ಹೃಷೀಕೇಶದ ಐಕಾನಿಕ್ ತೂಗು ಸೇತುವೆ ಲಕ್ಷ್ಮಣ್ ಝೂಲಾ ವಾಹನ ಸಂಚಾರಕ್ಕೆ ಬಂದ್
Team Udayavani, Jul 12, 2019, 3:38 PM IST
ಡೆಹರಾಡೂನ್ : ಹೃಷೀಕೇಶದಲ್ಲಿ ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಐಕಾನಿಕ್ ತೂಗು ಸೇತುವೆ ಲಕ್ಷಣ್ ಝೂಲಾ ವನ್ನು ಇಂದು ಶುಕ್ರವಾರ ವಾಹನ ಸಂಚಾರಕ್ಕೆ ಮುಚ್ಚಲಾಗಿದೆ.
ಸೇತುವೆಯು ಹೆಚ್ಚಿನ ಭಾರವನ್ನು ತಾಳಿಕೊಳ್ಳದೆಂದು ಪರಿಣತರು ಹೇಳಿರುವ ಪ್ರಕಾರ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ವರದಿಗಳು ತಿಳಿಸಿವೆ.
ಲಕ್ಷ್ಮಣ್ ಝೂಲಾದ ಬಹು ಭಾಗ ದುರ್ಬಲವಾಗಿದ್ದು ಕುಸಿಯುವ ಭೀತಿ ಎದುರಾಗಿದೆ ಎಂದು ಪರಿಣತರು ಹೇಳಿದ್ದಾರೆ ಎಂದು ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಓಂ ಪ್ರಕಾಶ್ ಹೇಳಿದ್ದಾರೆ.
ಪರಿಣತರ ಅಭಿಪ್ರಾಯವನ್ನು ಮನ್ನಿಸಿ ಸೇತುವೆಯನ್ನು ವಾಹನ ಸಂಚಾರಕ್ಕೆ ಮಾತ್ರವಲ್ಲದೆ ಪಾದಚಾರಿಗಳ ಸಂಚಾರಕ್ಕೂ ಮುಚ್ಚಲಾಗಿದೆ ಎಂದವರು ಹೇಳಿದರು.
ಈಚಿನ ವರ್ಷಗಳಲ್ಲಿ ಲಕ್ಷ್ಮಣ್ ಝೂಲಾ ದಲ್ಲಿ ವಾಹನ ಮತ್ತು ಜನ ಸಂಚಾರ ಅಭೂತಪೂರ್ವವಾಗಿ ಹೆಚ್ಚಿದೆ. ಪರಿಣಾಮವಾಗಿ ಝೂಲಾದ ಟವರ್ ಗಳು ಒಂದು ಕಡೆಗೆ ವಾಲಿದಂತೆ ಕಂಡು ಬರುತ್ತಿವೆ ಎಂದು ಓಂ ಪ್ರಕಾಶ್ ಹೇಳಿದರು.
ಯೋಗ ಮತ್ತು ಧ್ಯಾನದ ಪ್ರಖ್ಯಾತ ಕೇಂದ್ರವಾಗಿರುವ ಹೃಷೀಕೇಶದಲ್ಲಿ 1923ರಲ್ಲಿ ಗಂಗಾ ನದಿಗೆ ಅಡ್ಡಲಾಗಿ ಲಕ್ಷ್ಮಣ್ ಝೂಲಾ ವನ್ನು ನಿರ್ಮಿಸಲಾಗಿದ್ದು ಇದು ಉತ್ತರಾಖಂಡ ನಗರದ ಪ್ರಸಿದ್ಧ ಲ್ಯಾಂಡ್ ಮ್ಯಾರ್ಕ್ ಎನಿಸಿಕೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM Modi:ನನ್ನ 90 ಸೆಕೆಂಡ್ ಭಾಷಣ ಕಾಂಗ್ರೆಸ್, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
MUST WATCH
ಹೊಸ ಸೇರ್ಪಡೆ
ಕಾಂಗ್ರೆಸ್ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ
ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?
Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ
Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ
Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ