ಎಷ್ಟು ಜನರನ್ನು ಬಂಧಿಸಿದ್ದೀರಿ?: ಉತ್ತರಪ್ರದೇಶ ಸರಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆ
Team Udayavani, Oct 8, 2021, 6:40 AM IST
ಲಕ್ನೋ/ಹೊಸದಿಲ್ಲಿ: “ಲಖೀಂಪುರ ಖೇರಿಯಲ್ಲಿ 8 ಮಂದಿ ಸಾವಿಗೀಡಾಗಿ 4 ದಿನಗಳು ಕಳೆದವು. ನೀವು ಎಷ್ಟು ಮಂದಿಯನ್ನು ಬಂಧಿಸಿದ್ದೀರಿ? ಯಾರ ವಿರುದ್ಧ ಎಫ್ಐಆರ್ ದಾಖಲಿಸಿದ್ದೀರಿ?’
ಇದು ಉತ್ತರಪ್ರದೇಶ ಸರಕಾರಕ್ಕೆ ಗುರುವಾರ ಸುಪ್ರೀಂ ಕೋರ್ಟ್ ಕೇಳಿರುವ ಪ್ರಶ್ನೆ. ಲಖೀಂಪುರ ಘರ್ಷಣೆಗೆ ಸಂಬಂಧಿಸಿದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಂಡ ಸಿಜೆಐ ಎನ್.ವಿ. ರಮಣ ನೇತೃತ್ವದ ನ್ಯಾಯಪೀಠ, “ಲಖೀಂಪುರ ಘಟನೆಯು ಅತ್ಯಂತ ದುರದೃಷ್ಟಕರ. ನಾಳೆಯೇ (ಶುಕ್ರವಾರ) ನಮಗೆ ಈ ಬಗ್ಗೆ ಸ್ಥಿತಿಗತಿ ವರದಿ ಸಲ್ಲಿಸಬೇಕು. ಹತ್ಯೆಗೀಡಾದ 8 ಮಂದಿ ಯಾರು? ಯಾರ ವಿರುದ್ಧ
ಎಫ್ಐಆರ್ ದಾಖಲಾಗಿದೆ? ಎಷ್ಟು ಮಂದಿಯನ್ನು ಬಂಧಿಸಿದ್ದೀರಿ ಎಂಬೆಲ್ಲ ವಿವರವನ್ನೂ ನಮಗೆ ನೀಡಬೇಕು’ ಎಂದು ಸೂಚಿಸಿತು.
“ವಿಚಾರಣೆ ವೇಳೆ ನಮಗೆ ಬಂದಿರುವ ಮಾಹಿತಿ ಪ್ರಕಾರ, ಮೃತ ವ್ಯಕ್ತಿಯೊಬ್ಬರ ತಾಯಿಯು ತನ್ನ ಮಗನನ್ನು ಕಳೆದುಕೊಂಡು ಆಘಾತಕ್ಕೀಡಾಗಿ ಆಸ್ಪತ್ರೆ ಸೇರಿದ್ದಾರೆ. ಅವರಿಗೆ ಉ.ಪ್ರದೇಶ ಸರಕಾರ ಕೂಡಲೇ ವೈದ್ಯಕೀಯ ಚಿಕಿತ್ಸೆಗೆ ನೆರವಾಗಬೇಕು’ ಎಂದು ನ್ಯಾಯಪೀಠ ಹೇಳಿದೆ.
ಇಬ್ಬರು ವಶಕ್ಕೆ: ಸುಪ್ರೀಂ ಕೋರ್ಟ್ ನಿರ್ದೇಶನದ ಬೆನ್ನಲ್ಲೇ ಉತ್ತರಪ್ರದೇಶ ಪೊಲೀಸರು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಆದರೆ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಷ್ ಮಿಶ್ರಾ ತಲೆಮರೆಸಿಕೊಂಡಿದ್ದಾರೆ. ತನಿಖೆಗೆ ಹಾಜರಾಗುವಂತೆ ಅವರಿಗೆ ಸಮನ್ಸ್ ಜಾರಿ ಮಾಡಲಾಗಿದೆ. ಸಮನ್ಸ್ಗೆ ಪ್ರತಿಕ್ರಿಯಿಸದಿದ್ದರೆ, ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ಐಜಿಪಿ ಲಕ್ಷ್ಮೀ ಸಿಂಗ್ ಹೇಳಿದ್ದಾರೆ. ಜತೆಗೆ ಆಶಿಷ್ ಮಿಶ್ರಾಗೆ ಕಳುಹಿಸಲಾಗಿರುವ ಸಮನ್ಸ್ಗೆ ಯಾವುದೇ ಕಾಲಮಿತಿ ಹೇರಲಾಗಿಲ್ಲ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ. ಜತೆಗೆ ವಶಕ್ಕೆ ಪಡೆಯಲಾದ ಇಬ್ಬರು ಆರೋಪಿಗಳ ಕುರಿತು ಮಾಹಿತಿಯನ್ನೂ ಅವರು ನೀಡಿಲ್ಲ.
ಹರಿಯಾಣದಲ್ಲಿ ರೈತನಿಗೆ ಗಾಯ: ಹರಿಯಾಣದ ಅಂಬಾಲಾದಲ್ಲಿ ಗುರುವಾರ ಕೃಷಿ ಕಾಯ್ದೆ ವಿರುದ್ಧ ಪ್ರತಿಭಟಿಸುತ್ತಿರುವಾಗ ಬಿಜೆಪಿ ನಾಯಕರೊಬ್ಬರ ಬೆಂಗಾವಲು ಪಡೆಯ ವಾಹನ ಢಿಕ್ಕಿ ಹೊಡೆದು ರೈತರೊಬ್ಬರು ಗಾಯಗೊಂಡಿದ್ದಾರೆ. ಈ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತನಿಖಾ ಆಯೋಗ ರಚನೆ: ಲಖೀಂಪುರ ಘಟನೆಯ ತನಿಖೆಗಾಗಿ ಉ.ಪ್ರದೇಶ ಸರಕಾರ ಗುರುವಾರ ಏಕಸದಸ್ಯ ನ್ಯಾಯಾಂಗ ಆಯೋಗವನ್ನು ರಚಿಸಿದೆ. ಅಲಹಾಬಾದ್ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿ ಪ್ರದೀಪ್ ಕುಮಾರ್ ಶ್ರೀವಾಸ್ತವ ಅವರು ಈ ಆಯೋಗದ ನೇತೃತ್ವ ವಹಿಸಿದ್ದಾರೆ. ಇದೇ ವೇಳೆ, “ಪ್ರಕರಣದ ತನಿಖೆಯನ್ನು ನಿವೃತ್ತ ನ್ಯಾಯಮೂರ್ತಿಯ ಬದಲಿಗೆ ಸುಪ್ರೀಂ ಕೋರ್ಟ್ನ ಹಾಲಿ ನ್ಯಾಯಮೂರ್ತಿ ನಡೆಸಬೇಕು’ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ಆಗ್ರಹಿಸಿದ್ದಾರೆ.
ವಿಪಕ್ಷಗಳ ಕೆಲವು ನಾಯಕರು ದೇಶದಲ್ಲಿ ಹಿಂಸೆ ಮತ್ತು ದ್ವೇಷದ ವಾತಾವರಣ ಸೃಷ್ಟಿಸುತ್ತಿದ್ದಾರೆ. ಲಖೀಂಪುರದಲ್ಲಿ ನಡೆದ ಘಟನೆ ಖಂಡನೀಯ. ಈ ಕುರಿತು ತನಿಖೆಗೆ ಆಯೋಗ ರಚಿಸಿರುವ ಉತ್ತರ ಪ್ರದೇಶ ಸರಕಾರದ ಕ್ರಮವನ್ನು ಶ್ಲಾಘಿಸುತ್ತೇನೆ.-ಇಂದ್ರೇಶ್ ಕುಮಾರ್, ಆರೆಸ್ಸೆಸ್ ಹಿರಿಯ ನಾಯಕ
ಲಖೀಂಪುರದ ವೀಡಿಯೋ ಸ್ಫಟಿಕದಷ್ಟೇ ಸ್ಪಷ್ಟವಾಗಿದೆ. ಪ್ರತಿಭಟನಕಾರರನ್ನು ಹತ್ಯೆಯ ಮೂಲಕ ಮೌನವಾಗಿಸಲಾಗದು. ಪ್ರತಿಯೊಬ್ಬ ರೈತನ ಮನಸ್ಸಿಗೆ ಕ್ರೌರ್ಯ ಹಾಗೂ ಆಕ್ರೋಶದ ಸಂದೇಶ ರವಾನೆಯಾಗುವ ಮನ್ನ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು.– ವರುಣ್ ಗಾಂಧಿ, ಬಿಜೆಪಿ ಸಂಸದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?