ನಿರ್ದೇಶಕ ಕುಂದನ್ ಷಾ ನಿಧನ
Team Udayavani, Oct 8, 2017, 6:15 AM IST
ಮುಂಬೈ: ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಬಾಲಿವುಡ್ ಸಿನಿಮಾ ನಿರ್ದೇಶಕ ಕುಂದನ್ ಷಾ ಶನಿವಾರ ಮುಂಬೈನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. “ಜಾನೇ ಭಿ ದೋ ಯಾರೋಂ’, “ಕಭಿ ಹಾ ಕಭಿ ನಾ’ ದಂಥ ಜನಪ್ರಿಯ ಸಿನಿಮಾಗಳನ್ನು ನಿರ್ದೇ ಶಿಸಿದ್ದ ಷಾ, ಹೃದಯಾಘಾತದಿಂದ ಮೃತ ಪಟ್ಟಿದ್ದಾರೆ. ಷಾ ನಿಧನಕ್ಕೆ ಬಾಲಿವುಡ್ ನಟರು ಕಂಬನಿ ಮಿಡಿದಿದ್ದಾರೆ. ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಸೇರಿದಂತೆ ಅನೇಕ ಗಣ್ಯರೂ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
1983ರಲ್ಲಿ ನಿರ್ದೇಶಿಸಿದ ಮೊದಲನೇ ಸಿನಿಮಾ “ಜಾನೇ ಭಿ ದೋ ಯಾರೋಂ’ಗೆ ರಾಷ್ಟ್ರಪ್ರಶಸ್ತಿ ಗಳಿಸಿದ್ದ ಕುಂದನ್ ಷಾ, ಹಲವು ನಟರನ್ನು ಈ ಸಿನಿಮಾದ ಮೂಲಕ ಬಾಲಿವುಡ್ಗೆ ಪರಿಚಯಿಸಿದ್ದರು. ಅಲ್ಲದೆ ನಂತರ ಟಿವಿ ಧಾರಾವಾಹಿಗಳನ್ನೂ ನಿದೇಶಿಸಿದ್ದ ಅವರು, ಜನಪ್ರಿಯ ವ್ಯಂಗ್ಯ ಚಿತ್ರಕಾರ ಆರ್.ಕೆ.ಲಕ್ಷ್ಮಣ್ರ ಕಾಮನ್ ಮ್ಯಾನ್ ಪಾತ್ರವನ್ನು ಬಳಸಿಕೊಂಡು “ವಾಗ್ಲೆ ಕಿ ದುನಿಯಾ’ ಎಂಬ ಧಾರಾವಾಹಿ ನಿರ್ದೇಶಿಸಿದ್ದರು. ಇದು ಭಾರಿ ಜನಪ್ರಿಯತೆ ಗಳಿಸಿತ್ತು. ಶಾರುಖ್ ಖಾನ್ ಅಭಿನಯದ ಜನಪ್ರಿಯ ಸಿನಿಮಾ “ಕಭೀ ಹಾ ಕಭೀ ನಾ’ ಹಾಗೂ ಪ್ರೀತಿ ಜಿಂಟಾ ಅಭಿನಯದ “ಕ್ಯಾ ಕೆಹನಾ’ ಸಿನಿಮಾವನ್ನೂ ಷಾ ನಿರ್ದೇಶಿಸಿದ್ದರು. ಸಿನಿಮಾ ಹಾಗೂ ಧಾರಾವಾಹಿಗಳಲ್ಲಿ ವಿಡಂಬನೆ, ವಾಸ್ತವ ಹಾಗೂ ತಿಳಿಹಾಸ್ಯ ಮಿಶ್ರಣದ ಕಥೆಗಳಿಗೆ ಅವರು ಜನಪ್ರಿಯವಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ
MUST WATCH
ಹೊಸ ಸೇರ್ಪಡೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್