ಕದನ ವಿರಾಮ ಉಲ್ಲಂಘಿಸಿ ಪಾಕ್ ನಿಂದ ಗುಂಡಿನ ದಾಳಿ: ಭಾರತದ ಯೋಧ ಹುತಾತ್ಮ
ಭಾರತೀಯ ಸೇನಾ ಪಡೆ ತಕ್ಕ ಪ್ರತಿದಾಳಿ ನಡೆಸಿರುವುದಾಗಿ ಮೂಲಗಳು ತಿಳಿಸಿವೆ. ಪಾ
Team Udayavani, Oct 1, 2020, 10:32 AM IST
ಶ್ರೀನಗರ:ಜಮ್ಮು-ಕಾಶ್ಮೀರದ ಕೃಷ್ಣಾ ಘಾಟಿ ಸೆಕ್ಟರ್ ಪ್ರದೇಶದಲ್ಲಿ ಪಾಕಿಸ್ತಾನ ಸೇನಾ ಪಡೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತೀಯ ಯೋಧ ಹುತಾತ್ಮರಾದ ಘಟನೆ ನಡೆದಿದೆ.
ವರದಿಯ ಪ್ರಕಾರ, ಪೂಂಚ್ ಜಿಲ್ಲೆಯ ಕೃಷ್ಣಾ ಘಾಟಿ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘಿಸಿದ ಘಟನೆ ಬುಧವಾರ ತಡರಾತ್ರಿ ನಡೆದಿತ್ತು. ಪಾಕಿಸ್ತಾನ ಸೇನಾ ಪಡೆ ಪ್ರಚೋದನಕಾರಿಯಾಗಿ ಹಾಗೂ ನಿರಂತರವಾಗಿ ಗುಂಡಿನ ದಾಳಿ ನಡೆಸಿರುವುದಾಗಿ ಹೇಳಿದೆ.
ಪಾಕ್ ಸೇನೆಯ ಪ್ರಚೋನಕಾರಿ ದಾಳಿಗೆ ಭಾರತೀಯ ಸೇನಾ ಪಡೆ ತಕ್ಕ ಪ್ರತಿದಾಳಿ ನಡೆಸಿರುವುದಾಗಿ ಮೂಲಗಳು ತಿಳಿಸಿವೆ. ಪಾಕ್ ಪಡೆಯ ಗುಂಡಿನ ದಾಳಿಗೆ ಲ್ಯಾನ್ಸ್ ನಾಯಕ್ ಕರ್ನೈಲ್ ಸಿಂಗ್ ಹುತಾತ್ಮರಾಗಿರುವುದಾಗಿ ಲೆಫ್ಟಿನೆಂಟ್ ಕರ್ನಲ್ ದೇವೇಂದ್ರ ಆನಂದ್ ತಿಳಿಸಿದ್ದಾರೆ.
ಹುತಾತ್ಮ ಲ್ಯಾನ್ಸ್ ನಾಯಕ್ ಕರ್ನೈಲ್ ಸಿಂಗ್ ಅವರ ಪಾರ್ಥಿವ ಶರೀರಕ್ಕೆ ಜನರಲ್ ಕಮಾಂಡಿಂಗ್ ಅಧಿಕಾರಿಗಳು ಹಾಗೂ ಎಲ್ಲಾ ರಾಂಕ್ ಶ್ರೇಣಿಯ ಅಧಿಕಾರಿಗಳು ಗೌರವ ಸಲ್ಲಿಸಿದ್ದು, ಕುಟುಂಬ ಸದಸ್ಯರಿಗೆ ಸಾಂತ್ವಾನ ಹೇಳಿರುವುದಾಗಿ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brahmos; ಫಿಲಿಪ್ಪೀನ್ಸ್ಗೆ ಬ್ರಹ್ಮೋಸ್: ಭಾರತದ ಮೊದಲ ರಫ್ತು
EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!
Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು