ಮಿಝೋರಾಂ ರಾಜ್ಯಪಾಲ ಹುದ್ದೆ ತೊರೆದ ಕುಮ್ಮನಂ ರಾಜಶೇಖರನ್
Team Udayavani, Mar 8, 2019, 9:08 AM IST
ನವದೆಹಲಿ: ಮಿಝೊರಾಂ ರಾಜ್ಯಪಾಲರಾಗಿ ಕರ್ತವ್ಯನಿರ್ವಹಿಸುತ್ತಿದ್ದ ಕುಮ್ಮನಂ ರಾಜಶೇಖರನ್ ಅವರು ಇಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ರಾಜಶೇಖರನ್ ಅವರು ತಮ್ಮ ತ್ಯಾಗಪತ್ರವನ್ನು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಗೆ ಸಲ್ಲಿಸಿದ್ದು ಅವರ ರಾಜೀನಾಮೆ ಅಂಗೀಕೃತಗೊಂಡಿದೆ ಎಂದು ರಾಷ್ಟ್ರಪತಿ ಭವನದ ಮೂಲಗಳು ತಿಳಿಸಿವೆ.
ನೂತನ ರಾಜ್ಯಪಾಲರ ನೇಮಕ ಆಗುವವರೆಗೆ ಅಸ್ಸಾಂ ರಾಜ್ಯದ ರಾಜ್ಯಪಾಲರಾಗಿರುವ ಪ್ರೊ. ಜಗದೀಶ್ ಮುಖಿ ಅವರಿಗೆ ಹೆಚ್ಚುವರಿಯಾಗಿ ಮಿಝೊರಾಂ ರಾಜ್ಯದ ರಾಜ್ಯಪಾಲರ ಹೊಣೆಯನ್ನು ನೀಡಲಾಗಿದೆ ಎಂದು ತಿಳಿದುಬಂದಿದೆ.
ರಾಷ್ಟ್ರೀಯ ಸ್ವಯಂ ಸೇವಕ ಸಂಘದ ದೀರ್ಘಕಾಲೀನ ಒಡನಾಡಿಯಾಗಿರುವ ರಾಜಶೇಖರನ್ ಅವರು ಕೇರಳ ರಾಜ್ಯದವರಾಗಿದ್ದು ಇಲ್ಲಿ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. 2018ರ ಮೇ 25ರಂದು ಮಿಝೊರಾಂ ರಾಜ್ಯದ ರಾಜ್ಯಪಾಲರಾಗಿ ನಿಯುಕ್ತಿಗೊಂಡಿದ್ದರು. ರಾಜಶೇಖರನ್ ಅವರ ದಿಢೀರ್ ರಾಜೀನಾಮೆಗೆ ಸ್ಪಷ್ಟ ಕಾರಣಗಳು ತಿಳಿದುಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!