KYC ವಂಚನೆಯ ಬಗ್ಗೆ ಜಾಗೃತರಾಗಿ :ನಿವೃತ್ತ ಆರ್‌ಬಿಐ ಉದ್ಯೋಗಿಯೇ ವಂಚನೆಗೆ ಬಲಿ..!


Team Udayavani, Nov 13, 2021, 6:16 PM IST

cyber scame

Representative Image used

ನವದೆಹಲಿ: 70 ವರ್ಷ ವಯಸ್ಸಿನ ಆರ್ ಬಿ ಐನ ನಿವೃತ್ತ ಮಹಿಳಾ ಉದ್ಯೋಗಿಯೊಬ್ಬರು ಆನ್‌ಲೈನ್‌ ವಂಚನೆಗೆ ಒಳಗಾಗಿದ್ದು, ಬರೋಬ್ಬರಿ 3.38ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿದ್ದಾರೆ. ನಿವೃತ್ತಿ ವೇತನವೊಂದೇ ಇವರ ಆದಾಯದ ಮೂಲವಾಗಿತ್ತು. ವಂಚಕರು ತಾವು ಎಸ್‌ಬಿಐ ಬ್ಯಾಂಕ್‌ನ ಉದ್ಯೋಗಿಗಳು, ನಮಗೆ ನಿಮ್ಮ ಪ್ರಾಥಮಿಕ ಗ್ರಾಹಕ ಮಾಹಿತಿ(KYC) ಬೇಕು ಎಂಬುದಾಗಿ ಮಹಿಳೆಯನ್ನು ನಂಬಿಸಿ ವಂಚಿಸಿದ್ದಾರೆ.

ವರದಿಗಳ ಪ್ರಕಾರ, ನವೆಂಬರ್ 8 ರಂದು ಮಹಿಳೆ ತನ್ನ ಫೋನ್‌ಗೆ ಸಂದೇಶವೊಂದನ್ನು ಸ್ವೀಕರಿಸಿದ್ದು, ತಾನು ಇನ್ನೂ ತನ್ನ KYC ಮಾಹಿತಿಯನ್ನು ನವೀಕರಿಸಿಲ್ಲ ಎಂದು ಆ ಸಂದೇಶದಲ್ಲಿ ತಿಳಿಸಲಾಗಿತ್ತು. ಈ ಸಂದೇಶವು ಎಸ್‌ಬಿಐ ಅಧಿಕಾರಿಯ ಫೋನ್ ಸಂಖ್ಯೆಯನ್ನು ಒಳಗೊಂಡಿತ್ತು.

ಇದನ್ನೂ ಓದಿ:- ಕಾಫಿ ಬೆಳೆಗಾರರಿಗೆ ಸಂತಸದ ಸುದ್ದಿ; ಕಾಫಿ ಎಲೆಯಿಂದಲೂ ಪಾನೀಯ

ಮಹಿಳೆ ಅಂತಿಮವಾಗಿ ಫೋನ್‌ ಸಂಖ್ಯೆ ಪತ್ತೆಮಾಡಿ  ಆ ಸಂಖ್ಯೆಗೆ ಡಯಲ್ ಮಾಡಿದರು. ಕಾಲ್‌ನ  ಇನ್ನೊಂದು ತುದಿಯಲ್ಲಿ ವಂಚಕನು ರಾಹುಲ್‌ ಎಂಬ ಹೆಸರಿನಲ್ಲಿ ನಟಿಸಿದನು ಮತ್ತು ಸಂಪೂರ್ಣವಾಗಿ‌ ಆಕೆಯ ಆನ್ ಲೈನ್ ಮಾಹಿತಿಯನ್ನು ತಾನು ಎಸ್‌ಬಿಐ ನೌಕರನೆಂದು ನಂಬಿಸಿ  ಪಡೆದುಕೊಳ್ಳುತ್ತಾನೆ. ನಂತರ ಅಕೆ ವಂಚಕನಿಂದ ಲಿಂಕ್ ವೊಂದನ್ನು ಸ್ವೀಕರಿಸಿದರು.

ಮಹಿಳೆ ಲಿಂಕ್ ಕ್ಲಿಕ್ ಮಾಡಿದಾಗ, ಮೇಲ್ಭಾಗದಲ್ಲಿ ಎಸ್‌ಬಿಐ ಲೋಗೋ ಇರುವ ಪುಟಕ್ಕೆ ಕರೆದೊಯ್ಯಲಾಯಿತು. ಆಕೆಯ ಎಲ್ಲಾ ಬ್ಯಾಂಕ್ ಮತ್ತು ವಹಿವಾಟಿನ ಮಾಹಿತಿಯನ್ನು ಆನ್‌ಲೈನ್ ಫಾರ್ಮ್‌ನಲ್ಲಿ‌ ಕೇಳಲಾಗಿತ್ತು. ಮಹಿಳೆ ತನ್ನ ಮಾಹಿತಿಯನ್ನು ನೀಡಿದ ತಕ್ಷಣ ವಂಚಕನು ಆರು ರೀತಿಯ ವಹಿವಾಟುಗಳನ್ನು ಬ್ಯಾಕ್-ಟು-ಬ್ಯಾಕ್ ಮಾಡಿದ್ದಾನೆ. ಆಕೆಯ ಖಾತೆಯಿಂದ ಒಟ್ಟು 3.38 ಲಕ್ಷ ರೂ. ಕ್ಷಣಾರ್ಧದಲ್ಲಿ ಡೆಬಿಟ್‌ ಆಗಿತ್ತು.

ನಂತರ, ಮಹಿಳೆ ನೆರೆಹೊರೆಯವರ ಸಹಾಯವನ್ನು ಕೋರಿದರು, ಅವರು ಬ್ಯಾಂಕ್‌ನ ಸಹಾಯವಾಣಿ ಸಂಖ್ಯೆಗೆ ಫೋನ್ ಮಾಡಿ ತಕ್ಷಣ ಕಾರ್ಡ್ ಅನ್ನು ಬ್ಲಾಕ್ ಮಾಡಲು ಸಲಹೆ ನೀಡಿದರು. ಮಹಿಳೆ ತನ್ನ ಶಾಖೆಗೆ ಹೋಗಿ ವಿವಾದದ ಅರ್ಜಿಯನ್ನು ಭರ್ತಿ ಮಾಡಿ, ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ಸಲಹೆಗಳು:-

– ಆನ್‌ಲೈನ್ KYC ಮಾಡಲು SMS ಮೂಲಕ ಯಾವುದೇ ಬ್ಯಾಂಕ್ ಗ್ರಾಹಕರನ್ನು ಸಂಪರ್ಕಿಸುವುದಿಲ್ಲ ಎಂಬುದನ್ನು ಯಾವಾಗಲೂ ನೆನಪಿನಲ್ಲಿಡಿ. ನಿಮ್ಮ ಇನ್‌ಬಾಕ್ಸ್‌ನಲ್ಲಿ ನೀವು ಇದೇ ರೀತಿಯ SMS ಸಂದೇಶಗಳು ಅಥವಾ ಇಮೇಲ್‌ಗಳನ್ನು ಸ್ವೀಕರಿಸಿದರೆ, ಅವುಗಳನ್ನು ತಕ್ಷಣವೇ ಅಳಿಸಿ.

– ಫೋನ್ ಮೂಲಕ ನಿಮ್ಮ ಬ್ಯಾಂಕ್ ಖಾತೆಯ ಮಾಹಿತಿಯನ್ನು ಅವರಿಗೆ ಎಂದಿಗೂ ನೀಡಬೇಡಿ. ನಿಮ್ಮ ಖಾತೆ ಸಂಖ್ಯೆ, IFSC ಕೋಡ್ ಮತ್ತು ಪಾಸ್‌ವರ್ಡ್ ಅನ್ನು ಒಳಗೊಂಡಿರುವ ನಿಮ್ಮ ಬ್ಯಾಂಕ್ ರುಜುವಾತುಗಳನ್ನು ನೀವು ಮಾತ್ರ ತಿಳಿದಿರಬೇಕು.

– ಯಾವುದೇ ಖಾತೆಯ ವಹಿವಾಟಿಗಾಗಿ ನೀವು ಸ್ವೀಕರಿಸುವ ಯಾವುದೇ OTP ಕೋಡ್‌ಗಳನ್ನು ಬೇರೆಯವರಿಗೆ ನೀಡಬೇಡಿ.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.