ಅತ್ಯಾಚಾರ ಪ್ರಕರಣದಲ್ಲಿ ದೋಷಿ; ಶಾಸಕ ಸ್ಥಾನ ಕಳೆದುಕೊಂಡ ಕುಲ್ ದೀಪ್ ಸೆಂಗಾರ್
ಮಾಖಿ ಗ್ರಾಮದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ದೂರು ದಾಖಲಾಗಿತ್ತು.
Team Udayavani, Feb 25, 2020, 1:25 PM IST
Expelled BJP MLA Kuldeep Singh Sengar
ಲಕ್ನೋ: ಅತ್ಯಾಚಾರ ಪ್ರಕರಣದಲ್ಲಿ ಉಚ್ಛಾಟಿತ ಬಿಜೆಪಿ ಶಾಸಕ ಕುಲ್ ದೀಪ್ ಸಿಂಗ್ ಸೆಂಗಾರ್ ದೋಷಿ ಎಂದು ದಿಲ್ಲಿ ಸೆಷನ್ಸ್ ಕೋರ್ಟ್ ಕಳೆದ ಡಿಸೆಂಬರ್ ತಿಂಗಳಿನಲ್ಲಿ ತೀರ್ಪು ನೀಡಿರುವ ಹಿನ್ನೆಲೆಯಲ್ಲಿ ಶಾಸಕ ಸ್ಥಾನದಿಂದ ವಜಾಗೊಳಿಸಿದೆ ಎಂದು ವರದಿ ತಿಳಿಸಿದೆ.
ಉತ್ತರಪ್ರದೇಶ ವಿಧಾನಸಭೆ ಹೊರಡಿಸಿರುವ ಪ್ರಕಟಣೆಯಲ್ಲಿ, ಉನ್ನಾವ್ ಜಿಲ್ಲೆಯ ಬಂಗಾರ್ ಮೌ ಕ್ಷೇತ್ರದ ಶಾಸಕ ಸ್ಥಾನದಿಂದ ಸೆಂಗಾರ್ ನನ್ನು 2019ರ ಡಿಸೆಂಬರ್ 20ರಂದು ವಜಾಗೊಳಿಸಲಾಗಿದ್ದು, ಈ ಸ್ಥಾನ ತೆರವುಗೊಂಡಿರುವುದಾಗಿ ತಿಳಿಸಿತ್ತು.
ನಾಲ್ಕು ಬಾರಿ ಕುಲ್ ದೀಪ್ ಶಾಸಕರಾಗಿ ಆಯ್ಕೆಯಾಗಿದ್ದು, ಮಾಖಿ ಗ್ರಾಮದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿದ ದೂರು ದಾಖಲಾಗಿತ್ತು. ಆದರೆ 2017ರಲ್ಲಿ ಯುವತಿ ದೂರು ನೀಡಿದ್ದರೂ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಮುಖ್ಯಮಂತ್ರಿ ನಿವಾಸದ ಎದುರೇ ಬೆಂಕಿಹಚ್ಚಿಕೊಳ್ಳಲು ಯತ್ನಿಸಿದ್ದಳು.
ನಂತರ ಅತ್ಯಾಚಾರ ಸಂತ್ರಸ್ತೆಯ ತಂದೆಯನ್ನು ಪೊಲೀಸರು ಬಂಧಿಸಿದ್ದರು. ಎರಡು ದಿನಗಳ ನಂತರ ತಂದೆ ಕಸ್ಟಡಿಯಲ್ಲಿಯೇ ಸಾವನ್ನಪ್ಪಿದ್ದರು. ಈ ಪ್ರಕರಣದ ಬಗ್ಗೆ ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾದ ಪರಿಣಾಮ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿತ್ತು. ಶಾಸಕ ಕುಲ್ ದೀಪ್ ಸೆಂಗಾರ್ ಮತ್ತು ಸಹೋದರ ಅತುಲ್ ಸೆಂಗಾರ್ ನನ್ನು ಪೊಲೀಸರು ಬಂಧಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ದಿಲ್ಲಿ ಸೆಷನ್ಸ್ ಕೋರ್ಟ್ ದೋಷಿ ಕುಲ್ ದೀಪ್ ಸೆಂಗಾರ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Loksabha Election; ದೇಶದಲ್ಲಿ ಹಂತ-1: ಮತ ಇಂದು
MUST WATCH
ಹೊಸ ಸೇರ್ಪಡೆ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು