ಸಾಕ್ಷ್ಯಾಧಾರ ಕೊರತೆ: ಗುಜರಾತ್ ಕೋಮು ದಳ್ಳುರಿ-17 ಜನರ ಸಾವಿನ ಪ್ರಕರಣ: 22 ಮಂದಿ ಖುಲಾಸೆ
ಎಂಟು ಮಂದಿ ಪ್ರಕರಣದ ವಿಚಾರಣಾ ಹಂತದಲ್ಲಿ ಕೊನೆಯುಸಿರೆಳೆದಿದ್ದಾರೆ
Team Udayavani, Jan 25, 2023, 1:39 PM IST
ಗೋಧ್ರಾ(ಗುಜರಾತ್): 2002ರ ಗೋಧ್ರೋತ್ತರ ಕೋಮು ದಳ್ಳುರಿ ಪ್ರಕರಣದಲ್ಲಿ ಮುಸ್ಲಿಂ ಕುಟುಂಬದ 17 ಮಂದಿಯನ್ನು ಸುಟ್ಟು ಹಾಕಿದ ಘಟನೆಗೆ ಸಂಬಂಧಿಸಿದಂತೆ ಗುಜರಾತ್ ನ ಪಂಚಮಹಲ್ ಜಿಲ್ಲೆಯ ಹಲೋಲ್ ನ್ಯಾಯಾಲಯ 22 ಮಂದಿಯನ್ನು ಬುಧವಾರ (ಜನವರಿ 25) ಖುಲಾಸೆಗೊಳಿಸಿದೆ.
ಇದನ್ನೂ ಓದಿ:ರೋರಿಂಗ್ ಸ್ಟಾರ್ ʼಬಘೀರʼಕ್ಕಾಗಿ ಸೂಪರ್ ಕಾಪ್ ಆದ ಫಹಾದ್ ಫಾಸಿಲ್
2002ರ ಫೆಬ್ರವರಿ 28ರಂದು ನಡೆದ ಗೋಧ್ರೋತ್ತರ ಕೋಮು ದಳ್ಳುರಿಯಲ್ಲಿ ಮುಸ್ಲಿಂ ಕುಟುಂಬದ ಇಬ್ಬರು ಮಕ್ಕಳು ಸೇರಿದಂತೆ 17 ಮಂದಿಯನ್ನು ಸಾಕ್ಷ್ಯ ನಾಶದ ಉದ್ದೇಶದಲ್ಲಿ ಸುಟ್ಟು ಹಾಕಲಾಗಿತ್ತು ಎಂದು ಪ್ರಾಸಿಕ್ಯೂಷನ್ ಕೋರ್ಟ್ ಗೆ ತಿಳಿಸಿದೆ.
ಪ್ರಕರಣದ ಎಲ್ಲಾ 22 ಆರೋಪಿಗಳನ್ನು ಹೆಚ್ಚುವರಿ ಸೆಷನ್ಸ್ ಜಡ್ಜ್ ಹರ್ಷ ತ್ರಿವೇದಿ ಸಾಕ್ಷ್ಯಾಧಾರದ ಕೊರತೆ ಹಿನ್ನೆಲೆಯಲ್ಲಿ ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ. ಇದರಲ್ಲಿ ಎಂಟು ಮಂದಿ ಪ್ರಕರಣದ ವಿಚಾರಣಾ ಹಂತದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ವಕೀಲ ಗೋಪಾಲ್ ಸಿನ್ನಾ ಸೋಳಂಕಿ ತಿಳಿಸಿದ್ದಾರೆ.
2002ರ ಫೆಬ್ರವರಿ 27ರಂದು ಪಂಚಮಹಲ್ ಜಿಲ್ಲೆಯ ಗೋಧ್ರಾ ನಗರದ ಸಮೀಪ ಸಾಬರ್ ಮತಿ ಎಕ್ಸ್ ಪ್ರೆಸ್ ರೈಲಿನ ಬೋಗಿಯೊಂದಕ್ಕೆ ಬೆಂಕಿ ಹಚ್ಚಿದ್ದ ಪರಿಣಾಮ 59 ಮಂದಿ ಕರಸೇವಕರು ಜೀವಂತವಾಗಿ ದಹನವಾಗಿದ್ದರು. ಈ ಘಟನೆ ಬಳಿಕ ಗುಜರಾತ್ ನ ಹಲವೆಡೆ ಕೋಮು ದಳ್ಳುರಿ ಭುಗಿಲೆದ್ದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ