಿಸೂಚನೆ ಹೊರಡಿಸಬೇಕೆಂದು ಸಿಎಂ ಕುಮಾರಸ್ವಾಮಿ ವಿನಂತಿಸಿದರು.
ಸಂಬಂಧಿತ ರಾಜ್ಯ ಸರಕಾರಗಳೊಂದಿಗೆ
ಚರ್ಚಿಸಿದ ಬಳಿಕ ಮಹದಾಯಿ ಮತ್ತು ಕೃಷ್ಣ ನದಿ ನೀರು ಕುರಿತ ಗಜೆಟ್ ನೊಟಿಫಿಕೇಶನ್ ಹೊರಡಿಸಲಾಗುವುದೆಂಬ ಭರವಸೆಯನ್ನು ಕೇಂದ್ರ ಸಚಿವರು ನೀಡಿದರು ಎಂದು ಅಧಿಕೃತ ಪ್ರಕಟನೆ ತಿಳಿಸಿದೆ.
ಕೃಷ್ಣ ನದಿ ನೀರು ವಿವಾದ ನ್ಯಾಯ ಮಂಡಳಿ -2 ಕರ್ನಾಟಕಕ್ಕೆ 166 ಟಿಎಂಸಿ ಅಡಿ ನೀರನ್ನು ನೀರಾವರಿ ಮತ್ತು ಇತರ ಉದ್ದೇಶಗಳಿಗೆ ಒದಗಿಸಿದೆ. ಇದೇ ರೀತಿ ಮಹದಾಯಿ ನದಿ ನೀರು ವಿವಾದಗಳ ನ್ಯಾಯ ಮಂಡಳಿಯು ಕರ್ನಾಟಕಕ್ಕೆ 13.2 ಟಿಎಂಸಿ ಅಡಿ ನೀರನ್ನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು