ಪಾಕ್‌ ಕದನ ವಿರಾಮ ಕೋರಿಕೆಯಲ್ಲಿ ವಿಶ್ವಾಸಾರ್ಹತೆ ಇಲ್ಲ: ಬಿಎಸ್‌ಎಫ್


Team Udayavani, Jun 13, 2018, 3:12 PM IST

loc-bsf-700.jpg

ಹೊಸದಿಲ್ಲಿ : ಪಾಕಿಸ್ಥಾನದ ಕದನ ವಿರಾಮ ಕೋರಿಕೆಯಲ್ಲಿ ಯಾವದೇ ವಿಶ್ವಾಸಾರ್ಹತೆ ಉಳಿದಿಲ್ಲ ಎಂದು ಬಿಎಸ್‌ಎಫ್ ಹೇಳಿದೆ.

ಈಚಿನ ತಿಂಗಳಲ್ಲಿ ಪಾಕ್‌ ಪಡೆ ಎರಡು ರೀತಿಯಲ್ಲಿ ವರ್ತಿಸುತ್ತಿವೆ. ಮೊದಲನೇಯದಾಗಿ ಅದು ಕದನ ವಿರಾಮ ಉಲ್ಲಂಘನೆ ಮಾಡಿ ಭಾರತೀಯ ಪಡೆಗಳಿಗೆ ಹಾನಿ ಉಂಟುಮಾಡುತ್ತಿದೆ. ಎರಡನೇಯದಾಗಿ ಭಾರತದ ತೀಕ್ಷ್ಣ ಪ್ರತ್ಯುತ್ತರಗಳಿಗೆ ತತ್ತರಗೊಂಡು ಕದನ ವಿರಾಮ ಕೋರಿಕೆಯನ್ನು ಮಂಡಿಸುತ್ತಿದೆ. ಇದು ನಿರಂತರ ಆವರ್ತನ ರೀತಿಯಲ್ಲಿ ನಡೆಯುತ್ತಿದೆ. ಹಾಗಾಗಿ ಬಿಎಸ್‌ಎಫ್ ಈಗ ಸಹನೆ ಕಳೆದುಕೊಳ್ಳುವಂತಾಗಿದೆ. ಪಾಕಿಸ್ಥಾನದ ಕದನ ವಿರಾಮ ಕೋರಿಕೆಯಲ್ಲಿ ಯಾವುದೇ ವಿಶ್ವಾರ್ಸಾಹತೆ ಈಗ ಉಳಿದಿಲ್ಲ ಎಂದು ಭಾರತೀಯ ಗಡಿ ರಕ್ಷಣಾ ಪಡೆ ಹೇಳಿದೆ.

ನಿನ್ನೆ ಮಂಗಳವಾರ ಪಾಕ್‌ ಪಡೆಗಳು ಕದನ ವಿರಾಮ ಉಲ್ಲಂಘನೆಗೈದು ಜಮ್ಮು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ನಡೆಸಿರುವ ಗುಂಡಿನ ದಾಳಿಗೆ ನಾಲ್ಕು ಬಿಎಸ್‌ಎಫ್ ಯೋಧರು ಹುತಾತ್ಮರಾಗಿದ್ದಾರೆ. 

ಈ ವರ್ಷದಲ್ಲಿ ಅನೇಕ ಬಾರಿ ಪಾಕ್‌ ಪಡೆಗಳು ಕದನ ವಿರಾಮ ಉಲ್ಲಂಘನೆ ಮಾಡಿವೆ. ಭಾರತದ ತೀಕ್ಷ್ಣ ಪ್ರತಿದಾಳಿಗೆ ಪಾಕ್‌ ಪಡೆಗಳು ತತ್ತರಗೊಂಡು ಅನಂತರ 2003ರ ಕದನ ವಿರಾಮ ಒಪ್ಪದಂಕ್ಕೆ ತಾನು ಬದ್ಧತೆ ತೋರುವುದಾಗಿ ಅದು ಹೇಳುತ್ತದೆ. 

“ಕದನ ವಿರಾಮ ನಿರ್ಧಾರವನ್ನು ಉಭಯ ಪಕ್ಷಗಳೂ ಗೌರವಿಸಬೇಕು; ನಾವು ಯಾವತ್ತೂ ಕದನ ವಿರಾಮದ ಪಾವಿತ್ರ್ಯವನ್ನು ಕಾಯ್ದುಕೊಂಡು ಬಂದಿದ್ದೇವೆ; ಆದರೆ ಪಾಕಿಸ್ಥಾನ ಪದೇ ಪದೇ ತನ್ನ ಹಳೇ ಚಾಳಿಯನ್ನು ಮುಂದುವರಿಸುತ್ತಿದೆ’ ಎಂದು ಕಮಲ್‌ನಾಥ್‌ ಚೌಬೇ (ಎಡಿಜಿ, ಬಿಎಸ್‌ಎಫ್, ಜಮ್ಮು ಫ್ರಾಂಟಿಯರ್‌) ಹೇಳಿದರು. 

ಎಲ್‌ಓಸಿಯಲ್ಲಿ ಭಾರತೀಯ ಪಡೆಗಳಿಗೆ ಮೂರು ಜವಾಬ್ದಾರಿಗಳಿವೆ : 1. ಗಡಿ ಕಣ್ಗಾವಲು, 2. ಗಡಿ ವಾಸಿ ಪೌರರ ರಕ್ಷಣೆ, 3. ಪಾಕ್‌ ಪಡೆಗಳ ದಾಳಿಗೆ ಪ್ರತ್ಯುತ್ತರ ನೀಡುವುದು. ಪಾಕಿಸ್ಥಾನ  ಗಡಿಯಲ್ಲಿನ ತನ್ನ ಕಾನೂನು ಬಾಹಿರ ವರ್ತನೆಯನ್ನು ಒಪ್ಪಿಕೊಳ್ಳುತ್ತಿಲ್ಲ. ಪಾಕಿಸ್ಥಾನ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇಂದು ಬುಧವಾರ ಅದು ಭಾರತದ ಪ್ರಭಾರ ಉಪ ಹೈಕಮಿಷನರ್‌ ಅವರನ್ನು ಕರೆಸಿಕೊಂಡು ಭಾರತವೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿದೆ ಎಂದು ದೂರಿದೆ. ಪಾಕಿಸ್ಥಾನದ ಇಂತಹ ನಿರಾಧಾರ ಆರೋಪಗಳ ಹೊರತಾಗಿಯೂ ಭಾರತೀಯ ಪಡೆಗಳು ಪಾಕ್‌ ದಾಳಿಗೆ ಪ್ರತ್ಯುತ್ತರ ನೀಡುವುದನ್ನು ಮಾತ್ರವೇ ಮುಂದುವರಿಸುತ್ತಿದೆ ಎಂದು ಚೌಬೇ ಹೇಳಿದರು. 

ಟಾಪ್ ನ್ಯೂಸ್

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.