ಲಖೀಂಪುರ್ ರೈತರ ಹತ್ಯೆ ಖಂಡನೀಯ: ಸಚಿವೆ ನಿರ್ಮಲಾ ಸೀತಾರಾಮನ್
Team Udayavani, Oct 13, 2021, 5:06 PM IST
ಬೋಸ್ಟನ್: ಲಖೀಂಪುರ್ ಖೇರಿ ಹಿಂಸಾಚಾರ ಘಟನೆ ಖಂಡನೀಯ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಅಮೆರಿಕಾದ ಪ್ರವಾಸದಲ್ಲಿರುವ ಅವರು ಮಂಗಳವಾರ ಹಾರ್ವರ್ಡ್ ಕೆನಡಿ ಶಾಲೆಯಲ್ಲಿ ನಡೆದ ಸಂವಾದದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಲಖೀಂಪುರ್ ಮಾತ್ರವಲ್ಲದೇ, ಭಾರತದ ಇತರ ಭಾಗಗಳಲ್ಲಿ ಇಂತಹ ಘಟನೆಗಳು ನಡೆಯುತ್ತವೆ. ಆದರೆ ಅದ್ಯಾವುದು ಇಷ್ಟರ ಮಟ್ಟಿಗೆ ಗಮನ ಸೆಳೆದಿಲ್ಲ. ಉತ್ತರ ಪ್ರದೇಶದಲ್ಲಿ ಬಿಜೆಪಿ ಸರಕಾರ ಅಸ್ತಿತ್ವದಲ್ಲಿರುವುದರಿಂದ ಈ ಘಟನೆ ಹೆಚ್ಚು ಸುದ್ದಿಯಾಗುತ್ತಿದೆ ಎಂದು ಉತ್ತರಿಸಿದರು.
ಪ್ರಧಾನ ಮಂತ್ರಿ ಹಾಗೂ ಹಿರಿಯ ಮಂತ್ರಿಗಳು ಯಾಕೆ ಈ ಬಗ್ಗೆ ಧ್ವನಿ ಎತ್ತುತ್ತಿಲ್ಲ? ಯಾಕೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಮಾಧ್ಯಮಗಳ ಪ್ರಶ್ನೆಗೆ, ಇಂತಹ ಹಿಂಸಾಚಾರ ಕೇವಲ ಒಂದು ಪ್ರದೇಶದಲ್ಲಿ ಮಾತ್ರ ನಡೆಯುವುದಲ್ಲ, ಇತರ ಭಾಗಗಳಲ್ಲೂ ನಡೆಯುತ್ತದೆ. ಇದು ನಿಜಕ್ಕೂ ಖಂಡನೀಯ. ಇತರ ಘಟನೆಗಳ ಬಗ್ಗೆಯೂ ಕಾಳಜಿ ಇದೆ ಎಂದರು.
ಭಾರತದಲ್ಲಿ ಇಂತಹ ಘಟನೆಗಳು ನಡೆಯುತ್ತಿರುತ್ತವೆ. ಆದರೆ ಬಿಜೆಪಿ ಸರಕಾರ ಅಸ್ತಿತ್ವ ಬಂದಾಗ ಅದು ಹೆಚ್ಚು ಸುದ್ದಿಯಾಗುತ್ತವೆ. ಅರ್ಥಶಾಸ್ತ್ರಜ್ಞ ಡಾ ಅಮರ್ತ್ಯ ಸೇನ್ ಅಂತವರಿಗೆ ಭಾರತದ ಬಗ್ಗೆ ಚೆನ್ನಾಗಿ ಗೊತ್ತಿದೆ. ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ನಡೆದರೆ ಅದನ್ನು ನಮ್ಮ ಮೇಲೆ ಹೇರುತ್ತಾರೆ ಎಂದು ಕಟುವಾಗಿ ಪ್ರತಿಕ್ರಿಯಿಸಿದರು.
ಇದು ನಮ್ಮ ಪ್ರಧಾನಿ ಹಾಗೂ ಪಕ್ಷದ ರಕ್ಷಣೆಯ ವಿಚಾರವಲ್ಲ. ಇದು ದೇಶದ ರಕ್ಷಣೆಯಾಗಿದೆ. ನಾನು ದೇಶದ ಪರವಾಗಿ ಮಾತನಾಡುತ್ತೇನೆ. ನಾನು ನ್ಯಾಯಕ್ಕಾಗಿ ಮಾತನಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
250 km per hour; ಶೀಘ್ರದಲ್ಲೇ ಬುಲೆಟ್ ರೈಲಿನಲ್ಲೂ ಆತ್ಮನಿರ್ಭರತೆ!
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!