ರಾಬ್ರಿ ಮನೆ ಮುಂದೆ ಸಿಎಂ ನಿತೀಶ್ ಕುಮಾರ್ ಗೆ No Entry ಬೋರ್ಡ್ !
Team Udayavani, Jul 2, 2018, 3:22 PM IST
ಪಟ್ನಾ : “ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರಿಗೆ ನನ್ನ ತಾಯಿ ಮನೆ ಮುಂದೆ ನೋ ಎಂಟ್ರಿ ಬೋರ್ಡ್ ಹಾಕಲು ನಾನು ಬಯಸಿದ್ದೇನೆ’ ಎಂದು ಆರ್ಜೆಡಿ ನಾಯಕ ತೇಜ್ ಪ್ರತಾಪ್ ಯಾದವ್ ಹೇಳಿದ್ದಾರೆ.
ನಿತೀಶ್ ಕುಮಾರ್ ಅವರಿಗೆ ಮಹಾ ಘಟಬಂಧನಕ್ಕೆ ಮರಳುವುದಕ್ಕೆ ಬಾಗಿಲು ಮುಚ್ಚಲಾಗಿರುವಂತೆ ನನ್ನ ತಾಯಿಯ ಮನೆಗೂ ಅವರಿಗೆ ಪ್ರವೇಶ ಇಲ್ಲ ಎನ್ನುವ ನೋ ಎಂಟ್ರಿ ಬೋರ್ಡ್ ಹಾಕಲು ನಾನು ಬಯಸಿದ್ದೇನೆ ಎಂದು ಆರ್ಜೆಡಿ ನಾಯಕ ಹೇಳಿರುವ ಮಾತಿಗೆ ಪ್ರತಿಕ್ರಿಯೆಯಾಗಿ ಜೆಡಿಯು ವಕ್ತಾರ ಮತ್ತು ವಿಧಾನ ಪರಿಷತ್ ಸದಸ್ಯರಾಗಿರುವ ನೀರಜ್ ಕುಮಾರ್ ಅವರು, “ಸಿಬಿಐ, ಆದಾಯ ತೆರಿಗೆ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಆಗೀಗ ಎಂಬಂತೆ ದಾಳಿ ನಡೆಸುವ ಮನೆಯನ್ನು ಪ್ರವೇಶಿಸಲು ಯಾರು ತಾನೆ ಬಯಸುತ್ತಾರೆ’ ಎಂದು ವ್ಯಂಗ್ಯವಾಡಿದ್ದಾರೆ.
ಲಾಲು ಪುತ್ರ ತೇಜ್ ಪ್ರತಾಪ್ ಯಾದವ್ ಅವರ ತಾಯಿ, ಬಿಹಾರದ ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ ಅವರಿಗೆ ನೀಡಲಾಗಿರುವ ಸರಕಾರಿ ಬಂಗ್ಲೆಯು ಸಿಎಂ ನಿವಾಸವಿರುವ ನಂ.1, ಆ್ಯನೇ ಮಾರ್ಗದಿಂದ ಕೂಗಳತೆಯ ದೂರದಲ್ಲಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು