ಲಾಲು ಪುತ್ರಿ ಮನೆಗೆ ಇ.ಡಿ. ದಾಳಿ
Team Udayavani, Jul 9, 2017, 3:25 AM IST
ಹೊಸದಿಲ್ಲಿ: ಭ್ರಷ್ಟಾಚಾರ ಪ್ರಕರಣದಲ್ಲಿ ಆರ್ಜೆಡಿ ನಾಯಕ ಲಾಲು ಕುಟುಂಬದ ಮೇಲೆ ಸಿಬಿಐ ದಾಳಿ ನಡೆಸಿದ ಬೆನ್ನಲ್ಲೇ ಶನಿವಾರ ಲಾಲು ಪುತ್ರಿ ಮಿಸಾ ಭಾರ್ತಿ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಣಕಾಸು ಅವ್ಯವಹಾರಕ್ಕೆ ಸಂಬಂಧಿಸಿ ಮಿಸಾ ಭಾರ್ತಿ ಹಾಗೂ ಪತಿ ಶೈಲೇಶ್ ಕುಮಾರ್ ಅವರಿಗೆ ಸೇರಿದ ಮೂರು ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಅಷ್ಟೇ ಅಲ್ಲ, ಶೈಲೇಶ್ ಅವರನ್ನು ಇ.ಡಿ. ಅಧಿಕಾರಿಗಳು ವಿಚಾರಣೆಗೆಂದು ಕರೆದೊಯ್ದಿದ್ದಾರೆ ಎಂದೂ ಹೇಳಲಾಗಿದೆ.
ದಿಲ್ಲಿಯಲ್ಲಿರುವ ಟೋರ್ನಿ, ಬಿಜ್ವಾಸನ್ ಮತ್ತು ಸೈನಿಕ್ ಫಾರ್ಮ್ಹೌಸ್ಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, ಕೆಲವು ದಾಖಲೆ ಪತ್ರಗಳು, ಫೋನ್ಗಳು ಸೇರಿದಂತೆ ಎಲೆಕ್ಟ್ರಾನಿಕ್ ಸಾಧನಗಳನ್ನು ವಶಕ್ಕೆ ಪಡೆದುಕೊಂಡಿದ್ದು, ದಾಖಲೆಗಳ ಕುರಿತು ಕೆಲವು ಪ್ರಶ್ನೆಗಳನ್ನೂ ಕೇಳಿದ್ದಾರೆ. ಅಧಿಕೃತ ಸಮನ್ಸ್ ಜಾರಿ ಮಾಡಿದ ಬಳಿಕ ಇಬ್ಬರನ್ನೂ ವಿಸ್ತೃತ ವಿಚಾರಣೆಗೆ ಒಳಪಡಿಸುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ದೆಹಲಿಯ ಸಹೋದರರಿಬ್ಬರ 8 ಸಾವಿರ ಕೋಟಿ ಅವ್ಯವಹಾರ ಸಂಬಂಧ ಈ ದಾಳಿ ನಡೆದಿದೆೆ. ಈ ಸಹೋದರರಿಗೂ ಲಾಲು ಕುಟುಂಬದ ಸಂಸ್ಥೆಗೂ ನಂಟಿರುವುದು ಪತ್ತೆಯಾಗಿದೆ.
ಲಾಲುಗೆ ಕಾಂಗ್ರೆಸ್ ಬೆಂಬಲ: ಏತನ್ಮಧ್ಯೆ, ಶನಿವಾರ ಕಾಂಗ್ರೆಸ್ನ ಕೆಲವು ನಾಯಕರು ಲಾಲು ಮನೆಗೆ ಭೇಟಿ ನೀಡಿ, ಬೆಂಬಲ ಸೂಚಿಸಿದ್ದಾರೆ. ಮಿತ್ರಪಕ್ಷ ಜೆಡಿಯು ಮಾತ್ರ ಈ ವಿಚಾರದಲ್ಲಿ ಮೌನ ವಹಿಸಿದೆ. ಇದೇ ವೇಳೆ, ಸಿಬಿಐ ದಾಳಿ ವಿಚಾರವನ್ನು ಸರಕಾರಕ್ಕೆ ಮೊದಲೇ ತಿಳಿಸಲಾಗಿತ್ತು ಎಂಬ ವರದಿಯನ್ನು ಸರಕಾರ ಅಲ್ಲಗಳೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ