ವಯನಾಡು ಭೂಕುಸಿತಕ್ಕೆ 40 ಸಾವು ಶಂಕೆ
Team Udayavani, Aug 8, 2019, 11:17 PM IST
ತಿರುವನಂತಪುರ/ನವದೆಹಲಿ: ದೇವರ ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿದೆ. ವಯನಾಡ್ ಜಿಲ್ಲೆಯ ಮೆಪ್ಪಾಡಿ ಪುತುಮಾಲಾ ಎಂಬಲ್ಲಿ ಗುರುವಾರ ಸಂಜೆ ಉಂಟಾದ ಭೂಕುಸಿತದಲ್ಲಿ 40 ಜನರು ಸಿಲುಕಿದ್ದು, ಅವರಲ್ಲಿ ಮೂವರನ್ನು ರಕ್ಷಿಸಲಾಗಿದೆ. ದೇಗುಲ, ಮಸೀದಿ, ಚರ್ಚ್, ಪ್ಲಾಂಟೇಷನ್ ಕಂಪನಿಯ ನೌಕರರು ವಾಸಿಸುತ್ತಿದ್ದ ಮನೆಗಳ ಮೇಲೆ ಗುಡ್ಡ ಕುಸಿದ ಕಾರಣ ಈ ದುರಂತ ಸಂಭವಿಸಿದೆ.
ಕರ್ನಾಟಕದ ಮಡಿಕೇರಿಯಲ್ಲಿ ಭೂಮಿ ಕುಸಿದ ಮಾದರಿಯಲ್ಲಿಯೇ ಭೂಮಿ ಕುಸಿದಿರುವುದರ ಬಗ್ಗೆ ಮಲಯಾಳಂ ಸುದ್ದಿ ವಾಹಿನಿಗಳು ಕುಸಿತದ ದೃಶ್ಯಾವಳಿಗಳನ್ನು ಪ್ರಸಾರ ಮಾಡಿವೆ.
ರಕ್ಷಣೆ ಮತ್ತು ಪರಿಹಾರ ಕಾರ್ಯಾಚರಣೆ ಭರದಿಂದ ಸಾಗಿದೆ. ಕೇರಳದ ಇತರ ಭಾಗದಲ್ಲಿಯೂ ಉಂಟಾಗಿರುವ ಪ್ರವಾಹ ಸ್ಥಿತಿಯಿಂದಾಗಿ 9,500ಕ್ಕೂ ಅಧಿಕ ಮಂದಿಯನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ. ತಿರುವನಂತಪುರದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ. ಕೇರಳದಲ್ಲಿ ಮಳೆಯಿಂದಾಗಿ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ. ವಯನಾಡ್ನ ನಿಲಂಬೂರ್ ಪಟ್ಟಣ ನೀರಿನಲ್ಲಿ ಮಳುಗಡೆಯಾಗಿದೆ.
ಮಲಪ್ಪುರಂ, ಕಲ್ಲಿಕೋಟೆ, ವಯನಾಡ್ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ನಾಲ್ಕು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿ, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ದಳ (ಎನ್ಡಿಆರ್ಎಫ್), ಸೇನೆಯ ನೆರವನ್ನು ಕೇರಳ ಸರ್ಕಾರ ಕೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ